Desi Swara: ಕರ್ನಾಟಕ ಸಂಘ ಕತಾರ್‌: ವಾರ್ಷಿಕ ರಕ್ತದಾನ ಶಿಬಿರ


Team Udayavani, Jul 27, 2024, 10:15 AM IST

Desi Swara: ಕರ್ನಾಟಕ ಸಂಘ ಕತಾರ್‌: ವಾರ್ಷಿಕ ರಕ್ತದಾನ ಶಿಬಿರ

ದೋಹಾ:ಕರ್ನಾಟಕ ಸಂಘ ಕತಾರ್‌ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ 2024ನೇ ಸಾಲಿನ ವಾರ್ಷಿಕ ರಕ್ತದಾನ ಶಿಬಿರವನ್ನು ದೋಹಾದ ಎಚ್‌ಎಂಸಿಯ ಕತಾರ್‌ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ ಆಯೋಜಿಸಿತ್ತು.

ಸಂಘದ ಉಪಾಧ್ಯಕ್ಷರಾದ ಕೆ.ಎಸ್‌.ರಮೇಶ ಅವರು ಸಂಕ್ಷಿಪ್ತ ಸಭಾಕಾರ್ಯಕ್ರಮದ ಪ್ರಾರಂಭಿಕ ನುಡಿಗಳೊಂದಿಗೆ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಅವರನ್ನು ಪರಿಚಯಿಸಿ, ಆಹ್ವಾನಿಸಿದರು. ಅಧ್ಯಕ್ಷರಾದ ರವಿ ಶೆಟ್ಟಿಯವರು ನೆರೆದಿದ್ದ ಎಲ್ಲ ಗಣ್ಯರು ಮತ್ತು ದಾನಿಗಳನ್ನು ಸ್ವಾಗತಿಸಿ, ರಕ್ತವು ಎಷ್ಟು ಅಮೂಲ್ಯವಾದುದು “ತಾಯಿಯ ಕಣ್ಣೀರು ತನ್ನ ಮಗುವಿನ ಜೀವವನ್ನು ಉಳಿಸಲು ಸಾಧ್ಯವಿಲ್ಲ, ಆದರೆ ನಿಮ್ಮ ರಕ್ತವು ಸಹಾಯ ಮಾಡುತ್ತದೆ’ ಎಂಬುದನ್ನು ಸೂಚಿಸುವ ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ರಾಯಭಾರ ಕಚೇರಿಯ ಎರಡನೇ ಕಾರ್ಯದರ್ಶಿ ಬಿಂದು ನಾಯರ್‌, ಇತರ ಗಣ್ಯರಾದ ಐಸಿಬಿಎಫ್‌ ಅಧ್ಯಕ್ಷ ಶಾನವಾಸ್‌ ಬಾವಾ, ಕರ್ನಾಟಕ ಟೋಸ್ಟ್‌ ಮಾಸ್ಟರ್ಸ್‌ ಅಧ್ಯಕ್ಷ ಉದಯ್‌ ಶೆಟ್ಟಿ ತಮ್ಮ ಭಾಷಣದಲ್ಲಿ ರಕ್ತದಾನದ ಪ್ರಮುಖ ಕೊಡುಗೆಗಳು ಮತ್ತು ಸಮಾಜದ ಮೇಲೆ ಅದರ ಪರಿಣಾಮವನ್ನು ವಿವರಿಸಿದರು. ಹಮದ್‌ ಮೆಡಿಕಲ್‌ ಕಾರ್ಪೊರೇಷನ್‌ನ ಐಸಿಯು ಮುಖ್ಯಸ್ಥ ಮತ್ತು ಕ್ರಿಟಿಕಲ್‌ ಕೇರ್‌ ಸಲಹೆಗಾರ ಡಾ| ದೊರೆ ಅನಂತೇಗೌಡ ಅವರು ತಮ್ಮ ಭಾಷಣದಲ್ಲಿ ಒಮ್ಮೆ ದಾನ ಮಾಡಿದ ರಕ್ತವನ್ನು ಬಳಸುವ ಪ್ರಕ್ರಿಯೆಯ ಬಗ್ಗೆ ಸಭಿಕರಿಗೆ ಮಾಹಿತಿ ನೀಡಿದರು ಮತ್ತು ಅದು ಅನೇಕ ಜೀವಗಳನ್ನು ಉಳಿಸುವಲ್ಲಿ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತು ಅರಿವು ಮೂಡಿಸಿದರು.

ಅಧ್ಯಕ್ಷರು, ಮುಖ್ಯ ಅತಿಥಿಗಳು, ಗಣ್ಯರು ಮತ್ತು ಸಮಿತಿ ಸದಸ್ಯರು ಡಾ| ದೊರೆ ಅವರಿಗೆ ಮೆಚ್ಚುಗೆಯ ಸಂಕೇತವಾಗಿ “ಅಭಿನಂದನ ಸ್ಮರಣಿಕೆ’ ನೀಡಿದರು. ಕರ್ನಾಟಕ ಟೋಸ್ಟ್‌ ಮಾಸ್ಟರ್ಸ್‌ ತಂಡದ ಜತೆ ಬಂದಿದ್ದ ವಿಶ್ವ ಚಾಂಪಿಯನ್‌ ಸ್ಪೀಕರ್‌ ನಿಶಾ ಶಿವರಾಂ ಅವರನ್ನು ಸಮ್ಮಾನಿಸಲಾಯಿತು. ಸಂಘದ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಭೀಮಪ್ಪ ಖೋತಾ ವಂದಿಸಿದರು.

