ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ


Team Udayavani, Aug 27, 2024, 5:07 PM IST

ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ

■ ಉದಯವಾಣಿ ಸಮಾಚಾರ
ಬಾಗಲಕೋಟೆ: ಉತ್ತರ ಭಾರತದ ಗಂಗಾ ನದಿಗೆ ನಡೆಯುವ ಗಂಗಾರತಿ ಮಾದರಿಯಲ್ಲಿ ಕೃಷ್ಣಾ ನದಿಗೆ ಇದೇ ಮೊದಲ ಬಾರಿಗೆ ಕೃಷ್ಣಾರತಿ ಸಂಭ್ರಮದಿಂದ ನೆರವೇರಿತು. ವಾರಣಾಸಿಯ ಗಂಗಾರತಿ ತಂಡ ಹಾಗೂ ಮೈಸೂರು-ನಂಜನಗೂಡಿನಲ್ಲಿ ಕಾವೇರಿ ಆರತಿ ನಡೆಸುವ ಯುವಾ ಬ್ರಿಗೇಡ್‌ನ‌ ತಂಡದ ಸದಸ್ಯರು ಸುಮಾರು ಒಂದು ಗಂಟೆಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೈದುಂಬಿ ಹರಿಯುತ್ತಿರುವ ಕೃಷ್ಣೆಯ ಒಡಲಿಗೆ ಆರತಿ ಬೆಳಗಿದರು.

ವಾರಣಾಸಿಯಿಂದ ಆಗಮಿಸಿದ್ದ ಆಚಾರ್ಯ ರಣಧೀರ, ಅಮೀತ ಪಾಂಡೆ, ಸತ್ಯಂ ಮಿಶ್ರಾ, ಗೋವಿಂದ ತಿವಾರಿ, ಪ್ರಿನ್ಸ್‌ ಮಿಶ್ರಾ, ಹನುಮಾನಜಿ ಹಾಗೂ ನಂಜನಗೂಡಿನ ಯುವಾ ಬ್ರಿಗೇಡ್‌ನ‌ ಗಂಗಾರತಿ ತಂಡದ ಚಂದ್ರು, ನಿತಿನ್‌ ಮುಂತಾದವರನ್ನು ಒಳಗೊಂಡ ತಂಡ ಕೃಷ್ಣಾರತಿ ನೆರವೇರಿಸಿತು.

ಕಣ್ತುಂಬಿಕೊಂಡ ರೈತರು: ಈ ಭಾಗದ ರೈತರ ಜೀವನಾಡಿ ಕೃಷ್ಣೆಗೆ ಇದೇ ಮೊದಲ ಬಾರಿಗೆ ಸಂಭ್ರಮದಿಂದ ನಡೆದ ಕೃಷ್ಣಾರತಿ ವೀಕ್ಷಿಸಲು ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಯ ನದಿತೀರದ ವಿವಿಧ ಗ್ರಾಮಗಳ ರೈತರು ಕುಟುಂಬ ಸಮೇತ ಆಗಮಿಸಿದ್ದರು. ರೈತ ಮಹಿಳೆಯರು, ಕೃಷ್ಣೆಯ ಒಡಲಿಗೆ ಪೂಜೆ ಸಲ್ಲಿಸಿದರು. ಬಳಿಕ ಪರಸ್ಪರ ಉಡಿ ತುಂಬಿದರು. ಇದಾದ ಬಳಿಕ ನದಿಯ ಒಡಲಿಗೆ ಹೋಳಿಗೆ ಸಹಿತ ತರಹೇವಾರಿ ಸಿಹಿ ಪದಾರ್ಥಗಳನ್ನು ಅರ್ಪಿಸಿದರು.

