ಡಿ.10: ದುಬೈ ದಸರಾ- ದಸರಾ ಪೋಸ್ಟರ್‌ ಮತ್ತು ಜೆರ್ಸಿ ಅನಾವರಣ

ಹೆಸರಾಂತ ಕಲಾವಿದರಿಂದ ಸಂಗೀತ ಸಂಜೆ ಮೂಡಿಬರಲಿದೆ

Team Udayavani, Dec 9, 2023, 10:33 AM IST

ಡಿ.10: ದುಬೈ ದಸರಾ- ದಸರಾ ಪೋಸ್ಟರ್‌ ಮತ್ತು ಜೆರ್ಸಿ ಅನಾವರಣ

ಅಬುಧಾಬಿ: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಮ್ಮೆಯ ದುಬೈ ಕನ್ನಡ ಸಂಘವು ಆಯೋಜಿಸಿರುವ 6ನೇ ವರ್ಷದ ದುಬೈ ದಸರಾ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಕಾರ್ಯಕ್ರಮದ ಪೋಸ್ಟರ್‌ ಮತ್ತು ಜರ್ಸಿಯನ್ನು ಇತ್ತೀಚೆಗೆ ಯೂನಿಕ್‌ ವರ್ಲ್ಡ್ ಸೆಂಟರ್‌ನಲ್ಲಿ ಸಂಘದ ಪದಾಧಿಕಾರಿಗಳು ಮತ್ತು ದಸರಾ ಕಾರ್ಯಕ್ರಮಕ್ಕೆ ಸ್ವಯಂ ಸೇವಕರಾಗಿ ಸೇರಲು ಆಗಮಿಸಿದವರು ಜತೆ ಸೇರಿ ಬಿಡುಗಡೆಗೊಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷರಾದ ಹಾದಿಯ ಮಂಡ್ಯ ಅವರು ವಹಿಸಿಕೊಂಡಿದ್ದರು.

ಸಂಘದ ಸಮಿತಿ ಸದಸ್ಯರಾದ ವಿಷ್ಣುಮೂರ್ತಿ ಮೈಸೂರು ಅವರು ಸ್ವಯಂ ಸೇವಕರಾಗಲು ಆಗಮಿಸಿದವರಿಗೆ ಸ್ವಾಗತ ಕೋರಿದರು. ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುದೀಪ್‌ ದಾವಣಗೆರೆ, ಮುಖ್ಯ ಕಾರ್ಯದರ್ಶಿ ರಫೀಕಲಿ ಕೊಡಗು, ಸಮಿತಿ ಸದಸ್ಯರುಗಳಾದ ಅನಿತಾ ಬೆಂಗಳೂರು, ವರದರಾಜ್‌ ಕೋಲಾರ, ಅಕ್ರಮ್‌ ಕೊಡಗು, ನಜೀರ ಮಂಡ್ಯ, ಪ್ರತಾಪ್‌ ಮಡಿಕೇರಿ ಮುಂತಾದವರು ಉಪಸ್ಥಿತರಿದ್ದರು. ದಸರಾ ಕಾರ್ಯಕ್ರಮವು ಡಿ.10ರಂದು ಎಥಿಸಲಾತ್‌ ನ್ಪೋìಟ್ಸ್‌ ಅಕಾಡೆಮಿಯಲ್ಲಿ ಬೆಳಗ್ಗೆ ನಡೆಯಲಿದ್ದು ಸಂಜೆ ತಾಯ್ನಾಡಿನಿಂದ ಆಗಮಿಸುವ ಹೆಸರಾಂತ ಕಲಾವಿದರಿಂದ ಸಂಗೀತ ಸಂಜೆ ಮೂಡಿಬರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ
ದಸರಾ ಕಾರ್ಯಕ್ರಮದ ಕೇಂದ್ರಬಿಂದುವಾದ “ದುಬೈ ಕ್ರೀಡಾ ರತ್ನ ಪ್ರಶಸ್ತಿಯನ್ನು ಮಾಜಿ ಭಾರತೀಯ ವಿಶೇಷ ಚೇತನ ಕ್ರೀಡಾತಾರೆ ಡಾ| ಮಾಲತಿ ಹೊಳ್ಳ ಅವರಿಗೆ ಮತ್ತು ಭಾರತದ ಮಾಜಿ ಕ್ರಿಕೆಟ್‌ ಆಟಗಾರ ದೊಡ್ಡ ಗಣೇಶ್‌ ಅವರಿಗೆ ಪ್ರದಾನ ಮಾಡಲಾಗುವುದು. ಅಶ್ವಿ‌ನಿ ನಾಚಪ್ಪ, ಡಾ| ಸಿ.ಹೊನ್ನಪ್ಪ ಗೌಡ, ಎಸ್‌.ವಿ. ಸುನಿಲ್‌ ಈ ಪ್ರಶಸ್ತಿಯ ಪೂರ್ವ ಪುರಸ್ಕೃತರು.

