Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

ಅಮೆರಿಕ: ಮಿನ್ನೆಸೋಟ ಕನ್ನಡ ಓದುಗರ ಕಟ್ಟೆಯಲ್ಲಿ ಸಂಶೋಧಕ ಡಾ| ವೀರಭದ್ರಯ್ಯ   

Team Udayavani, Jun 29, 2024, 2:45 PM IST

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

ಮಿನ್ನೆಸೋಟ:ಭಾರತದ ಸಿಂಧೂ ಬಯಲಿನ ನಾಗರಿಕತೆಯ ಹರಪ್ಪ ಮತ್ತು ಮಹೆಂಜೋದಾರೋ ಉಲ್ಲೇಖಗಳೂ ಸೇರಿದಂತೆ ಈ ವರೆಗಿನ ಶಾಸನಾಧಾರಿತ ವ್ಯಾಪಕ ಸಂಶೋಧನ ಆಯಾಮಗಳನ್ನು ಕೇಂದ್ರೀಕರಿಸಿ ವೀರಶೈವವು ಬಸವಪೂರ್ವಯುಗದ ಅತ್ಯಂತ ಪ್ರಾಚೀನ ಸನಾತನ ಧರ್ಮವಾಗಿದೆ ಎಂದು ಕನ್ನಡದ ಹಿರಿಯ ಸಂಶೋಧಕ ಬಳ್ಳಾರಿಯ ಡಾ| ಚಿಕ್ಯಾಟೆಮಠದ ವೀರಭದ್ರಯ್ಯ ಪ್ರತಿಪಾದಿಸಿದರು.

ಅವರು ಉತ್ತರ ಅಮೆರಿಕದ ಮಿನ್ನೆಸೋಟ ನಗರದ ಕನ್ನಡ ಓದುಗರ ಕಟ್ಟೆ ಸಂಘಟನೆಯು “ವೀರಶೈವ ಧರ್ಮದ ಆಕರಗಳು ಮತ್ತು ಪ್ರಾಚೀನತೆ: ಒಂದು ಅವಲೋಕನ’ ಎಂಬ ವಿಷಯವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದುಂಡು ಮೇಜಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಕ್ರಿಸ್ತ ಪೂರ್ವ ಸುಮಾರು 8 ಸಾವಿರ ವರ್ಷಗಳಷ್ಟು ಪ್ರಾಚೀನವಾದ್ದೆಂದು ಹೇಳಲಾಗುವ ಸಿಂಧೂ ಬಯಲಿನ ಹರಪ್ಪ ಮತ್ತು ಮಹೆಂಜೋದಾರೋ ಸಂಸ್ಕೃತಿಯಲ್ಲಿ ದೇವಾಲಯಗಳ ಕುರುಹುಗಳೇ ಲಭಿಸಿಲ್ಲ.

ಜತೆಗೆ ಇಲ್ಲಿ ಅನೇಕ ಧಾರಣೆ ಯೋಗ್ಯ ಶಿವಲಿಂಗಗಳೇ ಲಭಿಸಿರುವುದರಿಂದ ಅಲ್ಲಿಯ ಜನರು ಶಿವಲಿಂಗಗಳ ಅರ್ಚನೆ, ಆರಾಧನೆ ಹಾಗೂ ಅನುಸಂಧಾನಕ್ಕೆ ತೆರೆದುಕೊಂಡಿರುವುದು ಗೋಚರವಾಗಿರುವ ಹಿನ್ನೆಲೆಯಲ್ಲಿ ಅವರೆಲ್ಲರೂ ವೀರಶೈವರಾಗಿದ್ದರು. ಅವರು ದೇಹದ ಮೇಲೆಯೇ ಶಿವಲಿಂಗಗಳನ್ನು ಧಾರಣೆ ಮಾಡಿದ್ದರಿಂದ “ಇಷ್ಟಲಿಂಗ’ದ ಪರಿಕಲ್ಪನೆ ಕೇವಲ 12ನೇ ಶತಮಾನದ್ದಾಗಿರದೇ ಸಿಂಧೂ ಬಯಲಿನ ಸಂಸ್ಕೃತಿಯಲ್ಲಿಯೇ ಇತ್ತು ಎಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ವೀರಶೈವ ಧರ್ಮದ ಪಂಚಪೀಠಗಳ ಅನೇಕ ಮಹತ್ವದ ದಾಖಲೆಗಳು, ಕ್ರಿಸ್ತ ಪೂರ್ವ 5ನೇ ಶತಮಾನದಿಂದ ಕ್ರಿ.ಶ. 19ನೇ ಶತಮಾನದ ವರೆಗೆ ಲಭ್ಯವಾಗಿರುವ ಅಪೂರ್ವ ಶಾಸನಗಳಲ್ಲಿ, ವೇದ, ಆಗಮ, ಉಪನಿಷತ್ತುಗಳಲ್ಲಿ, ಪುರಾಣಗಳಲ್ಲಿ, ಸಂಸ್ಕೃತ ಕಾವ್ಯಗಳಲ್ಲಿ, ತಮಿಳು ಸಾಹಿತ್ಯದಲ್ಲಿ, ಕನ್ನಡದ ವೀರಶೈವ ಕವಿಗಳ ಕಾವ್ಯಗಳಲ್ಲಿ, ಪ್ರಾಕ್ತನ ಅವಶೇಷಗಳಲ್ಲಿ, ಅನೇಕ ಶಿಲ್ಪಗಳಲ್ಲಿ, ಕಾಂಬೋಡಿಯಾ, ಶ್ರೀಲಂಕಾ, ನೇಪಾಲ, ಜಾವಾ, ಕೆಂಬಿಜ್‌, ಯುರೋಪ್‌ ಹಾಗೂ ಮೆಡಿಟರೇನಿಯನ್‌ ತೀರದ ಪ್ರದೇಶಗಳಲ್ಲಿ ಲಭ್ಯವಾದ ವೀರಶೈವ ಧರ್ಮದ ವಿಶಿಷ್ಟ ಆಕರಗಳು ವೀರಶೈವ ಧರ್ಮದ ಪ್ರಾಚೀನತೆಯನ್ನು ಸಾಕ್ಷೀಕರಿಸುತ್ತಿದ್ದು, ವೀರಶೈವವು ಉತ್ಕೃಷ್ಟ ಸನಾತನ ಧರ್ಮವೆಂಬುದನ್ನು ಸಾಬೀತುಪಡಿಸುತ್ತವೆ.

