Desi Swara: ಕರ್ನಾಟಕ ಸಂಘ ಕತಾರ್‌: ಚೊಚ್ಚಲ ಶಿಕ್ಷಕರ ದಿನಾಚರಣೆ ಸಮಾರಂಭ


Team Udayavani, Sep 21, 2024, 11:15 AM IST

Desi Swara: ಕರ್ನಾಟಕ ಸಂಘ ಕತಾರ್‌: ಚೊಚ್ಚಲ ಶಿಕ್ಷಕರ ದಿನಾಚರಣೆ ಸಮಾರಂಭ

ದೋಹಾ: ಕರ್ನಾಟಕ ಸಂಘ ಕತಾರ್‌ ಶಿಕ್ಷಕರ ದಿನ ಕಾರ್ಯಕ್ರಮವವನ್ನು ದೋಹಾದ ವೈಬ್ರೆಂಟ್‌ ಇಂಡಸ್ಟ್ರಿಯಲ್‌ ಸೇಫ್ಟಿ ಸೆಂಟರ್‌ನಲ್ಲಿ ಆಯೋಜಿಸಿತ್ತು. ಶಿಕ್ಷಕರ ದಿನಾಚರಣೆಯನ್ನು ಸಂಘವು ಮೊದಲ ಬಾರಿಗೆ ಹಮ್ಮಿಕೊಂಡಿದ್ದು, ಸ್ಥಾಪನೆಯ ಇಪ್ಪತ್ತೈದನೆ ವರ್ಷಾಚರಣೆ ಸಂದರ್ಭದಲ್ಲಿ ಇಪ್ಪತ್ತೈದು ಸದಸ್ಯ ಶಿಕ್ಷಕರು ಗೌರವಕ್ಕೆ ಪಾತ್ರರಾಗಿರುವುದು ಸಂಘಕ್ಕೆ ಸಂತಸದ ಸಂಗತಿ.

ಶೈಕ್ಷಣಿಕ ಶಿಕ್ಷಕರೊಂದಿಗೆ, ಕರ್ನಾಟಕ ಸಂಘವು ಆಯೋಜಿಸಿದ ವಾರಾಂತ್ಯದ ಭಾಷಾ ತರಗತಿಗಳನ್ನು ಸ್ವಯಂಪ್ರೇರಿತವಾಗಿ ನಡೆಸುತ್ತಿರುವ ಕನ್ನಡ ಶಿಕ್ಷಕರನ್ನು ಸಹ ಸಮ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಇಂಡಿಯನ್‌ ಕಲ್ಚರಲ್‌ ಸೆಂಟರ್‌ನ ಅಧ್ಯಕ್ಷರಾದ ಮಣಿಕಂಠನ್‌ ಎ.ಪಿ., ಗೌರವಾನ್ವಿತ ಅತಿಥಿಗಳಾಗಿ ಬ್ರಿಲಿಯಂಟ್‌ ಇಂಡಿಯನ್‌ ಇಂಟರ್‌ನ್ಯಾಶನಲ್‌ ಸ್ಕೂಲ್‌ನ ಪ್ರಾಂಶುಪಾಲರಾದ ಆಶಾ ಶಿಜು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರು ಸುಬ್ರಹ್ಮಣ್ಯ ಹೆಬ್ಬಾ ಗಿಲು, ಸಲಹಾ ಮಂಡಳಿ ಅಧ್ಯಕ್ಷರು ಮಹೇಶ್‌ ಗೌಡ, ಸಲಹಾ ಮಂಡಳಿ ಸದಸ್ಯರಾದ ಮನ್ನಂಗಿ, ಅರುಣ್‌, ದೀಪಕ್‌ ಶೆಟ್ಟಿ, ಮಧು, ಡಾ| ಸಂಜಯ್‌ ಕುದರಿ, ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಕತಾರ್‌ನ ವಿವಿಧ ಅಂತಾರಾಷ್ಟ್ರೀಯ ಶಾಲೆಗಳ ಹೆಸರಾಂತ ಶಿಕ್ಷಕರು, ಕರ್ನಾಟಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶಿಕ್ಷಕರ ದಿನಾಚರಣೆಯನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅನಿಲ್‌ ಭಾಸಗಿ ಮತ್ತು ಸುಷ್ಮಾ ಹರೀಶ್‌ ಅವರು ಅತ್ಯುತ್ತಮವಾಗಿ ನಿರ್ದೇಶಿಸಿದ ಗುರುವಂದನ ಗೀತೆಯನ್ನು ಕರ್ನಾಟಕ ಸಂಘದ ಮಕ್ಕಳು ಹಾಡುವ ಮೂಲಕ ಪ್ರೇಕ್ಷಕರ ಮನಗೆದ್ದರು.

