
ಶರಣರ ತತ್ವಾದರ್ಶ ಪಾಲನೆ ಅಗತ್ಯ
ಯುವ ಸಮೂಹ ದಾರ್ಶನಿಕರ ವಿಚಾರಧಾರೆ ಅಳವಡಿಸಿಕೊಳ್ಳಲಿ: ವಿನೋತ್ ಪ್ರಿಯಾ
Team Udayavani, Apr 11, 2019, 5:31 PM IST

ಚಿತ್ರದುರ್ಗ: ಸಾಧು ಸಂತರಾದ ದೇವರ ದಾಸಿಮಯ್ಯ ಸೇರಿದಂತೆ ನಾಡಿನ ಸಂತರ, ಶರಣರ, ವಚನಕಾರರ, ವಿದ್ವಾಂಸರ ವಿಚಾರಧಾರೆಗಳನ್ನು ಯುವ ಸಮೂಹ ಅರಿತುಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸರಳ ಸಾಹಿತ್ಯದೊಂದಿಗೆ ವಚನಗಳ ಮೂಲಕ ಆಧ್ಯಾತ್ಮಿಕ ಮತ್ತು ಬೌದ್ಧಿಕ ವಿಚಾರಗಳಿಗೆ ಶಕ್ತಿಯನ್ನು ತುಂಬಿದವರು ದೇವರ ದಾಸಿಮಯ್ಯ. ಮನುಕುಲದ ಉದ್ಧಾರಕ್ಕಾಗಿ ಅನೇಕ ವಚನಗಳನ್ನು ರಚಿಸಿ ಸಮಾಜಕ್ಕೆ ಸಂದೇಶ ನೀಡಿದರು ಎಂದರು.
ಪ್ರಸ್ತುತ ಯುವಜನರು ಸಾಮಾಜಿಕ ಜಾಲತಾಣಗಳು, ಹೊಸ ಮಾಧ್ಯಮದ ಪ್ರಭಾವದಿಂದ ನೈತಿಕ ಮೌಲ್ಯಗಳನ್ನು ಮರೆತು ಬದುಕುವ ವಾತಾವರಣ ನಿರ್ಮಾಣವಾಗಿದೆ. ಸಂತರು, ಶರಣರು, ವಚನಕಾರರ ಜೀವನ ಪರಿ, ಅವರು ಅನುಸರಿಸಿದ ತತ್ವ ಸಿದ್ಧಾಂತಗಳೊಂದಿಗೆ ನಡೆಯಬೇಕು. ಮುಂದಿನ ತಲೆಮಾರಿಗೂ ಇಂತಹ ದಾರ್ಶನಿಕರ ಮೌಲ್ಯಗಳನ್ನು ತಿಳಿಸಲು ಜಯಂತಿಗಳನ್ನು ಆಚರಿಸಲಾಗುತ್ತಿದೆ. ಯುವಜನರು ಅವರಂತೆ ನಡೆಯಲು ಪ್ರಾಮಾಣಿಕವಾಗಿ ಯತ್ನಿಸಬೇಕು ಎಂದು ಕರೆ ನೀಡಿದರು.
ನಗರಸಭೆ ಪೌರಾಯುಕ್ತೆ ಎಸ್. ಲಕ್ಷ್ಮೀ ಉಪನ್ಯಾಸ ನೀಡಿ, ದೇವರ ದಾಸಿಮಯ್ಯ ದೇವರಲ್ಲಿ ಅಪಾರ ಭಕ್ತಿಯನ್ನು ಹೊಂದಿದ್ದ ಮಹಾಪುರುಷರಾಗಿದ್ದರು. ಬೇರೆಡೆಯಿಂದ ವಲಸೆ ಬಂದು ಇಲ್ಲಿನ ಸಮಾಜದ ಅಸಮಾನತೆ, ಅಂಕು-ಡೊಂಕುಗಳನ್ನು ತಿದ್ದಲು ಮುಂದಾದರು. ನೇಕಾರ ಚೃತ್ತಿಯಲ್ಲಿ ನಿರತರಾಗಿ ಹಲವು ವಚನಗಳನ್ನು ರಚಿಸುತ್ತ ಜನರಿಗೆ ಜೀವನದ ಮೌಲ್ಯಗಳನ್ನು ಬಿತ್ತುತ್ತ ಸಾಗಿದರು. ಮನುಷ್ಯ ಮುಕ್ತಿ ಹೊಂದಲು ದೇವರಲ್ಲಿ ಅಪಾರವಾದ ಭಕ್ತಿಯನ್ನು ಹೊಂದಬೇಕಿಲ್ಲ, ಮಾಡುವ ಕಾಯಕದಲ್ಲಿ ಶ್ರದ್ಧೆ, ನಿಷ್ಠೆ, ವಿನಯದಿಂದಿದ್ದರೆ ಮುಕ್ತಿ ಪಡೆಯಬಹುದು ಎಂಬ ಸಂದೇಶ ಸಾರಿದವರು. ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದಿ ಮೌಡ್ಯ ಮತ್ತು ಜಾತಿ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದರು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ, ಉಪವಿಭಾಗಾಧಿ ಕಾರಿ ವಿಜಯ್ಕುಮಾರ್, ತಹಶೀಲ್ದಾರ್ ನಹೀದಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.