ಐತಿಹಾಸಿಕ ಲಾವಣಿಗಳ ಅಧ್ಯಯನ ಅಗತ್ಯ; ಪ್ರೊ| ಟಿ.ಎಂ.ಭಾಸ್ಕರ

ಐತಿಹಾಸಿಕ ಸಂಗತಿ ಹೇಳುತ್ತಿರುವುದೇ ನಮ್ಮ ಸಂಸ್ಕೃತಿಯಾಗಿದೆ

Team Udayavani, Dec 29, 2022, 6:21 PM IST

ಐತಿಹಾಸಿಕ ಲಾವಣಿಗಳ ಅಧ್ಯಯನ ಅಗತ್ಯ; ಪ್ರೊ| ಟಿ.ಎಂ.ಭಾಸ್ಕರ

ಗುಳೇದಗುಡ್ಡ: ಇತಿಹಾಸವನ್ನು ವಸ್ತುನಿಷ್ಠವಾಗಿ ಹೇಳುವ ಮೂಲಕ ದೇಶಾಭಿಮಾನದ ಕಿಚ್ಚನ್ನು ಲಾವಣಿಗಳು ಹಚ್ಚುತ್ತವೆ. ಹೀಗಾಗಿ ಐತಿಹಾಸಿಕ ಲಾವಣಿಗಳ ಅಧ್ಯಯನ ಅಗತ್ಯವಾಗಿದೆ ಎಂದು ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಟಿ.ಎಂ.ಭಾಸ್ಕರ ಹೇಳಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ, ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಹಾಗೂ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲಿ ಶ್ರೀ ಜ.ಗು.ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಜರುಗಿದ ಚಾರಿತ್ರಿಕ ಲಾವಣಿಗಳು ಕುರಿತ ಪ್ರಚಾರೋಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದಲ್ಲಿ 1947ಕ್ಕಿತ ಮುಂಚೆ ಸ್ವಾತಂತ್ರ್ಯ ಹೋರಾಟಕ್ಕೆ ಲಾವಣಿಗಳು ಪ್ರೇರಣೆಯಾಗಿದ್ದವು ಎಂದರು. ಪ್ರೊ| ಬಿ.ಆರ್‌. ಪೊಲೀಸ್‌ ಪಾಟೀಲ ಚಾರಿತ್ರಿಕ ಲಾವಣಿಗಳ ಕುರಿತು ಪ್ರಚಾರೋಪನ್ಯಾಸ ನೀಡಿ ಮಾತನಾಡಿ, ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಾಗ ಲಾವಣಿಗಳು ಪ್ರೇರಣೆ ಒದಗಿಸುತ್ತವೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸಿದ ಹಲವು ಸಂಸ್ಥಾನಗಳು ಮತ್ತು ಹೋರಾಟಗಾರರ ಜೀವನ ಕಥೆಯನ್ನು ಹೇಳುತ್ತವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಶ್ರೀ 1008 ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಮಾತನಾಡಿ, ಬೆವರಿನ ಬಹುದೊಡ್ಡ ಸಮುದಾಯ ಜನಪದರದ್ದಾಗಿದೆ. ಇವರು ನಿಸ್ವಾರ್ಥ ಕಾಯಕ ಜೀವಿಗಳಾಗಿದ್ದು. ಬದುಕಿನ ಭಾಗವಾಗಿ ಜನಪದ ಹಾಡುಗಳನ್ನು ಕುಟ್ಟುವಾಗ, ಬೀಸುವಾಗ ಹಂತಿ ಹೊಡೆಯುವಾಗ, ಸೀಮಂತ, ಮದುವೆ ಹಬ್ಬ ಹರಿದಿನಗಳಲ್ಲಿ ಎಲ್ಲ ತರದ ಹಾಡುಗಳನ್ನು ಹಾಡುತ್ತಿದ್ದರು. ಐತಿಹಾಸಿಕ ಲಾವಣಿಗಳು ದೇಶದಲ್ಲಿ ಜರುಗಿದ ಐತಿಹಾಸಿಕ ಸಂಗತಿ ಹೇಳುತ್ತಿರುವುದೇ ನಮ್ಮ ಸಂಸ್ಕೃತಿಯಾಗಿದೆ ಎಂದರು. ಗುರುಬಸವ ದೇವರು ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ಡಾ| ಎಚ್‌.ಎಸ್‌.ಘಂಟಿ ಸ್ವಾಗತಿಸಿ-ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದ ಡಾ| ಸಿ.ಎಂ.ಜೋಶಿ ಅವರನ್ನು ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ| ಚಂದ್ರಶೇಖರ ಕಾಳನ್ನವರ, ಪ್ರೊ| ಎಸ್‌.ಬಿ. ಬರಗುಂಡಿ, ಡಾ| ಸಣ್ಣವೀರಣ್ಣ ಡಿ., ಡಾ| ಭೀಮನಗೌಡ ಪಾಟೀಲ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷ, ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.