Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಸತ್ಯನಾರಾಯಣ ದೇವರ ಕಥೆಯ ಅನಂತರ ಮಹಾಮಂಗಳಾರತಿ ನಡೆಯಿತು.

Team Udayavani, Apr 27, 2024, 11:20 AM IST

Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಬಹ್ರೈನ್‌: ಇಲ್ಲಿನ ಅನಿವಾಸಿ ಬಿಲ್ಲವ ಸಮುದಾಯದ ಒಕ್ಕೂಟವಾದ ಬಹ್ರೈನ್‌ ಬಿಲ್ಲವಾಸ್‌ ಇತ್ತೀಚಿಗೆ ಇಲ್ಲಿನ ಮನಾಮದಲ್ಲಿರುವ ಕೃಷ್ಣ ದೇಗುಲದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದು ಸುಮಾರು 800 ಕ್ಕೂ ಹೆಚ್ಚು ಭಕ್ತರು ತನ್ಮಯತೆಯಿಂದ ಭಕ್ತಿಪರವಶರಾಗಿ ಪೂಜಾ ವಿಧಿ, ವಿಧಾನಗಳಲ್ಲಿ ಪಾಲ್ಗೊಂಡು ಶ್ರೀಸತ್ಯನಾರಾಯಣ ದೇವರ ಅನುಗ್ರಹಕ್ಕೆ ಪಾತ್ರರಾದರು.

ಹರೀಶ್‌ ಪೂಜಾರಿಯವರ ನೇತೃತ್ವದಲ್ಲಿ ಸಂಘಟನೆ ಇಪ್ಪತ್ತೂಂದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಅವಸರದಲ್ಲಿ ಸಂಘಟನೆಯ ಪ್ರಥಮ ಕಾರ್ಯಕ್ರಮವಾಗಿ ಈ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ಈ ಪೂಜಾ ಕೈಂಕರ್ಯವನ್ನು ನಡೆಸಿಕೊಡಲು ನಾಡಿನಿಂದ ದ್ವೀಪಕ್ಕೆ ವಿಶೇಷವಾಗಿ ಆಗಮಿಸಿದ್ದ ವೈದಿಕರಾದ ರಾಕೇಶ್‌ ಶಾಂತಿಯವರು ಪೂಜಾ ವಿಧಿ, ವಿಧಾನಗಳನ್ನು ಸಾಂಗವಾಗಿ ನೆರವೇರಿಸಿಕೊಟ್ಟರು.

ಪೂಜೆಯುದ್ದಕ್ಕೂ ಭಜನ ಮಂಡಳಿಯಿಂದ ಭಜನ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಾದ್ಯವ್ರಂದದೊಂದಿಗೆ ಸುಶ್ರಾವ್ಯವಾದ ಭಜನೆಗಳು ನೆರೆದ ಭಕ್ತರನ್ನು ಭಕ್ತಿಪರವಶರಾಗುವಂತೆ ಮಾಡಿತು. ಬಹ್ರೈನ್‌ ಬಿಲ್ಲವಾಸ್‌ನ ಅಧ್ಯಕ್ಷರಾದ ಹರೀಶ್‌ ಪೂಜಾರಿ ಹಾಗೂ ಆಡಳಿತ ಮಂಡಳಿಯ ಇತರ ಪದಾಧಿಕಾರಿಗಳು, ಬಿಲ್ಲವ ಬಾಂಧವರು ಮತ್ತು ಆಹ್ವಾನಿತ ಅತಿಥಿಗಳು ಸರ್ವರ ಪರವಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅನಂತರ ಸಂಕಲ್ಪದೊಂದಿಗೆ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಯಿತು. ಗಣಪತಿ ಪೂಜೆ, ಕಳಸ ಪೂಜೆ, ನವಗ್ರಹ ಪೂಜೆ, ಗುರು ಪೂಜೆ ಸತ್ಯನಾರಾಯಣ ದೇವರ ವೃತ ಕಲ್ಪೋಕ್ತಿ ಪೂಜೆ, ಭಜನೆ ಸಂಕೀರ್ತನೆ, ಸತ್ಯನಾರಾಯಣ ದೇವರ ಕಥೆಯ ಅನಂತರ ಮಹಾಮಂಗಳಾರತಿ ನಡೆಯಿತು.

ಬಹ್ರೈನ್‌ ಬಿಲ್ಲವಾಸ್‌ನ ನೂತನ ಅಧ್ಯಕ್ಷರಾದ ಹರೀಶ್‌ ಪೂಜಾರಿಯವರು ನೆರೆದ ಭಕ್ತರನ್ನು ಉದ್ದೇಶಿಸಿ ಮಾತನಾಡಿ, ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿ ಸಮುದಾಯದ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು. ವೈದಿಕರಾದ ರಾಕೇಶ್‌ ಶಾಂತಿಯವರನ್ನು ಇದೇ ಸಂದರ್ಭದಲ್ಲಿ ಶಾಲು ಹೊದಿಸಿ , ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಅಲ್ಲದೆ ನಿರ್ಗಮಿಸುವ ಪ್ರಧಾನ ಕಾರ್ಯದರ್ಶಿಗಳಾದ ರೂಪೇಶ್‌ ಸಾಲ್ಯಾನ್‌ ಹಾಗೂ ಭಕ್ತಿವೃಕ್ಷ ಭಜನ ಮಂಡಳಿಯನ್ನು ಸ್ಮರಣಿಕೆಯನ್ನು ನೀಡಿ ಸಮ್ಮಾನಿಸಲಾಯಿತು. ಅಲ್ಲದೆ ಉನ್ನತ ವ್ಯಾಸಂಗಕ್ಕಾಗಿ ತಾಯ್ನಾಡಿಗೆ ತೆರಳುತ್ತಿರುವ ಬಹ್ರೈನ್‌ ಬಿಲ್ಲವಾಸ್‌ನ ಸದಸ್ಯರುಗಳ ಮಕ್ಕಳನ್ನು ಉಡುಗೊರೆ ನೀಡಿ, ಶುಭ ಹಾರೈಸಿ ಬೀಳ್ಕೊಡಲಾಯಿತು.

ಬಹ್ರೈನ್‌ ಬಿಲ್ಲವಾಸ್‌ ಆಯೋಜಿಸಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಗೆ ದ್ವೀಪದ ಎಲ್ಲ ಸಮುದಾಯ ಮತ್ತು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು ಮಹಾಮಂಗಾಳಾರತಿಯ ಅನಂತರ ಭಕ್ತ ಸಮೂಹ ತೀರ್ಥ ಪ್ರಸಾದ, ಸಪಾತ ಭಕ್ಷ್ಯ ಸ್ವೀಕರಿಸಿದ ಅನಂತರ ಮಹಾಪ್ರಸಾದದ ಅಂಗವಾಗಿ ರುಚಿಯಾದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.