ಆಯುರ್ವೇದದಿಂದ ನೆಮ್ಮದಿ ಜೀವನ; ಡಾ| ಶಿವಾನಂದ

ಆಧುನಿಕ ಯುಗದ ಜೀವನ ಶೈಲಿ ಎಲ್ಲ ರೀತಿಯಿಂದಲೂ ಮನುಷ್ಯನ ಜೀವನಕ್ಕೆ ಅಪಾಯ ತಂದಿಡುತ್ತಿದೆ

Team Udayavani, Jul 2, 2022, 5:15 PM IST

ಆಯುರ್ವೇದದಿಂದ ನೆಮ್ಮದಿ ಜೀವನ; ಡಾ| ಶಿವಾನಂದ

ಬಾಗಲಕೋಟೆ: ಇಂದಿನ ಆಧುನಿಕ ಯುಗದ ಜೀವನ ಶೈಲಿಯ ಭರಾಟೆಯಿಂದಾಗಿ ಜೀವನ ಶೈಲಿ ಹಳಿ ತಪ್ಪುತ್ತಿದೆ. ಇದರಿಂದ ರೋಗ ರುಜಿನಗಳು ಹರಡಿ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಇಂತಹ ಸಮಸ್ಯೆಗಳಿಗೆ ಅಧ್ಯಾತ್ಮ ಹಾಗೂ ಆಯುರ್ವೇದ ಪದ್ಧತಿಯೇ ಪರಿಹಾರ ನೀಡಬಲ್ಲದು ಎಂದು ಆಯುರ್ವೇದ ಪಂಡಿತ ಡಾ| ಶಿವಾನಂದ ರಾಥೋರ್‌ ಹೇಳಿದರು.

ನವನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾ ದಿನ ಹಾಗೂ ವೈದ್ಯರ ದಿನಾಚರಣೆ ನಿಮಿತ್ತ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇನ್ನರ್‌ವ್ಹಿಲ್‌ ಕ್ಲಬ್‌ ಸಹಯೋಗದಲ್ಲಿ ಆರ್ಯುವೇದ ಪದ್ಧತಿ ಮಹತ್ವ ಕುರಿತು ಅವರು ಮಾತನಾಡಿದರು.

ಮನುಷ್ಯನ ಸಕಲ ಸೌಭಾಗ್ಯಕ್ಕೂ ಆಯುರ್ವೇದ ಮದ್ದು, ಈ ದಿಸೆಯಲ್ಲಿ ಅದರತ್ತ ಆಸಕ್ತಿ ಬೆಳೆಸಿಕೊಂಡರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು ಹಾಗೂ ಆಧ್ಯಾತ್ಮದಿಂದ ನೆಮ್ಮದಿ ಸಾಧ್ಯ, ಅವರೆಡನ್ನು ಮೈಗೂಡಿಸಿಕೊಂಡರೆ ಪ್ರತಿಯೊಬ್ಬರು ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎಂದು ಹೇಳಿದರು.

ಪ್ರತಿಯೊಬ್ಬ ಮನುಷ್ಯನ ಆರೋಗ್ಯಕ್ಕೂ ಅಡುಗೆ ಮನೆಯೇ ಆರೋಗ್ಯ ಪಾಠ ಶಾಲೆ ಎಂದು ವಿಶ್ಲೇಷಿಸಿದ ಅವರು, ಮನೆಯಲ್ಲಿ ಅಡುಗೆಗೆ ಈ ಹಿಂದೆ ಹಿರಿಯರು ಅನುಸರಿಸುತ್ತಿರುವ ವಿಧಾನಗಳ ಅರಿವು ಹೊಂದಿ ಅವುಗಳನ್ನು ಮೈಗೂಡಿಸಿಕೊಂಡರೆ ಪ್ರತಿಯೊಬ್ಬ ಸುಖವಾಗಿ, ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದರು.