ಅಧ್ಯಕ್ಷರಾದ ರವಿ ಶೆಟ್ಟಿ ಸ್ವಾಗತಿಸಿ, ಮಾತನಾಡಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪ್ರಾಮುಖ್ಯತೆಯ ಬಗ್ಗೆ ಸಂಸ್ಕೃತ ಉಲ್ಲೇಖವನ್ನು ವಿವರಿಸಿ ಅದನ್ನು ಎಲ್ಲ ಶಿಕ್ಷಕರಿಗೆ ಸಮರ್ಪಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಮಣಿಕಂಠನ್‌ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಐಸಿಸಿಯೊಂದಿಗೆ ಕೈಜೋಡಿಸಿದ್ದಕ್ಕಾಗಿ ಕರ್ನಾಟಕ ಸಂಘ ಕತಾರ್‌ಗೆ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲ ಶಿಕ್ಷಕರನ್ನು ಅಭಿನಂದಿಸಿದರು. ಗೌರವಾನ್ವಿತ ಅತಿಥಿ ಆಶಾ ಶಿಜು ಅವರು ತಮ್ಮ ಭಾಷಣದಲ್ಲಿ ಶಿಕ್ಷಕಿಯಾಗಿ ತಮ್ಮ ಜೀವಮಾನದ ಅನುಭವಗಳನ್ನು ಮತ್ತು ಆ ಅನುಭವಗಳು ಅವರಿಗೆ ಉತ್ತಮ ಶಿಕ್ಷಕಿಯಾಗಲು ಹೇಗೆ ಸಹಾಯ ಮಾಡಿದವು ಎಂಬುದನ್ನು ತಿಳಿಸಿದರು.

ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಾಹಿತ್ಯ ಕ್ಲಬ್‌ಗ ಕೊಡುಗೆ ನೀಡುವ ಅಂಗವಾಗಿ ಕರ್ನಾಟಕ ಸಂಘದ ಅಧ್ಯಕ್ಷರು ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಕನ್ನಡ ಪುಸ್ತಕಗಳ ಸಂಗ್ರಹವನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಮಣಿಕಂಠನ್‌ ಮತ್ತು ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಹಸ್ತಾಂತರಿಸಿದರು.

ಕರ್ನಾಟಕ ಸಂಘ ಕತಾರ್‌ ವತಿಯಿಂದ 2022-2023ನೇ ಸಾಲಿನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದ ಸಂಜನಾ ಜೀವನ್‌ ಅವರು ಭಾರತಕ್ಕೆ ಮರುಳುತ್ತಿರುವ ನಿಮಿತ್ತ, ಸಂಘದ ಅಧ್ಯಕ್ಷರು, ಸಲಹಾ ಸಮಿತಿ ಸದಸ್ಯರು, ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಅವರಿಗೆ ಸ್ಮರಣಿಕೆ ನೀಡುವ ಮೂಲಕ ಬೀಳ್ಕೊಡಲಾಯಿತು.

ಭುವನಾ ಸೂರಜ್‌ ನಿರ್ವಹಿಸಿ, ಭಾವನಾ ನವೀನ್‌ ವಂದಿಸಿದರು. ಅಧ್ಯಕ್ಷರೊಂದಿಗೆ ಎಲ್ಲ ಸಮಿತಿ ಸದಸ್ಯರು ಮತ್ತು ಸ್ವಯಂಸೇವಕರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಪದ್ಮಭೂಷಣ ಡಾ| ಶಿವತಾನು ಪಿಳ್ಳೈ ಅವರಿಂದ ಉಪನ್ಯಾಸ

Desi Swara: ಪದ್ಮಭೂಷಣ ಡಾ| ಶಿವತಾನು ಪಿಳ್ಳೈ ಅವರಿಂದ ಉಪನ್ಯಾಸ

Desi Swara: ದೋಹಾ- ಐಸಿಸಿಯಿಂದ ಶಿಕ್ಷಕರಿಗೆ ಗೌರವ

Desi Swara: ದೋಹಾ- ಐಸಿಸಿಯಿಂದ ಶಿಕ್ಷಕರಿಗೆ ಗೌರವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.