ದುಬೈ ದಸರಾ ಪ್ರಯುಕ್ರ ವಿವಿಧ ಕ್ರೀಡೆಗಳನ್ನು ಆಯೋಜಿಸುವುದರ ಮೂಲಕ ಮಕ್ಕಳು, ಮಹಿಳೆಯರು ಮತ್ತು ಪುರುಷರ ಎಲ್ಲ ವಯಸ್ಕರಿಗೂ ಕ್ರೀಡಾ ರಂಜನೆಯ ಅವಕಾಶ ಮಾಡಿಕೊಟ್ಟಿದ್ದಾರೆ ಹಾಗೂ ಅಂತ್ಯಾಕ್ಷರಿ, ಕನ್ನಡ ರಸಪ್ರಶ್ನೆ, ಗೊಂಬೆ ಸ್ಪರ್ಧೆ, ಕವಿಗೋಷ್ಠಿ ಸಾಹಿತ್ಯಾಸಕ್ತರ ಮನ ತಣಿಸಲಿವೆ ಹಾಗೆ ರಂಗೋಲಿ ಸ್ಪರ್ಧೆ ಮತ್ತು ದಸರಾ ಗೊಂಬೆ ಸ್ಪರ್ಧೆ ಸಾಂಸ್ಕೃತಿಕ‌ ರಂಜನೆ ನೀಡಲಿದೆ.

ಡಿ.10ಎಂದು ದುಬೈನ ಎಟಿಸಲಾತ್‌ ಅಕಾಡೆಮಿಯಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಎಲ್ಲ ಕ್ರೀಡಾಪಟುಗಳು ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಸ್ಪರ್ಧಿಗಳು ಕಾತುರದಿಂದ ತಮ್ಮ ಪ್ರತಿಭೆಯನ್ನು ತೋರಲು ಕಾತುರರಾಗಿದ್ದಾರೆ. ಚಂದನವನದ ತಾರೆಗಳಾದ ಹೇಮಂತ್‌, ಹರ್ಷವರ್ಧನ್‌, ರಾಹುಲ್‌ ಡಿಟ್ಟೋ , ದಿವ್ಯಾ ಅವರುಗಳು ಸಂಗೀತ ಸಂಜೆ ಮೂಲಕ ರಂಜಿಸಲಿದ್ದಾರೆ. ದುಬೈಯ ರಾಜಮನೆತನದವರು ಅತಿಥಿಗಳಾಗಿ ಸಮಾರಂಭಕ್ಕೆ ಆಗಮಿಸಲು ಸಮ್ಮತಿಸಿ ತಮ್ಮ ಅಪೂರ್ವ ಬೆಂಬಲ ಸೂಚಿಸಿದ್ದಾರೆ.

ಸಭೆಯಲ್ಲಿ ಅಧ್ಯಕ್ಷ ಮಧು ದಾವಣಗೆರೆ, ಉಪಾಧ್ಯಕ್ಷೆ ಹಾದಿಯ ಮಂಡ್ಯ, ಮಮತಾ ಮೈಸೂರು, ಪಲ್ಲವಿ ದಾವಣಗೆರೆ, ವಿಷ್ಣುಮೂರ್ತಿ ಮೈಸೂರು, ಡಾ| ಸವಿತಾ ಮೈಸೂರು, ಶಂಕರ್‌ ಬೆಳಗಾವಿ, ಮೊಹಿದ್ದೀನ್‌ ಹುಬ್ಬಳ್ಳಿ, ವರದರಾಜ್‌ ಕೋಲಾರ , ಚೇತನ್‌ ಬೆಂಗಳೂರು, ಸ್ವಾತಿ ಚಿತ್ರದುರ್ಗ, ಹಾದಿ ಕುಂದಾಪುರ, ರಜಿನಿ ಬೆಂಗಳೂರು ಮತ್ತು ಉಪಸಮಿತಿ ಸದಸ್ಯರು ಉಪಸ್ಥಿತರಿದ್ದು ಈ ಕಾರ್ಯಕ್ರಮಕ್ಕೆ ಯುಎಇ ದೇಶದ ಎಲ್ಲ ಕನ್ನಡಿಗರಿಗೆ ಆತ್ಮೀಯ ಸ್ವಾಗತ ಕೋರಿದರು.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.