ಸರ್ಕಾರಿ ಶಾಲೆ ನೋಡಿ ಮೂಗು ಮುರಿಯದಿರಿ!
ಶಾಲೆ ಏಳ್ಗೆಗೆ ಎರಡು ಲಕ್ಷ ರೂ. ದೇಣಿಗೆ ನೀಡಿದ ಗ್ರಾಮಸ್ಥರು
Team Udayavani, Sep 5, 2019, 10:54 AM IST
ಆಳಂದ: ಸಾಲೇಗಾಂವ ಗ್ರಾಮದ ಸಂಗಮನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ.
ಮಹಾದೇವ ವಡಗಾಂವ
ಆಳಂದ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿದು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಇಂದಿನ ದಿನಮಾನಗಳಲ್ಲಿ ಅಪರೂಪ ಎನ್ನುವಂತೆ ತಾಲೂಕಿನ ಸಾಲೇಗಾಂವ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾದರಿಯ ಶಾಲೆ ಎನ್ನಿಸಿಕೊಳ್ಳುತ್ತಿದೆ.
ಕುಗ್ರಾಮವಾದರೂ ಶೈಕ್ಷಣಿಕ ವಾತಾವರಣ ಬೆಳೆದ ಹಿನ್ನೆಲೆಯಲ್ಲಿ ಇದುವರೆಗೂ ಗ್ರಾಮಸ್ಥರು 2 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆ ಹಣದಲ್ಲಿ ಒಂದು ಲಕ್ಷ ರೂ. ವೆಚ್ಚದಲ್ಲಿ ವೇದಿಕೆ ನಿರ್ಮಾಣ, 20 ಸಾವಿರ ರೂ. ವೆಚ್ಚದಲ್ಲಿ ಗಣಕ ಯಂತ್ರ, 10 ಸಾವಿರ ರೂ. ವೆಚ್ಚದಲ್ಲಿ ಪ್ರೊಜೆಕ್ಟರ್, ಮೂರು ಸಾವಿರ ವೆಚ್ಚದಲ್ಲಿ 65 ಊಟದ ತಟ್ಟೆ, ನೀರು ಸಂಗ್ರಕ್ಕೆ 500 ಲೀಟರ್ ಸಾಮರ್ಥ್ಯದ ಸಿಂಟ್ಯಾಕ್ಸ್, ನೀರೆತ್ತುವ ಮೋಟಾರ್, ಎಂಟು ಸಾವಿರ ರೂ.ದಲ್ಲಿ ಆವರಣದಲ್ಲಿ ಕಲ್ಲು ಹಾಸಿಗೆ ಹೀಗೆ ಬಂದ ದೇಣಿಗೆಯನ್ನೇ ಸದ್ಭಳಕೆ ಮಾಡಿದ ಹಿನ್ನೆಲೆಯಲ್ಲಿ ಶಾಲೆಯ ಮಕ್ಕಳಿಗೆ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ.
ಈ ಶಾಲೆಗೆ ಕಳೆದ ಎಂಟು ವರ್ಷಗಳಿಂದ ಏಕೋಪಾಧ್ಯ ಶಿಕ್ಷಕರಾಗಿದ್ದ ರವಿ ಚಿಕ್ಕಮಂಗಳೂರು ಅವರು, ಸತತ ಪ್ರಯತ್ನದ ಫಲದಿಂದ ಶಾಲೆಯ ಚಿತ್ರವಣನ್ನೇ ಬದಲಿಸುವ ಮೂಲಕ ಶಾಲೆಯೊಂದಿಗೆ ತಾವು ಸಹ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಪಾಲಕರ ಹಾಗೂ ವಿದ್ಯಾರ್ಥಿಗಳ ಪ್ರೀತಿ ಪಾತ್ರರಾಗಿದ್ದಾರೆ.
