ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ನೂತನ ಆಡಳಿತ ಮಂಡಳಿ

Team Udayavani, Aug 31, 2024, 2:10 PM IST

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಬಹ್ರೈನ್‌: ಇಪ್ಪತ್ತನೆಯ ವರುಷದ ಸಂಭ್ರಮದಲ್ಲಿರುವ ಇಲ್ಲಿನ ಅನಿವಾಸಿ ಮೊಗವೀರ ಸಮುದಾಯದ ಸಂಘಟನೆಯಾದ “ಮೊಗವೀರ್ಸ್‌ ಬಹ್ರೈನ್‌’ ಸಂಘಟನೆಯ ನೂತನ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಬಂದಿದ್ದು ಇದರ ವಿದ್ಯುಕ್ತ ಪದಗ್ರಹಣ ಸಮಾರಂಭವು ಇಲ್ಲಿನ ಅದ್ಲಿಯಾ ಪರಿಸರದಲ್ಲಿರುವ “ಬಾನ್‌ ಸಾಂಗ್‌ ತಾಯ್‌’ ಹೊಟೇಲಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು.

ನಾಡಿನಿಂದ ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಆಗಮಿಸಿದ್ದ ಮೊಗವೀರ ಸಮುದಾಯದ ಸಾಧಕರು, ದ್ವೀಪದ ಆಹ್ವಾನಿತ ಅತಿಥಿಗಳು, ಇಲ್ಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ಆಡಳಿತ ಮಂಡಳಿಗೆ ಶುಭ ಹಾರೈಸಿದರು. ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷೆ ಶಿಲ್ಪಾ ಶಮಿತ್‌ ಕುಂದರ್‌, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಅತಿಥಿಗಳು ಒಂದಾಗಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಾಯ್ನಾಡಿನಿಂದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷರಾದ ಜಯ. ಸಿ. ಕೋಟ್ಯಾನ್‌, ಗೌರವ ಅತಿಥಿಗಳಾಗಿ ಜಯಂತಿ ಜಯ ಕೋಟ್ಯಾನ್‌, ಬಡ ಎರ್ಮಾಳ್‌ ಫಿಶರ್‌ಮ್ಯಾನ್‌ ಪ್ರೈಮರಿ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ದಿನೇಶ್‌ ಎರ್ಮಾಳ್‌ ಜತೆಗೆ ಮೊಗವೀರ್ಸ್‌ ಒಮಾನ್‌ನ ಅಧ್ಯಕ್ಷರಾದ ಪದ್ಮಾಕರ್‌ ಮೆಂಡನ್‌, ಸೌದಿ ಅರೇಬಿಯಾದಿಂದ ರವಿ ಕರ್ಕೇರ ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾದಂತಹ ಜಯ ಕೋಟ್ಯಾನ್‌ ಹಾಗೂ ಇತರ ಅತಿಥಿಗಳನ್ನು ಮೊಗವೀರ್ಸ್‌ ಬಹ್ರೈನ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ , ಸ್ಮರಣಿಕೆಗಳೊಂದಿಗೆ ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿ ಮಾತನಾಡಿಸ ಜಯ ಕೋಟ್ಯಾನ್‌ ಹಾಗೂ ಇತರರು ಮೊಗವೀರ್ಸ್‌ ಬಹ್ರೈನ್‌ನ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಹೊಗಳಿ ಶುಭಹಾರೈಸಿದರು.

ಅಧ್ಯಕ್ಷೆ ಶಿಲ್ಪಾ ಶಮಿತ್‌ ಕುಂದರ್‌ , ನೆರೆದವರನ್ನು ಉದ್ದೇಶಿಸಿ ಮಾತನಾಡಿ ಇಪ್ಪತ್ತರ ಹೊಸ್ತಿಲಲ್ಲಿರುವ “ಮೊಗವೀರ್ಸ್‌ ಬಹ್ರೈನ್‌ಗೆ ಎಲ್ಲರ ಬೆಂಬಲ ಅತ್ಯಗತ್ಯ ಎಂದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಮೊಗವೀರ್ಸ್‌ ಬಹ್ರೈನ್‌ ಸಂಘಟನೆಯ ಸದಸ್ಯರಿಂದ ಹಾಡು, ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ವೇದಿಕೆಯಲ್ಲಿ ಪ್ರದರ್ಶನಗೊಂಡು ಎಲ್ಲರ ಮನಸೂರೆಗೊಂಡಿತು.

ವೇದಿಕೆಯಲ್ಲಿ ಜಯ.ಸಿ .ಕೋಟ್ಯಾನ್‌, ದಿನೇಶ್‌ ಎರ್ಮಾಳ್‌, ಒಮಾನ್‌ ಮೊಗವೀರ್ಸ್‌ನ ಅಧ್ಯಕ್ಷ ಪದ್ಮಾಕರ್‌ ಮೆಂಡನ್‌, ಮೊಗವೀರ್ಸ್‌ ಬಹ್ರೈನ್‌ನ ಅಧ್ಯಕ್ಷೆ ಶಿಲ್ಪ ಶಮಿತ್‌ ಕುಂದರ್‌, ಉಪಾಧ್ಯಕ್ಷ ವಿನೋದ್‌ ಶ್ರೀಯಾನ್‌, ಕನ್ನಡ ಸಂಘದ ಉಪಾಧ್ಯಕ್ಷ ಮಹೇಶ್‌ ಪೂಜಾರಿ, ರವಿ ಕರ್ಕೇರ ಸೌದಿ ಅರೇಬಿಯಾ, ನಾಗೇಶ್‌ ನಾಯ್ಕ್‌ ಹಾಗೂ ರಂಜನ್‌ ಸಾಲಿಯಾನ್‌ ಉಪಸ್ಥಿತರಿದ್ದರು.
ಸುರೇಖ ತೀರ್ಥ ಸುವರ್ಣ ಹಾಗೂ ದಿವ್ಯ ಚಂದ್ರ ಅಚ್ಚುಕಟ್ಟಾಗಿ ನಿರೂಪಿಸಿದರು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.