ಕರ್ನಾಟಕ ಸಂಘದ ಸಲಹಾ ಸಮಿತಿ ಸದಸ್ಯರಾದ ಅರುಣ್‌ ಕುಮಾರ್‌, ಎಚ್‌.ಕೆ.ಮಧು, ಡಾ| ಸಂಜಯ್‌ ಕುದರಿ, ಐಸಿಸಿ ಮಾಜಿ ಅಧ್ಯಕ್ಷೆ ಮಿಲನ್‌ ಅರುಣ್‌, ಕರ್ನಾಟಕ ಮೂಲದ ಇತರ ಐಸಿಸಿ ಸಹವರ್ತಿ ಸಂಸ್ಥೆಗಳಾದ ತುಳುಕೂಟ, ಎಂಸಿಸಿ, ಕೆಎಂಸಿಎ, ಎಸ್‌ಕೆಎಂಡಬ್ಲ್ಯುಎ, ಬಂಟ್ಸ್‌, ಬಿಲ್ಲವಾಸ್‌ ಮತ್ತು ಎಂಸಿಎಗಳ ಅಧ್ಯಕ್ಷರು, ಸಮಿತಿ ಸದಸ್ಯರು, ಹಲವಾರು ಹಿರಿಯ ಸದಸ್ಯರು, ಮತ್ತು ಮಾಜಿ ವ್ಯವಸ್ಥಾಪಕ ಸಮಿತಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

150ಕ್ಕೂ ಹೆಚ್ಚು ಸಮುದಾಯದ ಸದಸ್ಯರು ಈ ಉದಾತ್ತ ಉದ್ದೇಶಕ್ಕಾಗಿ ನೋಂದಾಯಿಸಿಕೊಂಡರು. ಎಲ್ಲ ದಾನಿಗಳಿಗೆ ಮೆಚ್ಚುಗೆಯ ಸಂಕೇತವಾಗಿ ಪ್ರಶಂಸಾ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಕರ್ನಾಟಕ ಟೋಸ್ಟ್‌ ಮಾಸ್ಟರ್ಸ್‌ ತಂಡವು ಕೂಡ ಈ ರಕ್ತದಾನ ಶಿಬಿರಕ್ಕೆ ಕೈಜೋಡಿಸಿತು. ವೆಂಚರ್‌ ಗಲ್ಫ್‌  ಮತ್ತು ಇತರ ಸಂಸ್ಥೆಗಳು ಈ ಉದಾತ್ತ ಕಾರ್ಯಕ್ರಮವನ್ನು ಬೆಂಬಲಿಸಿದವು, ಇದರ ಪರಿಣಾಮವಾಗಿ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು.

ಸಂಘದ ಮಾಜಿ ಅಧ್ಯಕ್ಷರು ಮತ್ತು ಸಲಹಾ ಸಮಿತಿ ಸದಸ್ಯರಾದ ಮಧು ಅವರು ಕನ್ನಡದ ಜನಪ್ರಿಯ ನಟಿ ಮತ್ತು ಟಿವಿ ನಿರೂಪಕಿ ಅಪರ್ಣಾ ವಸ್ತಾರೆ ಅವರ ಅಗಲಿದ ಆತ್ಮಕ್ಕೆ ಗೌರವ ಸಲ್ಲಿಸಿದರು ಮತ್ತು ಇಡೀ ಪ್ರೇಕ್ಷಕರು ಅಗಲಿದ ಆತ್ಮಕ್ಕೆ ಗೌರವದ ಸಂಕೇತವಾಗಿ ಒಂದು ನಿಮಿಷ ಮೌನ ಆಚರಿಸಿದರು.

ದೋಹಾದ ಪ್ರಸಿದ್ಧ ಜುವೆಲ್ಲರಿಗಳಲ್ಲಿ ಒಂದಾದ ಕೆನರಾ ಜುವೆಲ್ಲರಿ ಈ ಕಾರ್ಯಕ್ರಮಕ್ಕೆ ತಮ್ಮ ಗಮನಾರ್ಹ ಬೆಂಬಲವನ್ನು ನೀಡಿತ್ತು. ಎಂಸಿ ಸದಸ್ಯರು ಮತ್ತು ಅನೇಕ ಸ್ವಯಂಸೇವಕರು ಹಮದ್‌ ವೈದ್ಯಕೀಯ ನಿಗಮದ ಉತ್ತಮ ಬೆಂಬಲ ಮತ್ತು ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಂಡವಾಗಿ ಕೆಲಸ ಮಾಡಿದರು.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.