Desi Swara: ಮ್ಯೂನಿಕ್‌ ನಲ್ಲಿ ಭಾರತೀಯ ನೃತ್ಯಗಳ ಅನಾವರಣ

ಜರ್ಮನಿ: ನಿತ್ಯಾ ಆರ್ಟ್ಸ್ ಸೆಂಟರ್‌

Team Udayavani, May 29, 2024, 10:23 AM IST

Desi Swara: ಮ್ಯೂನಿಕ್‌ ನಲ್ಲಿ ಭಾರತೀಯ ನೃತ್ಯಗಳ ಅನಾವರಣ

ಮ್ಯೂನಿಕ್‌: ಜರ್ಮನಿಯ ಮುನಿಚ್‌ನಲ್ಲಿ ಮೇ 4ರಂದು ನಾಟ್ಯ ಫೆಸ್ಟ್‌ 2024 ವಿಶೇಷವಾಗಿ ಭಾರತೀಯ ಶಾಸ್ತ್ರೀಯ ನೃತ್ಯ ಕಲೆಗಳ ಪ್ರದರ್ಶನ ಸಂಭ್ರಮದಿಂದ, ಯಶಸ್ವಿಯಾಗಿ ನಡೆಯಿತು. ಇದನ್ನು ಮ್ಯೂನಿಕ್‌ನ ನಿತ್ಯಾ ಆರ್ಟ್ಸ್ ಸೆಂಟರ್‌ ವತಿಯಿಂದ Consulate General Of India, Munich ಇವರ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

ವಿಶ್ವ ವಿಖ್ಯಾತ ಭರತನಾಟ್ಯ ಕಲಾವಿದೆ, ವಸುಂಧರಾ ಶೈಲಿಯ ಪ್ರವರ್ತಕಿ, ಡಾ| ವಸುಂಧರಾ ದೊರೆಸ್ವಾಮಿ ಅವರು ಮೂರನೇ ವರ್ಷದ ನಾಟ್ಯ ಫೆಸ್ಟ್‌ ಕಾರ್ಯಕ್ರಮದಲ್ಲಿ ಗಂಗಾ ಏಕವ್ಯಕ್ತಿ ರೂಪಕ ಪ್ರದರ್ಶಿಸಿದರು. ಅವರ ಅಪಾರವಾದ ಅನುಭವ ಹಾಗೂ ನೃತ್ಯದ ಪರಿಣಿತಿ, ಬಿಡುವಿಲ್ಲದೆ 70 ನಿಮಿಷಗಳು ವೇದಿಕೆಯ ಮೇಲೆ ಪ್ರಸ್ತುತಪಡಿಸಿದ ಕಲೆ, ಶೇ. 80ಕ್ಕಿಂತ ಹೆಚ್ಚು ಇದ್ದ ವಿದೇಶೀ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತ್ತು.ಪ್ರೇಕ್ಷಕರ ಚಪ್ಪಾಳೆಯ ಸುರಿಮಳೆ ಭಾರತದ ಶ್ರೇಷ್ಠ ನೃತ್ಯಕಲೆ ಯೂರೋಪ್‌ನಲ್ಲಿ ಜನಮನ್ನಣೆ ಗಳಿಸುತ್ತಿದೆ ಎಂಬ ಅನಿಸಿಕೆಗೆ ಅವಕಾಶ ಕಲ್ಪಿಸಿದೆ.

ಕಳೆದ ಮೂರು ವರ್ಷಗಳಿಂದ ನಿತ್ಯಾ ಆರ್ಟ್ಸ್ ಸೆಂಟರ್‌ ಮ್ಯೂನಿಕ್‌ ನಗರದಲ್ಲಿ ಅತ್ಯುತ್ತಮ ಮಟ್ಟದ ಭಾರತನಾಟ್ಯವಷ್ಟೇ ಅಲ್ಲದೇ ಅತ್ಯಂತ ವೈವಿಧ್ಯಮಯವಾದ ಇತರ ಭಾರತೀಯ ಶಾಸ್ತ್ರೀಯ ನೃತ್ಯಪ್ರಕಾರಗಳನ್ನು ಇಲ್ಲಿನ ಸಂಸ್ಕೃತಿಗೆ ಮುಖಾಮುಖೀಯಾಗಿಸುವ ವಿಶಿಷ್ಟ ಸಾಹಸವನ್ನು ಮಾಡುತ್ತಿದೆ. ಇಂದು ಜರ್ಮನಿಯಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯ ಕಲಿತ ಅನೇಕ ಭಾರತೀಯ ಮತ್ತು ವಿದೇಶಿ ನೃತ್ಯಗಾರರಿದ್ದಾರೆ. ಹಾಗೆಯೇ ಇವುಗಳ ಬಗ್ಗೆ ತೀವ್ರ ಆಸಕ್ತಿ ಹಾಗೂ ಕುತೂಹಲ ಹೊಂದಿರುವ ಸಾಕಷ್ಟು ಜನರಿದ್ದಾರೆ. ಉತ್ತಮವಾದ ವೇದಿಕೆ ಹಾಗೂ ಗುಣಮಟ್ಟದ ಕಾರ್ಯಕ್ರಮಗಳು ಶಾಸ್ತ್ರೀಯ ಕಲೆಗಳಿಗೆ ತೀರಾ ಅಪರೂಪ. ಹೀಗಾಗಿ ನಾಟ್ಯ ಫೆಸ್ಟ್‌ ಮೂಲಕ ಭಾರತದ ಶ್ರೇಷ್ಠ ಕಲಾವಿದರ ಪ್ರದರ್ಶನದೊಂದಿಗೆ ಮ್ಯೂನಿಕ್‌ನಲ್ಲಿ ನೆಲೆಸಿರುವ ನೃತ್ಯ ಕಲಾವಿದರಿಗೂ ಒಂದು ವೇದಿಕೆ ಸೃಷ್ಟಿಸಬೇಕು.