ಶಾಲೆ ಆರಂಭಗೊಂಡು 13 ವರ್ಷಗಳ ಅವಧಿಯಲ್ಲಿ ಎಂಟು ವರ್ಷ ಒಬ್ಬರೇ ಶಿಕ್ಷಕರಾಗಿದ್ದ ರವಿ ಅವರು, ಕೇವಲ ಶಾಲೆಗೆ ಶಿಕ್ಷಕರಾಗಿರದೇ, ಹೆಚ್ಚಿನ ಒತ್ತು ನೀಡಿ ಮಕ್ಕಳ ಕಲಿಕಾ ಗುಣಮಟ್ಟ, ಬ್ಯಾಂಕಿಂಗ್ ವ್ಯವಸ್ಥೆ, ಆವರಣದಲ್ಲಿ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಂದು ಮಗುವಿನ ಮೂಲಕ ಹತ್ತಾರು ಗಿಡ, ಮರ ಬೆಳೆಸಲು ಪ್ರೋತ್ಸಾಹ, ಶಾಲಾ ಕೈತೋಟ, ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ಮಿಂಚುವಂತೆ ಮಾಡಿದೆ. ಕ್ರೀಡೆ, ಮೊರಾರ್ಜಿ, ಕಿತ್ತೂರುರಾಣಿ ಚೆನ್ನಮ್ಮ, ಆದರ್ಶ ಶಾಲೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನವರು ಪಾಸಾಗುವಂತೆ ನೋಡಿಕೊಳ್ಳಲಾಗಿದೆ.
ಈ ಸದ್ಯ ಶಾಲೆಯಲ್ಲಿ ರವಿ ಮತ್ತು ವೆಂಕಟೇಶ ಗುತ್ತೇದಾರ ಎನ್ನುವ ಇಬ್ಬರು ಶಿಕ್ಷಕರು ಸೇರಿ ಮಕ್ಕಳ ಕಲಿಕೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಮೂಲಕ ಇನ್ನೂಳಿದ ಶಾಲೆಗಳಿಗೆ ಮಾದರಿಯಾಗಿದ್ದಾರೆ ಎಂದು ಪಾಲಕರು ಹೇಳಿಕೊಂಡಿದ್ದಾರೆ.
ಹಸಿರು ವನ ಶಾಲೆಗೊಂದು ವನ, ಮಗುವಿಗೊಂದು ಮರ ಯೋಜನೆ ಅಡಿಯಲ್ಲಿ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಸಿ ನೆಟ್ಟು ಅದರ ಬೆಳವಣಿಗೆ ಸಂಪೂರ್ಣ ಜವಾಬ್ದಾರಿ ವಹಿಸುವ ಮೂಲಕ ಆವರಣದಲ್ಲಿ ಹೊಂಗೆ, ಅರಳಿ, ಮಾವು, ಬೇವು, ತುಳಿಸಿ, ತೇಗ, ಅಶೋಕ, ನುಗ್ಗೆ ಕರಿಬೇವು, ಹುಣಿಸೆ, ಬದಾಮಿ ಹೀಗೆ ಅನೇಕ ಬೆಳೆದ ಮರಗಳು ಕಂಗಳಿಸುತ್ತಿವೆ.
ಬ್ಯಾಂಕಿಂಗ ವ್ಯವಸ್ಥೆ: ಶಾಲೆಯಲ್ಲೇ ವಿದ್ಯಾರ್ಥಿಗಳ ಖಾತೆ ತೆರೆದು ಉಳಿತಾಯದ ಹವ್ಯಾಸ ಬೆಳೆಸುವ ಮೂಲಕ ಬ್ಯಾಂಕ್ ವ್ಯವಹಾರದ ಜ್ಞಾನ ಮೂಡಿಸಲಾಗಿದೆ.
ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟದ ವರೆಗೂ ಮುಂಚೂಣಿಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಕೈಗನ್ನಡಿಯಾಗಿದೆ. ಇಲ್ಲಿ ಓದಿದ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಪೂರಕ ಎನ್ನುವುದಕ್ಕೆ ಹೆಚ್ಚಿನವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಿ ಆದರ್ಶ, ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ಶಾಲೆಗಳ ನೇಮಕಾತಿಯಲ್ಲಿ ಅನೇಕ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅಲ್ಲದೇ, ಗಣಿತ ಕಲಿಕಾ ಪರೀಕ್ಷೆಯಲ್ಲೂ ಮೂರು ಪ್ರಶಸ್ತಿಗಳನ್ನು ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ.
ಶಾಲೆಯ ಕೋಣೆಗಳಲ್ಲಿ ಗೋಡೆ ಬರಹ ಹಾಗೂ ಚಿತ್ರ ರಚನೆಯಲ್ಲಿ ಸ್ವತಃ ಶಿಕ್ಷಕ ರವಿ ಅವರು ಮಕ್ಕಳೊಂದಿಗೆ ಸೇರಿ ಅಂದ, ಚಂದವಾಗಿ ಮೂಡಿಸಿರುವುದು ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.