ನಿನ್ನೆ ಮತ್ತೆ 164 ಸ್ಯಾಂಪಲ್‌ ತಪಾಸಣೆಗೆ


Team Udayavani, Jun 1, 2020, 4:45 AM IST

ನಿನ್ನೆ ಮತ್ತೆ  164 ಸ್ಯಾಂಪಲ್‌ ತಪಾಸಣೆಗೆ

ಬಾಗಲಕೋಟೆ: ಜಿಲ್ಲೆಯಲ್ಲಿ 77 ಜನರಿಗೆ ಅಂಟಿದ್ದ ಕೋವಿಡ್, ಸದ್ಯ ತುಸು ತನ್ನ ಆರ್ಭಟವನ್ನು ಕಡಿಮೆ ಮಾಡಿದೆ. ಕಳೆದ 9 ದಿನಗಳಿಂದ ಒಂದೂ ಕೋವಿಡ್ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಇದರಿಂದ ಜನರು ಕೊಂಚ ನಿರ್ಲಿಪ್ತರಾಗಿದ್ದಾರೆ.

ಜಿಲ್ಲೆಯಲ್ಲಿ ಏ.3ರಿಂದ ಮೇ 22ರ ವರೆಗೆ ಒಟ್ಟು 77 ಜನರಿಗೆ ಈ ಸೋಂಕು ಖಚಿತವಾಗಿದ್ದು, ಅದರಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದು, 66 ಜನರು ಕೊರೊನಾ ಮುಕ್ತರಾಗಿ, ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 10 ಜನರು ಮಾತ್ರ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರೂ ಸಂಪೂರ್ಣ ಚೇತರಿಸಿಕೊಂಡು ಬಿಡುಗಡೆಗೊಳ್ಳಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

164 ಸ್ಯಾಂಪಲ್‌ ಪರೀಕ್ಷೆ: ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿ, ಜಿಲ್ಲಾಡಳಿತ ನಿಗದಿಪಡಿಸಿದ ವಸತಿ ನಿಲಯ, ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿ ಇದ್ದವರಲ್ಲಿ 164 ಜನರ ಗಂಟಲು ದ್ರವ ಮಾದರಿ ರವಿವಾರ ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ ಕಳುಹಿಸಿದ್ದ 1039 ಹಾಗೂ ರವಿವಾರ ಹೊಸದಾಗಿ ಕಳುಹಿಸಿದ 164 ಸಹಿತ ಒಟ್ಟು 1203 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಮೇ 17ರಿಂದ ಸ್ಥಳೀಯವಾಗಿ ಕೋವಿಡ್ ಪರೀಕ್ಷೆ ಲ್ಯಾಬ್‌ ಆರಂಭಗೊಂಡಿದ್ದು, ಈ ವರೆಗೆ ಒಟ್ಟು 169 ಜನರ ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿದೆ. ಉಳಿದ ಸ್ಯಾಂಪಲ್‌ಗ‌ಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

1151 ಜನರ ಬಿಡುಗಡೆ: ವಲಸೆ ಕಾರ್ಮಿಕರು ಸಹಿತ ಹೊರ ರಾಜ್ಯದಿಂದ ಆಗಮಿಸಿದ್ದ 3050 ಜನರನ್ನು ಜಿಲ್ಲಾಡಳಿತ ವಿವಿಧೆಡೆ ವಸತಿ ನಿಲಯ, ಶಾಲೆಗಳಲ್ಲಿ ಸರ್ಕಾರಿ ಕ್ವಾರಂಟೈನ್‌ ಮಾಡಿದ್ದು, 14 ದಿನಗಳ ಅವಧಿ ಪೂರ್ಣಗೊಂಡ 1151 ಜನರನ್ನು ಮನೆಗೆ ಬಿಡುಗಡೆ ಮಾಡಲಾಗಿದೆ. ಸದ್ಯ 1899 ಜನರು ಸರ್ಕಾರಿ ಕ್ವಾರಂಟೈನ್‌ ನಲ್ಲಿ ಇದ್ದಾರೆ. ಅಲ್ಲದೇ ಈ ವರೆಗೆ ಒಟ್ಟು 8172 ಜನರ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 6857 ಜನರ ವರದಿ ನೆಗೆಟಿವ್‌ ಬಂದಿವೆ. 77 ಜನರಿಗೆ ಪಾಜಿಟಿವ್‌ ಬಂದಿದ್ದು, 66 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಓರ್ವ ವೃದ್ಧ ಮೃತಪಟ್ಟಿದ್ದು, 10 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಸ್ಯಾಂಪಲ್‌ಗ‌ಳು ರಿಜೆಕ್ಟ್ ಆಗಿವೆ. ಸೋಂಕಿತ ವ್ಯಕ್ತಿಗಳು ಕಂಡು ಬಂದು, ಈಗಲೂ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳು ವಾಸಿಸುವ 3 ಪ್ರದೇಶಗಳನ್ನು ಇಂದಿಗೂ ಕಂಟೇನ್ಮೆಂಟ್‌ ಝೋನ್‌ ಗಳೆಂದು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.