ಒಂದು ಅತ್ಯುತ್ತಮವಾದ ಕಾರ್ಯಕ್ರಮದ ಮೂಲಕ ನಮ್ಮ ನೃತ್ಯ ಪರಂಪರೆಗಳನ್ನು ಇಲ್ಲಿನ ಜನರಿಗೆ ಪ್ರಸ್ತುತಪಡಿಸಬೇಕು ಎಂಬುದು ನನ್ನ ಉದ್ದೇಶವಾಗಿದೆ ಎಂದು ನಿತ್ಯಾ ಆಟ್ಸ್‌ ಸೆಂಟರ್‌ ಸಂಸ್ಥಾಪಕಿ ಶುಭದಾ ಸುಬ್ರಹ್ಮಣ್ಯಮ್‌ ಹೇಳಿದರು.
ನಾಟ್ಯಫೆಸ್ಟ್‌ 2024ರ ಕಾರ್ಯಕ್ರಮವನ್ನು ಕಾನ್ಸುಲೇಟ್‌ ಜನರಲ್‌ ಆಫ್ ಇಂಡಿಯಾದ ಎಚ್‌ಒಸಿ ಆಗಿರುವ ರಾಜೀವ್‌ ಚಿತ್ಕಾರಾ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ನಿತ್ಯಾ ಆರ್ಟ್ಸ್ ಸೆಂಟರ್‌ನ ಸಂಸ್ಥಾಪಕಿ ಶುಭದಾ ಸುಬ್ರಹ್ಮಣ್ಯಮ್‌ ಅವರು ಮೇಳ ಪ್ರಾಪ್ತಿ ಹಾಗೂ ಮಹಿಷಾಸುರ ಮರ್ಧಿನಿ ಸ್ತೋತ್ರವನ್ನು ಭರತನಾಟ್ಯ ಶೈಲಿಯ ವಸುಂಧರಾ ಬಾನಿಯಲ್ಲಿ ಪ್ರಸ್ತುತ ಪಡಿಸಿದರು. ಮಹಿಷಾಸುರ ವಧೆಯ ಕಥೆ ಪ್ರಸ್ತುತಿ ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಇಲ್ಲಿನ ಯೂರೋಪಿಯನ್ನರು ನಡೆಸುತ್ತಿರುವ ರೇವತಿ ಅಕಾಡೆಮಿ ಆಫ್ ಡ್ಯಾನ್ಸ್‌ ವತಿಯಿಂದ ವತಿಯಿಂದ ಮೋಹಿನಿಯಾಟ್ಟಂ, ಭವಾನಿ ಡ್ಯಾನ್ಸ್‌ ಗ್ರೂಪ್‌ ವತಿಯಿಂದ ಒಡಿಸ್ಸಿ ಹಾಗೂ ಧನ್ಯಾ ಸ್ಕೂಲ್‌ ಆಫ್ ಡ್ಯಾನ್ಸ್‌ ವತಿಯಿಂದ ಕಥಕ್‌ ಶೈಲಿಯ ನೃತ್ಯಬಂಧಗಳನ್ನು ಪ್ರದರ್ಶಿಸಲಾಯಿತು. ಇಡೀ ಸಮಾರಂಭಕ್ಕೆ ಹೊಸ ವಿಶಿಷ್ಟ ಆಯಾಮವನ್ನು ನೀಡಿದ ವಿಭಿನ್ನ ಭಾರತೀಯ ನೃತ್ಯಪ್ರಕಾರಗಳ ಪ್ರದರ್ಶನವನ್ನು ಪ್ರೇಕ್ಷಕರು ಉತ್ಸಾಹದಿಂದ ಸ್ವಾಗತಿಸಿದರು.

ಮೂರು ಗಂಟೆಗಳ ಭಾರತೀಯ ಶಾಸ್ತ್ರೀಯ ನೃತ್ಯಗಳ ಕಾರ್ಯಕ್ರಮ 300ಕ್ಕೂ ಹೆಚ್ಚು ಪ್ರೇಕ್ಷಕರನ್ನು ಪೂರ್ಣ ಕಾಲ ಹಿಡಿದಿಟ್ಟುಕೊಂಡಿದ್ದು ಬಹಳ ಹೆಮ್ಮೆಯ ವಿಚಾರ ಹಾಗೆಯೇ ಯಾವುದೇ ಅಡಚಣೆಗಳಿಲ್ಲದೆ ನಿಗದಿಪಡಿಸಿದ ಕಾರ್ಯಕ್ರಮಕ್ಕೆ ನಿಷ್ಠವಾಗಿ ಸಾಗಿದ್ದರಿಂದ ಒಳ್ಳೆಯ ಅನುಭವ ಉಂಟುಮಾಡಿತು.
ವರದಿ: ರವಿ ಶಂಕರ್‌

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.