Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ


Team Udayavani, Jun 22, 2024, 1:15 PM IST

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

ಉದಯವಾಣಿಯ ಎನ್‌ಆರ್‌ಐ ಸಂಚಿಕೆ ದೇಸಿಸ್ವರಕ್ಕೆ ಹದಿನೈದು ದಿನಕೊಮ್ಮೆ ಅಂಕಣಗಳನ್ನು ಬರೆಯುತ್ತೀರಾ ಎಂದು ಕೇಳಿದಾಗ ನಾನು ಹಿಂಜರಿಕೆಯಲ್ಲಿಯೇ ಒಪ್ಪಿಕೊಂಡಿದ್ದೆ. ನಾನು ನೋಡಿದ ಪ್ರವಾಸಿ ತಾಣಗಳ ಬಗ್ಗೆ ಬರೆಯಬೇಕು ಎಂಬ ಇರಾದೆ ಇತ್ತಾದರೂ ಅದು ಕಾರ್ಯರೂಪಕ್ಕೆ ಅಲ್ಲಿಯವರೆಗೂ ಬಂದಿರಲಿಲ್ಲ. ಅಂಕಣ ಬರೆಯುವುದು ನಿಯಮಬದ್ಧವಾದ ಕೆಲಸ. ಒಂದು ಅಂಕಣ ಬರೆದ ಕೂಡಲೇ ಮುಂದಿನದ್ದರ ಬಗ್ಗೆ ಯೋಚನೆ ಶುರುವಾಗಬೇಕು. ಹೀಗೆ ಶುರುವಾದ “ಊರು ಟೂರು’ ಅಂಕಣಗಳು ಒಂದರ ಅನಂತರ ಮತ್ತೂಂದರಂತೆ ಬಂದು ಒಟ್ಟು 35 ಅಂಕಣಗಳಾದವು. ನಾನು ಕಂಡಿದ್ದೆಲ್ಲವನ್ನು ದಾಖಲಿಸುತ್ತ ಹೋದೆ.

ನೋಡಿದ ಸ್ಥಳಗಳು ಇನ್ನೂ ಪಟ್ಟಿಯಲ್ಲಿ ಇವೆಯಾದರೂ ಸದ್ಯಕ್ಕೆ ಇಷ್ಟು ಸಾಕೆನ್ನಿಸಿತು. ಈಗ ಈ ಎಲ್ಲ ಅಂಕಣಗಳು ಜತೆಗೆ ಇಲ್ಲಿ ಬಂದಿರದ ಒಂದಿಷ್ಟು ವೈಯಕ್ತಿಕ ಅನುಭವಗಳನ್ನ ಸೇರಿಸಿ ಪುಸ್ತಕದಲ್ಲಿ ಬಂದಿವೆ.

ಊರು ಟೂರು – Journey Beyond The Borders. ಊರು ಬಿಟ್ಟು ಹಾರಿ ಬಂದಿರುವ ನಾನು ಅಮೆರಿಕದಲ್ಲಿ ಗುಬ್ಬಚ್ಚಿಯಂತೆ ಅಲೆಯುತ್ತಿರುತ್ತೇನೆ. ಇದು ನನಗೆ ಸಂತೃಪ್ತಿ ನೀಡುವ ಕಾಯಕ. ಪ್ರವಾಸದಿಂದ ಮರಳಿ ಬಂದು ದಣಿವೆಂದು ಕಾಲು ಚಾಚಿ ಮಲಗುವಾಗಿನ ಸುಖ ಬೇರೊಂದಿಲ್ಲ ಎಂದು ನನಗನ್ನಿಸುತ್ತದೆ. ಬಾಲ್ಯ, ಓದು, ಸೈನ್ಸ್‌ ಎಂಜಿನಿಯರಿಂಗ್‌ ಪದವಿ, ಜವಾಬ್ದಾರಿ ಎಂದು ಕಳೆದು ಹೋಗಿದ್ದ ನನಗೆ ಕೆಲಸದ ಮೂಲಕ ಬೇರೆ ದೇಶಕ್ಕೆ ಹೋಗುವ ಅವಕಾಶ ಸಿಕ್ಕಿದ್ದು ಸುಕೃತವೇ. ಇಲ್ಲದೇ ಇದ್ದಿದ್ದರೆ ಈ ತಿರುಗಾಟದ ಆಸಕ್ತಿ ನನ್ನೊಳಗೆ ಬೆಳೆಯುತ್ತಿತ್ತೋ ಇಲ್ಲವೋ ಗೊತ್ತಿಲ್ಲ.

