ಅಧಿಕಾರಿಗಳ ಲೆಕ್ಕ; ಸಚಿವರ ಅನುಮಾನ

•ಕಂದಾಯ ಸಚಿವ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಸಭೆ •ಕೊಳವೆ ಬಾವಿ ಹಾಕುವುದೇ ಅಂತಿಮ ಪರಿಹಾರವಲ್ಲ

Team Udayavani, May 19, 2019, 10:17 AM IST

bagalkote-tdy-1..

ಬಾಗಲಕೋಟೆ: ಬರ ನಿರ್ವಹಣೆ ಕುರಿತ ಸಭೆಯಲ್ಲಿ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತು ಜಿಲ್ಲಾಡಳಿತ ವಿವಿಧ ಅಧಿಕಾರಿಗಳು ನೀಡಿದ ಲೆಕ್ಕಕ್ಕೆ ಸ್ವತಃ ಕಂದಾಯ ಸಚಿವರು ಸೇರಿದಂತೆ ಮೂವರು ಸಚಿವರು ಅನುಮಾನ ವ್ಯಕ್ತಪಡಿಸಿದ ಪ್ರಸಂಗ ಶನಿವಾರ ನಡೆಯಿತು.

ಜಿಪಂ ