UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು


Team Udayavani, Jun 29, 2024, 3:10 PM IST

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

ದುಬೈ:ಅರಬ್‌ ಸಂಯುಕ್ತ ಸಂಸ್ಥಾನದ ರಾಸ್‌ ಅಲ್‌ ಖೈಮಾ ಎಮಿರೇಟ್ಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್‌ ಕರ್ನಾಟಕ ಸಂಘ, ರಾಸ್‌ ಅಲ್‌ ಖೈಮಾದ ಅಶ್ರಯದಲ್ಲಿ ಜೂ.16ರಂದು ರಾಸ್‌ ಅಲ್‌ ಖೈಮಾ ಇಂಡಿಯನ್‌ ಅಸೋಸಿಯೇಶನ್‌ ಸಭಾಂಗಣದಲ್ಲಿ ಅನಿವಾಸಿ ಕನ್ನಡಿಗರ ಮಕ್ಕಳಿಗಾಗಿ ಪ್ರತಿಭಾನ್ವೇಷಣೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಬೆಳಗ್ಗೆ 10.00 ಗಂಟೆಗೆ ರಾಕ್‌ ಕರ್ನಾಟಕ ಸಂಘ ರಾಸ್‌ ಅಲ್‌ ಖೈಮಾ ದ ಅಧ್ಯಕ್ಷರಾದ ಸಂತೋಷ್‌ ಹೆಗ್ಡೆ, ಮುಖ್ಯ ಅತಿಥಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸಮ್ಮುಖದಲ್ಲಿ ಯುಎಇ ಮತ್ತು ಭಾರತ ರಾಷ್ಟ್ರ ಗೀತೆ ಹಾಗೂ ಕರ್ನಾಟಕ ನಾಡ ಗೀತೆಯೊಂದಿಗೆ ಜ್ಯೋತಿ ಬೆಳಗಿಸಿ ಉದ್ಘಾಟಿಸಲಾಯಿತು.

ಅಬುದಾಭಿ ಕರ್ನಾಟಕ ಸಂಘದ ಅಧ್ಯಕ್ಷರು ಸರ್ವೋತ್ತಮ ಶೆಟ್ಟಿಯವರು, ಕರ್ನಾಟಕ ಸಂಘ ಶಾರ್ಜಾದ ಪೂರ್ವ ಅಧ್ಯಕ್ಷರು ಬಿ. ಕೆ. ಗಣೇಶ್‌ ರೈ, ಸಂಜನಾ, ಸುಕನ್ಯಾ ಶರತ್‌, ಸೋನಿಯಾ ಲೋಬೊ, ಶ್ರೀಲತಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಅಶೋಕ್‌ ಬೈಲೂರ್‌, ಸಂತೋಷ ಶೆಟ್ಟಿ ಪೊಳಲಿ ಸಮಾರಂಭದಲ್ಲಿ ಭಾಗಿಯಾಗಿದ್ದರು.

ನಾಲ್ಕು ವಿಭಾಗದಲ್ಲಿ ವಿವಿಧ ವಯೋಮಿತಿಯ ಮಕ್ಕಳು ಭಾಗವಹಿಸಿ ಮಕ್ಕಳಿಗೆ ಚಿತ್ರಿಸಲು ನೀಡಲಾಗಿದ್ದ ವಿಷಯ ಅಮ್ಮ, ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು, ಪರಿಸರ ಸಂರಕ್ಷಣೆ, ಸಹಿಷ್ಣುತೆ ಮತ್ತು ಸಹಬಾಳ್ವೆಯ ಬಗ್ಗೆ ಭಾಗವಹಿಸಿದ ಸ್ಪರ್ಧಿಗಳು ಅತ್ಯಂತ ಉತ್ಸಾಹದಿಂದ ಸುಂದರವಾದ ಚಿತ್ರಗಳನ್ನು ಮೂಡಿಸಿದ್ದರು. ತೀರ್ಪುಗಾರರಾಗಿ ಕ್ರಿಯಾತ್ಮಕ ಕಲಾ ನಿರ್ದೇಶಕರು ಬಿ. ಕೆ. ಗಣೇಶ್‌ ರೈ ಹಾಗೂ ರಾಸ್‌ ಅಲ್‌ ಖೈಮಾ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ಸಂಜನಾ ಭಾಗವಹಿಸಿದ್ದರು.

ಗಾಯನ ಸ್ಪರ್ಧೆಯಲ್ಲಿ ಹಲವು ಮಕ್ಕಳು ಭಾಗವಹಿಸಿದ್ದರು. ಸುಕನ್ಯಾ ಶರತ್‌ ಮತ್ತು ಡಾ| ರವಿ ಶಂಕರ್‌ ತಾಳಿತ್ತಾಯ ತೀರ್ಪುಗಾರರಗಿದ್ದರು. ನೃತ್ಯ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ತಮ್ಮ ಆಕರ್ಷಕ ನೃತ್ಯ ಪ್ರದರ್ಶನಗಳ ಮೂಲಕ ಪ್ರೇಕ್ಷಕರ ಮನ ಸೆಳೆದರು ತೀರ್ಪುಗಾರರಾಗಿ ಸೋನಿಯಾ ಲೋಬೊ ಮತ್ತು ಶ್ರೀಲತಾ ತೀರ್ಪು ನೀಡಿದರು.