ವೀರಶೈವ ಧರ್ಮದ ಅಖಂಡತೆಯನ್ನು ಮರೆಮಾಚಲು ವೀರಶೈವ ಧರ್ಮದ ವಿಚಾರಗಳನ್ನು ಕೇವಲ 12ನೇ ಶತಮಾನಕ್ಕಷ್ಟೇ ಸಿಮೀತಗೊಳಿಸಿ ಪ್ರತಿಪಾದಿಸುವ ವಿಚಾರಗಳು ಪ್ರಕ್ಷಿಪ್ತವಾದವುಗಳು ಎಂದೂ ಅವರು ಹೇಳಿದರು.

ವಚನಗಳಲ್ಲಿ ವೀರಶೈವ: ಈ ತನಕ ಲಭ್ಯವಾದ ಒಟ್ಟು ವಚನ ವಾಘ್ಮಯದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಚನಗಳಲ್ಲಿ “ವೀರಶೈವ’ ಪದಪ್ರಯೋಗವಾಗಿದ್ದು, ಕೈ ಬೆರಳಿಗೆ ಎಣಿಕೆಯಾಗುವಷ್ಟು ವಚನಗಳಲ್ಲಿ ಮಾತ್ರ “ಲಿಂಗಾಯತ’ ಪದಪ್ರಯೋಗವಾಗಿದ್ದನ್ನು ಗಮನಿಸಬೇಕಾಗುತ್ತದೆ ಎಂದೂ ಡಾ| ವೀರಭದ್ರಯ್ಯ ಹೇಳಿದರು.

ಅಮೆರಿಕದ ಮಿನ್ನೆಸೋಟ ನಗರದ ಕನ್ನಡ ಓದುಗರ ಕಟ್ಟೆ ಸಂಘಟನೆಯ ಪರವಾಗಿ ಡಾ| ವೀರಭದ್ರಯ್ಯ ಹಾಗೂ ಅವರ ಪತ್ನಿ ಎಂ.ಸಿ. ಉಷಾರಾಣಿ ವೀರಭದ್ರಯ್ಯ ಅವರನ್ನು ಗೌರವಿಸಲಾಯಿತು. ಮಿನ್ನೆಸೋಟ ಕನ್ನಡ ಓದುಗರ ಕಟ್ಟೆಯ ಹರೀಶ್‌ ಕೃಷ್ಣಪ್ಪ, ದಿನೇಶ್‌ ಪಟ್ಟಣಶೆಟ್ಟಿ, ಮೋಹನ್‌ ಮಠದ, ಮಿನ್ನೆಸೋಟ ಸಂಗೀತ ಕನ್ನಡ ಬಳಗದ ರಮೇಶ ಮುನಿಸ್ವಾಮಿ, ಗೋಪಾಲ ಹಿರೇಗೊಪ್ಪ, ಸ್ವಾಮಿ ಬೇಗೂರು ಇತರರು ಇದ್ದರು.

ಟಾಪ್ ನ್ಯೂಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Amith-sha

New Criminal Laws: ಪೂರ್ಣ ಸ್ವದೇಶಿ, ನ್ಯಾಯ ಆಧಾರಿತ, ಸಂತ್ರಸ್ತರ ಪರ- ಅಮಿತ್‌ ಶಾ

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.