ಮನೆಯವರನ್ನು, ಅಮ್ಮನನ್ನು ಬಿಟ್ಟು ದೂರದೇಶಕ್ಕೆ ಬಂದಾಗ ಹುಟ್ಟುವ ಅನಾಥ ಭಾವವನ್ನು, ಒಂಟಿತನವನ್ನು ಕಳೆಯಲು ಸಹಾಯ ಮಾಡಿದ್ದು ಈ ತಿರುಗಾಟ. ಈ ತಿರುಗಾಟದಲ್ಲಿ ನಾನು ಹಲವು ವಿಸ್ಮಯಗಳನ್ನು ಕಂಡಿದ್ದೇನೆ. ಅಮೆರಿಕದಲ್ಲಿರುವ ಒಟ್ಟು 63 ರಾಷ್ಟ್ರೀಯ ಉದ್ಯಾನವನಗಳಲ್ಲಿ ಹನ್ನೊಂದನ್ನು ನೋಡಿದ್ದೇನೆ. ಮಧ್ಯರಾತ್ರಿಯಲ್ಲಿ ನಾದರ್ನ್ ಲೈಟ್ಸ್‌ ಆಕಾಶದಲ್ಲಿ ಹೊಳೆಯುವುದನ್ನು ಕಂಡಿದ್ದೇನೆ. ಎರಡು ಸಾವಿರ ವರ್ಷಗಳಿಗಿಂತಲೂ ಹಳೆಯದಾದ ಮರವನ್ನು ನೋಡಿ ಬೆರಗಾಗಿದ್ದೇನೆ. ಬಣ್ಣವಿಲ್ಲದ ನದಿಯ ನೀರು ಹಸುರಾಗುವುದಕ್ಕೆ ಸಾಕ್ಷಿಯಾಗಿದ್ದೇನೆ. 18,000 ಎಕ್ರೆಗಳಷ್ಟು ದೊಡ್ಡದಾದ ಕಾಡು ಬೆಂಕಿಯಲ್ಲಿ ಸುಟ್ಟು ಹೋಗಿರುವುದನ್ನೂ, ಅಳಿದುಳಿದ ಮರಗಳ ತುದಿಯಲ್ಲಿ ಮತ್ತೆ ಚಿಗುರು ಹುಟ್ಟಿರುವುದನ್ನೂ ನೋಡಿ ಸ್ಫೂರ್ತಿಗೊಂಡಿದ್ದೇನೆ. ಅನ್ಯ ನೆಲದಲ್ಲಿ ನಮ್ಮ ದೇವರನ್ನು, ದೇವಸ್ಥಾನವನ್ನು ಕಂಡು ಭಾವಪರವಶಳಾಗಿದ್ದೇನೆ. ಭೂಮಿಯ ಆಳದಲ್ಲಿರುವ ಕಣಿವೆಯೊಳಗೆ ಸುತ್ತಾಡಿದ್ದೇನೆ.

ಹೆಲಿಕಾಪ್ಟ್ ರ್‌ ನಲ್ಲಿ ಕೂತು ನಗರದ ಥಳುಕನ್ನು ಕಣ್ಣು ತುಂಬಿಸಿಕೊಂಡಿದ್ದೇನೆ. ಚಳಿಯಲ್ಲಿ ಹಿಮಗಟ್ಟಿದ ಕೆರೆಯ ಮೇಲೆ ಓಡಾಡಿದ್ದೇನೆ. ಕಾಡಿನಲ್ಲಿ ದಿಕ್ಕೆಟ್ಟು ಕಂಗೆಟ್ಟಿದ್ದಾಗ ಕಣ್ಣಿಗೆ ಬಿದ್ದ ಬೆಳಕನ್ನು ನೋಡಿ ಧನ್ಯಳಾಗಿದ್ದೇನೆ. ಈ ಎಲ್ಲವೂ ನನ್ನ ಪಾಲಿನ ಅದ್ಭುತಗಳು. ಇವೆಲ್ಲವನ್ನು ದಾಖಲಿಸುವ ಸಣ್ಣ ಪ್ರಯತ್ನವೇ ಈ “ಊರುಟೂರು’ ಸಂಗ್ರಹ. ನಾನು ಕಂಡಿದ್ದನ್ನು ಅಕ್ಷರಗಳಲ್ಲಿ ಸೆರೆಹಿಡಿದು ಆ ವಿಸ್ಮಯವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ಸದ್ಯಕ್ಕೆ ಎರಡು ದೊಡ್ಡ ಸಮುದ್ರಗಳನ್ನು ಹಾರಿರುವ ಈ ಗುಬ್ಬಚ್ಚಿಯ ಹಾರಾಟ ರೆಕ್ಕೆಗಳಲ್ಲಿ ಶಕ್ತಿಯಿರುವವರೆಗೂ ಅನವರತವಾಗಿರುತ್ತದೆ.

ಈ ಪುಸ್ತಕ ಹರಿವು ಪ್ರಕಾಶನದಿಂದ ಹೊರಬಂದಿದ್ದು ಈಗ ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್‌ಲೈನ್‌ ಮೂಲಕ ಕೊಳ್ಳಬಹುದಾಗಿದೆ. ಈ ಅಂಕಣಗಳನ್ನು ನಿಯಮಿತವಾಗಿ ಪ್ರಕಟಿಸಿದ ಉದಯವಾಣಿ ತಂಡಕ್ಕೆ ಆಭಾರಿ.

ಸಂಜೋತಾ ಪುರೋಹಿತ್‌, ಸ್ಯಾನ್‌ಫ್ರಾನ್ಸಿಸ್ಕೋ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.