ಸಮಾರೋಪ ಸಮಾರಂಭದಲ್ಲಿ ಸರ್ವೋತ್ತಮ ಶೆಟ್ಟಿಯವರು ರಾಕ್‌ ಕರ್ನಾಟಕ ಸಂಘದ ಕನ್ನಡ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ತೀರ್ಪುಗಾರರ ಪರವಾಗಿ ಬಿ. ಕೆ. ಗಣೇಶ್‌ ರೈಯವರು ಮಕ್ಕಳ ಪ್ರತಿಭೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ರಾಕ್‌ ಸಂಘಟನೆಯ ಕಾರ್ಯ ಯೋಜನೆಗಳನ್ನು ಶ್ಲಾಘಿಸಿದರು.

ಚಿತ್ರ ರಚನೆ ಮಾಡಿರುವ ಮಕ್ಕಳ ಚಿತ್ರಗಳ ಪ್ರದರ್ಶನ ಮಾಡಲಾಗಿತ್ತು. ವಿವಿಧ ವಿಭಾಗಳಲ್ಲಿ ಭಾಗವಹಿಸಿರುವ ಎಲ್ಲ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎಲ್ಲ ಪ್ರಾಯೋಜಕರುಗಳನ್ನು ಹಾಗೂ ರಾಕ್‌ ಸಿರೆಮಿಕ್ಸ್‌ ಸಂಸ್ಥೆಯ ಎಲ್‌. ಎಸ್‌. ಪಾಟೀಲ್‌ ಮತ್ತು ಕನ್ನಡಿಗರ ತಂಡವನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ದಿನಪೂರ್ತಿ ನಡೆದ ವಿವಿಧ ಕಾರ್ಯಕ್ರಮಗಳ ನಿರೂಪಣೆಯನ್ನು ಡಾ| ಕವಿತಾ ರಾವ್‌, ಸಿ. ಹರ್ಷ ಬಸವರಾಜ್‌, ಸವಿತಾ ಪ್ರಕಾಶ್‌, ಅಕ್ಷತಾ ಕಿಶೋರ್‌, ಅನುಪಮ ಕಲುºರ್ಗಿ, ಇಂದು ಆನಂದ್‌ ಅವರು ನೆರವೇರಿಸಿಕೊಟ್ಟರು. ರಾಕ್‌ ಕರ್ನಾಟಕ ಸಂಘದ ಅಧ್ಯಕ್ಷರ ಜತೆಗೆ ಉಪಾಧ್ಯಕ್ಷರಾದ ರಮೇಶ್‌ ರಂಗಪ್ಪ, ಕಾರ್ಯದರ್ಶಿ ಆಶಾ ಹೇಮಾದ್ರಿ, ಗೃಹಪಾಠ ಅಧ್ಯಕ್ಷರು ಡಾ| ಲೇಕಾ, ಸಾಂಸ್ಕೃತಿಕ ಕಾರ್ಯದರ್ಶಿ ಜಾನ್‌ ಇಮ್ಯಾನುವಲ್‌ ಹಾಗೂ ದೀಪಾ ಮತ್ತು ಇಂದೂ ಅವರ ಹಲವು ದಿನಗಳ ಪೂರ್ವಭಾವಿ ತಯಾರಿಯೊಂದಿಗೆ ನಡೆದ ಪ್ರತಿಭಾನೆಷಣೆ ಸ್ಪರ್ಧೆ ಅತ್ಯಂತ ಯಶಸ್ವಿಯಾಯಿತು.

ವರದಿ: ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Sirsi ಮೂಲದ ಡಾ.ಶೃತಿ ಹೆಗಡೆಗೆ ಒಲಿದ ವಿಶ್ವ ಸುಂದರಿ 2024 ಪ್ರಶಸ್ತಿ

Sirsi ಮೂಲದ ಡಾ.ಶೃತಿ ಹೆಗಡೆಗೆ ಒಲಿದ ವಿಶ್ವ ಸುಂದರಿ 2024 ಪ್ರಶಸ್ತಿ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Sirsi ಮೂಲದ ಡಾ.ಶೃತಿ ಹೆಗಡೆಗೆ ಒಲಿದ ವಿಶ್ವ ಸುಂದರಿ 2024 ಪ್ರಶಸ್ತಿ

Sirsi ಮೂಲದ ಡಾ.ಶೃತಿ ಹೆಗಡೆಗೆ ಒಲಿದ ವಿಶ್ವ ಸುಂದರಿ 2024 ಪ್ರಶಸ್ತಿ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.