ಪ್ರತಿ ವರ್ಷ ಕೃಷ್ಣಾರತಿ: ಇದಕ್ಕೂ ಮುನ್ನ ಹಿಪ್ಪರಗಿಯ ಸಂಗಮನಾಥ ದೇವಾಲಯದ ಆವರಣದಲ್ಲಿ ಕೃಷ್ಣೆಯ ನೀರಾವರಿ ಯೋಜನೆಗಳು, ಕೃಷ್ಣೆಗೆ ಸಾಂಸ್ಕೃತಿಕ ವೈಭವದ ಕೊರಗು ಕುರಿತ ಚಿಂತನ-ಮಂಥನ ನಡೆಯಿತು. ಈ ವೇಳೆ, ಉತ್ತರಭಾರತದ ಗಂಗಾ ನದಿಗೆ ನಡೆಯುವ ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿಯೂ ನಿರಂತರವಾಗಿ ನಡೆಯಬೇಕು.  ಅದಕ್ಕಾಗಿ ಕೃಷ್ಣಾರತಿ ಸೇವಾ ಸಮಿತಿಯನ್ನು ಅಧಿಕೃತವಾಗಿ ರಚಿಸಿ, ಅದಕ್ಕೆ ರೈತರೇ ದೇಣಿಗೆ ನೀಡಲು ನಿರ್ಧರಿಸಿದರು. ಇದೇ ವೇಳೆ ಹಿಪ್ಪರಗಿಯ ರೈತ ಸೋಮನಾಥಗೌಡ ಪಾಟೀಲ 50 ಸಾವಿರ ರೂ. ದೇಣಿಗೆ ನೀಡಿದರು.

ಗಣ್ಯರು ಭಾಗಿ: ಕೃಷ್ಣ ಜನ್ಮಾಷ್ಟಮಿ ಹಾಗೂ ಮಾಜಿ ಸಚಿವ ಮುರಗೇಶ ನಿರಾಣಿ ಅವರ 59ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಕೃಷ್ಣಾರತಿಯ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ತೇರದಾಳ ಶಾಸಕ ಸಿದ್ದು ಸವದಿ, ಹಿಪ್ಪರಗಿಯ ಪ್ರಭು ಮಹಾರಾಜರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಿಡಸೋಸಿಯ ನಿಜಲಿಂಗೇಶ್ವರ ಸ್ವಾಮೀಜಿ, ಆಲಗೂರಿನ ಪಂಚಮಸಾಲಿ ಪೀಠದ ಡಾ|ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಹುಲ್ಯಾಳದ ಹರ್ಷಾನಂದ ಸ್ವಾಮೀಜಿ, ಕುಂಚನೂರು ಕಮರಿ ಮಠದ ಶ್ರೀಗಳು ಸೇರಿದಂತೆ ಸಹಸ್ರಾರು ಜನರು ಪಾಲ್ಗೊಂಡಿದ್ದರು.

ಕೃಷ್ಣೆಗೆ ಕಲ್ಪನೆಗೂ ಮೀರಿ ಅನ್ಯಾಯವಾಗಿದೆ. ನಮ್ಮ ಜೀವನದಿ ಕೃಷ್ಣೆಗೆ ಎಲ್ಲ ರೀತಿಯ ಗೌರವ ದೊರೆಯಬೇಕು. ಸರ್ಕಾರ ಕೃಷ್ಣಾರತಿ ನಡೆಸಬೇಕು. ಇಲ್ಲದಿದ್ದರೆ ರೈತರೊಂದಿಗೆ ನಾವೇ ಈ ಸಂಭ್ರಮ ನಡೆಸುತ್ತೇವೆ. ಅಲ್ಲದೇ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಭಾಗದ ಕಾಳಿ ನದಿ ಸಹಿತ ಮೂರು ನದಿ ಜೋಡಣೆ ಯೋಜನೆಗಳನ್ನು ಜಾರಿಗೊಳಿಸಬೇಕು.
*ಸಂಗಮೇಶ ನಿರಾಣಿ, ಅಧ್ಯಕ್ಷರು,
ಉತ್ತರಕರ್ನಾಟಕ ನೀರಾವರಿ ಹೋರಾಟ ಸಮಿತಿ

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Karnataka Govt.,ಅಭಿವೃದ್ದಿ ಮೂಲಕವೇ ಉತ್ತರ ನೀಡುತ್ತೇವೆ: ಸಚಿವ ಆರ್.ಬಿ. ತಿಮ್ಮಾಪುರ

Karnataka Govt.,ಅಭಿವೃದ್ದಿ ಮೂಲಕವೇ ಉತ್ತರ ನೀಡುತ್ತೇವೆ: ಸಚಿವ ಆರ್.ಬಿ. ತಿಮ್ಮಾಪುರ

ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ

ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ

WhatsApp Image 2024-09-09 at 21.15.27

Ration Card; ಬಾಗಲಕೋಟೆಯಲ್ಲಿ 214 ಸರ್ಕಾರಿ ನೌಕರರ ಬಳಿ ಬಿಪಿಎಲ್‌

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.