ಮಳೆ ಬರದಿದ್ರೂ ಮುಂಗಾರು ಬಿತ್ತನೆಗೆ ಸಿದ್ಧತೆ

ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ •42 ಸಾವಿರ ಕ್ವಿಂಟಲ್ ಸೋಯಾಬಿನ್‌ ಬೀಜಕ್ಕೆ ಬೇಡಿಕೆ

Team Udayavani, Jun 8, 2019, 10:36 AM IST

08-Juen-5

ಔರಾದ: ಕೃಷಿ ಇಲಾಖೆ ಅಧಿಕಾರಿಗಳ ಕಚೇರಿ.

ರವೀಂದ್ರ ಮುಕ್ತೇದಾರ
ಔರಾದ:
ತಾಲೂಕಿನಲ್ಲಿ ಇನ್ನೂ ಮುಂಗಾರು ಮಳೆ ಬಾರದೇ ಇದ್ದರೂ ಕೂಡ ರೈತರು ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅದರಂತೆಯೇ ಕೃಷಿ ಇಲಾಖೆ ಅಧಿಕಾರಿಗಳು ಕೂಡ ರೈತರಿಗೆ ಅಗತ್ಯ ಬೀಜ ವಿತರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಔರಾದ ಹಾಗೂ ಕಮಲನಗರ ತಾಲೂಕಿನ ವ್ಯಾಪ್ತಿಯ ರೈತರು ಮುಂಗಾರು ಬಿತ್ತನೆಗಾಗಿ ಭೂಮಿ ಹದ ಮಾಡಿ ಮಳೆ ಆಗಮನಕ್ಕೆ ಕಾಯುತ್ತಿದ್ದಾರೆ. ಬಿತ್ತನೆ ಮಾಡಲು ರೈತರು ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಕುಳಿತಿದ್ದಾರೆ. ಅದರಂತೆ ತಾಲೂಕು ಕೃಷಿ ಇಲಾಖೆ ಹಾಗೂ ಬೀಜ ವಿತರಣೆ ಕೇಂದ್ರದ ಅಧಿಕಾರಿಗಳು ರೈತರಿಗೆ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮೂರು ವರ್ಷಗಳಿಂದ ಸಕಾಲಕ್ಕೆ ಮಳೆಯಾಗದೆ ರೈತರು ಕೂಡ ತಮ್ಮ ಹೊಲದಲ್ಲಿನ ಬೆಳೆಗಳಲ್ಲಿ ಉತ್ತಮ ಇಳುವರಿ ತೆಗೆದಿಲ್ಲ. ಪ್ರಸಕ್ತ ಸಾಲಿನಲ್ಲಾದರೂ ಸಕಾಲಕ್ಕೆ ಮಳೆ ಬಂದು ಉತ್ತಮ ಇಳುವರಿ ತೆಗೆಯಬೇಕು ಎನ್ನುವ ನಿರೀಕ್ಷೆಯಲ್ಲಿ ತಾಲೂಕಿನ ರೈತರಿದ್ದಾರೆ. ಬೀದರ ಜಿಲ್ಲೆಯ ಭಾಲ್ಕಿ, ಹುಮನಬಾದ ಮತ್ತು ಬಸವಕಲ್ಯಾಣ ತಾಲೂಕಿನಲ್ಲಿ ಈಗಾಗಲೆ ಮುಂಗಾರು ಮಳೆ ಪ್ರವೇಶ ಮಾಡಿದೆ. ಆದರೆ ತಾಲೂಕಿನಲ್ಲಿ ಮಾತ್ರ ಇನ್ನೂ ಒಂದು ಹನಿಯೂ ಮಳೆ ಬಂದಿಲ್ಲ.

ಬೀಜ ವಿತರಣೆ ಕೇಂದ್ರಗಳು: ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ 17 ಬೀಜ ವಿತರಣೆ ಕೇಂದ್ರಗಳಲ್ಲಿ ರೈತರಿಗೆ ಬೀಜ ವಿತರಣೆ ಮಾಡಲು ಕೃಷಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ರೈತ ಸಂಪರ್ಕ ಕೇಂದ್ರ ಔರಾದ, ಎಕಂಬಾ , ಚಿಂತಾಕಿ, ಸುಂಧಾಳ, ವಡಗಾಂವ(ದೇ), ಕೌಠಾ(ಬಿ), ಸಂತಪೂರ, ಠಾಣಾಕುಶನೂರ, ಮುಧೋಳ(ಬಿ),ಧೂಪತಮಗಾಂವ, ಕಮಲನಗರ, ಬೆಳಕೂಣಿ, ತೋರರ್ಣಾ,ದಾಬಕಾ, ಸಾವರಗಾಂವ, ಮುರ್ಕಿ, ಹೋಕ್ರಣಾ ಬೀಜ ವಿತರಣೆ ಕೇಂದ್ರಗಳಲ್ಲಿ 14 ಜನ ಅಧಿಕಾರಿಗಳಿಂದ ಬೀಜ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಲೂಕಿನಲ್ಲಿ 88,760 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿಯಿದೆ. ಅನ್ನದಾತರು ಸೋಯಾಬಿನ್‌ ಬೆಳೆ ಮೇಲೆ ಹೆಚ್ಚು ಅವಲಂಬನೆಯಾಗಿದ್ದಾರೆ. 42 ಸಾವಿರ ಕ್ವಿಂಟಲ್ ಸೋಯಾಬಿನ್‌ ಬೀಜದ ಬೇಡಿಕೆಯಿದ್ದು 25 ಸಾವಿರ ಕ್ವಿಂಟಲ್ ಸಂಗ್ರಹ ಮಾಡಲಾಗಿದೆ. ಇನ್ನೂ 16,500 ಕ್ವಿಂಟಲ್ ಬೀಜ ಬರಬೇಕಾಗಿದೆ. ತೊಗರಿ 20 ಸಾವಿರ ಕ್ವಿಂಟಲ್ ಬೇಡಿಯಿದ್ದು, 10ಸಾವಿರ ಕ್ವಿಂಟಲ್ ಸಂಗ್ರಹ ಮಾಡಲಾಗಿದೆ. ಇನ್ನೂ 10 ಸಾವಿರ ಕ್ವಿಂಟಲ್ ಬೀಜ ಬರಬೇಕಾಗಿದೆ. ಉದ್ದು 8 ಸಾವಿರ ಕ್ವಿಂಟಲ್ ಬೇಡಿಕೆಯಿದ್ದು ಈಗಾಗಲೆ 5 ಕ್ವಿಂಟಲ್ ಬೀಜ ಸಂಗ್ರಹ ಮಾಡಲಾಗಿದೆ. ಇನ್ನೂ ಮೂರು ಕ್ವಿಂಟಲ್ ಬರಬೇಕಾಗಿದೆ. ಹೆಸರು 7500 ಕ್ವಿಂಟಲ್ ಬೇಡಿಕೆಯಿದ್ದು 7ಸಾವಿರ ಕ್ವಿಂಟಲ್ ಸಂಗ್ರಹ ಮಾಡಲಾಗಿದೆ. 500 ಕ್ವಿಂಟಲ್ ಬರಬೇಕಾಗಿದೆ. ಜೋಳ 9 ಸಾವಿರ ಕ್ವಿಂಟಲ್ ಬೇಡಿಕೆಯಿದೆ. 9 ಕ್ವಿಂಟಲ್ ಸಂಗ್ರಹ ಮಾಡಲಾಗಿದೆ. ಹತ್ತಿ 500 ಕ್ವಿಂಟಲ್ ಬೇಡಿಕೆಯಿದೆ. ಸೂರ್ಯಕಾಂತಿ 700 ಕ್ವಿಂಟಲ್ ಬೇಡಿಕೆಯಿದೆ. ಸಂಪೂರ್ಣವಾಗಿ ಶೇಖರಣೆ ಮಾಡಲಾಗಿದೆ. ಎಳ್ಳು 200 ಕ್ವಿಂಟಲ್ ಬೇಡಿಕೆಯಾಗಿದ್ದು, ಸಂಗ್ರಹ ಮಾಡಲಾಗಿದೆ.

ಶಾಂತಿ ಕಾಪಾಡಿ: ತಾಲೂಕಿ ಸಾಮಾನ್ಯ ರೈತರಿಗೆ ಶೇ.75 ರಿಯಾಯಿತಿ ಹಾಗೂ ಎಸ್‌ಸಿ-ಎಸ್‌ಟಿ ಸಮುದಾಯದ ರೈತರಿಗೆ ಶೇ.90 ರಿಯಾಯಿತಿ ದರಲ್ಲಿ ಸರ್ಕಾರದಿಂದ ಬೀಜ ವಿತರಣೆ ಮಾಡಲಾಗುತ್ತಿದ್ದು, ರೈತರು ಶಾಂತಿ ಕಾಪಾಡುವ ಮೂಲಕ ಅಧಿಕಾರಿಗಳಿಗೆ ಸಹಕಾರ ನೀಡಲು ಮುಂದಾಗಬೇಕು. ರೈತರಿಗೆ ಸಕಾಲಕ್ಕೆ ಬೀಜ ವಿತರಣೆ ಮಾಡುವುದೇ ನಮ್ಮ ಇಲಾಖೆಯ ಮೂಲ ಗುರಿಯಾಗಿದೆ ಎಂದು ತಾಲೂಕು ಕೃಷಿ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.