Desi Swara: “ತುಳುಕೂಟ ಬಹ್ರೈನ್‌ ‘ಗೆ ಚಾಲನೆ

ತುಳು ಕಲೆ, ಭಾಷೆ, ಸಂಸ್ಕೃತಿಗೆ ವೇದಿಕೆ ಕಲ್ಪಿಸುವ ಉದ್ದೇಶ

Team Udayavani, Sep 30, 2023, 10:14 AM IST

Desi Swara: “ತುಳುಕೂಟ ಬಹ್ರೈನ್‌ ‘ ಗೆ ಚಾಲನೆ

ಬಹ್ರೈನ್‌: ದ್ವೀಪ ರಾಷ್ಟ್ರ ಬಹ್ರೈನ್‌ನಲ್ಲಿ ತುಳು ಕಲೆ, ಭಾಷೆ, ಸಂಸ್ಕೃತಿಗೆ ವೇದಿಕೆಯನ್ನು ಕಲ್ಪಿಸಿ, ಅದನ್ನು ಉಳಿಸಿ ಬೆಳೆಸುವ ಸಲುವಾಗಿ ” ತುಳುಕೂಟ ಬಹ್ರೈನ್‌ ‘ ಗೆ ಇಲ್ಲಿನ ಪ್ಯಾಪಿಲಾನ್‌ ರೆಸ್ಟೋರೆಂಟ್‌ನ ಸಭಾಂಗಣದಲ್ಲಿ ದೀಪ ಬೆಳಗುವುದರೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ದ್ವೀಪರಾಷ್ಟ್ರದಲ್ಲಿ ಸುಮಾರು ನಾಲ್ಕು ದಶಕಗಳಿಂದ ಕನ್ನಡ, ತುಳು ಭಾಷೆ, ಸಂಸ್ಕೃತಿಯ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವ ಆಸ್ಟಿನ್‌ ಸಂತೋಷ್‌, ರಾಜ್‌ ಕುಮಾರ್‌, ವಿಜಯ ನಾಯಕ್‌ ಹಾಗೂ ರಾಜೇಶ್‌ ಶೆಟ್ಟಿಯವರ ನೇತೃತ್ವದಲ್ಲಿ ತುಳು ಕೂಟ ಬಹ್ರೈನ್‌ ಸೆ.17ರಂದು ಲೋಕಾಪರ್ಣೆಗೊಂಡಿತು. ವಿವಿಧ ಸಂಘ, ಸಂಸ್ಥೆಗಳ ಅಧ್ಯಕ್ಷರು, ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಕೋರಿದರು.

ಕನ್ನಡ ಸಂಘದ ಮಾಜಿ ಅಧ್ಯಕ್ಷರು ಹಾಗೂ ಇಂಡಿಯನ್‌ ಸ್ಕೂಲ್‌ನಲ್ಲಿ 1989 ರಲ್ಲಿ ಕನ್ನಡ ತರಗತಿಗಳನ್ನು ಪ್ರಾರಂಭಿಸಲು ಕಾರಣರಾಗಿದ್ದ ಸುರೇಂದ್ರ ಶೆಟ್ಟಿ, ದಕ್ಷಿಣ ಕನ್ನಡ ಮುಸ್ಲಿಂ ಅಸೋಸಿಯೇಶನ್‌ನ ಅಧ್ಯಕ್ಷರಾದ ಹಾಜಿ ಅಬ್ದುಲ್‌ ರಜಾಕ್‌, ಬಹ್ರೈನ್‌ ಬಂಟ್ಸ್ ನ ಮಾಜಿ ಅಧ್ಯಕ್ಷರಾದ ಭರತ್‌ ಶೆಟ್ಟಿ, ಅಲ್‌ ಹಿಲಾಲ್‌ ವೈದ್ಯಕೀಯ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರಾದ ಆಸೀಫ್, ಅಮ್ಮ ಕಲಾವಿದರು ಸಂಘಟನೆಯ ಮುಖ್ಯಸ್ಥರಾದ ಮೋಹನ್‌ ದಾಸ್‌ ರೈ, ವಿಶ್ವಕರ್ಮ ಬಳಗದ ಅಧ್ಯಕ್ಷರಾದ ಸತೀಶ್‌ ಉಳ್ಳಾಲ್ , ಕೊಂಕಣ್‌ ಸಿಂಗರ್ಸ್‌ನ ಮಾಜಿ ಅಧ್ಯಕ್ಷರಾದ ವಾಲ್ಟರ್‌ ನೊರೊನ್ಹಾ, ಹಿರಿಯ ಕನ್ನಡಿಗರಾದ ಹುಂತ್ರಿಕೆ ಭಾಸ್ಕರ್‌ ಶೆಟ್ಟಿ, ಚಂದ್ರಹಾಸ ಐಲ್‌ , ರಾಬರ್ಟ್‌ ಡಿ’ ಸೋಜಾ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿ, ಶುಭಹಾರೈಸಿದರು.

ಎಡನೀರು ಮಠ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ತುಳುಕೂಟ ಬಹ್ರೈನ್‌ ಸಂಘಕ್ಕೆ, ಸಂಘಟಕರಿಗೆ
ಹಾಗೂ ಬಹ್ರೈನ್‌ನಲ್ಲಿರುವ ತುಳುವರಿಗೆ ಶುಭಹಾರೈಸಿದ ಸಂದೇಶ ಮತ್ತು ಆಶೀರ್ವಚನದ ವೀಡಿಯೋವನ್ನು ಪ್ರಸಾರ ಮಾಡಲಾಯಿತು.

ತುಳುಕೂಟದ ಚೊಚ್ಚಲ ಕಾರ್ಯಕ್ರಮವಾಗಿ ಅ.13ರಂದು ಹರಿಪ್ರಸಾದ್‌ ರೈ ನಿರ್ಮಾಣದ, ತ್ರಿಶೂಲ್‌ ಶೆಟ್ಟಿ ನಿರ್ದೇಶನದ ವಿನೀತ್‌ ಕುಮಾರ್‌, ಸಮತಾ ಅಮೀನ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಪುಳಿಮುಂಚಿ ತುಳು ಸಿನೆಮಾದ ಗ್ರ್ಯಾಂಡ್‌ ಪ್ರೀಮಿಯರ್‌ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಚಿತ್ರದ ಪೋಸ್ಟ್‌ರ್‌ ಅನ್ನು ಅನಾವರಣಗೊಳಿಸಲಾಯಿತು.
ವಿಜಯ್‌ ನಾಯಕ್‌ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್‌ ಶೆಟ್ಟಿ ವಂದಿಸಿದರು.

ವರದಿ – ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.