ಆಧುನಿಕ ಯುಗದ ಜೀವನ ಶೈಲಿ ಎಲ್ಲ ರೀತಿಯಿಂದಲೂ ಮನುಷ್ಯನ ಜೀವನಕ್ಕೆ ಅಪಾಯ ತಂದಿಡುತ್ತಿದೆ ಎಂದು ಎಚ್ಚರಿಸಿದ ಅವರು, ಜೀವನ ಶೈಲಿಯನ್ನು ಬದಲಿಸಿಕೊಂಡು, ಹಿಂದೆ ಹಿರಿಯರು ಅನುಸರಿಸುತ್ತಿರುವ ಆಯುರ್ವೆದ ಪದ್ಧತಿ ಹಾಗೂ ಆಧ್ಯಾತ್ಮದತ್ತ ಹೆಚ್ಚಿನ ಆಸಕ್ತಿ ತೋರಿದರೆ ಜೀವನದಲ್ಲಿ ಸಮೃದ್ಧಿ ಸಾಧಿ ಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಹೆಜ್ಜೆ ಇಡಬೇಕಾಗಿರುವುದು ಅಗತ್ಯವಾಗಿದೆ ಎಂದು ಡಾ| ಶಿವಾನಂದ ರಾಥೋರ್‌ ಹೇಳಿದರು.

ಇನ್ನರ್‌ವ್ಹಿಲ್‌ ಕ್ಲಬ್‌ ಅಧ್ಯಕ್ಷೆ ಗೀತಾ ಗಿರಿಜಾ ಮಾತನಾಡಿ, ಪತ್ರಕರ್ತರು ನಿರಂತರ ಒತ್ತಡದ ಮಧ್ಯೆಯೂ ಸಮಾಜದ ಒಳಿತಿಗಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ, ಅದಕ್ಕೆ ಇನ್ನರ್‌ವ್ಹಿಲ್‌ ಕ್ಲಬ್‌ ನಿರಂತರ ಸಹಕಾರ ನೀಡಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾನಿಪ ಸಂಘದ ಅಧ್ಯಕ್ಷ ಆನಂದ ಧಲಬಂಜನ್‌ ಮಾತನಾಡಿ, ಇಂದಿನ ಎಲ್ಲ ಸಮಸ್ಯೆಗಳಿಗೂ ಅರಿವು ಇಲ್ಲದೇ ಇರುವುದು ಮುಖ್ಯವಾಗಿದೆ, ಅದಕ್ಕಾಗಿ ಈ ಹಿಂದಿನ ಹಿರಿಯರು ಅನುಸರಿಸುತ್ತಿರುವ ಆಯುರ್ವೇದ ಹಾಗೂ ಅಧ್ಯಾತ್ಮದ ಬಗ್ಗೆ ಅರಿವು ಹೊಂದುವ ಜತೆಗೆ ಜೀವನ ಶೈಲಿ ಬದಲಿಸಿಕೊಂಡು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.

ಇನ್ನರ್‌ವ್ಹಿಲ್‌ ಕ್ಲಬ್‌ ಕಾರ್ಯದರ್ಶಿ ಶೋಭಾ ಕಾಮರೆಡ್ಡಿ, ಪದಾಧಿಕಾರಿಗಳಾದ ಸುನೀತಾ ವಾಸನದ, ಅನುಷಾ ಕೋರಾ, ವೀಣಾ ವಾಘ, ಜಿಲ್ಲಾ ಕಾನಿಪ ಪ್ರಧಾನ ಕಾರ್ಯದರ್ಶಿ ಶಂಕರ ಎಸ್‌. ಕಲ್ಯಾಣಿ, ಪತ್ರಕರ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಇನ್ನರ್‌ವ್ಹಿಲ್‌ ಕ್ಲಬ್‌ದಿಂದ ಜಿಲ್ಲಾ ಕಾನಿಪ ನೂತನ ಪದಾಧಿ ಕಾರಿಗಳನ್ನು ಸನ್ಮಾನಿಸಲಾಯಿತು. ಪ್ರಕಾಶ ಗುಳೇದಗುಡ್ಡ ನಿರೂಪಿಸಿದರು. ಶ್ರೀಶೈಲ ಬಿರಾದಾರ ಸ್ವಾಗತಿಸಿದರು. ಸಂತೋಷ ದೇಶಪಾಂಡೆ ವಂದಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.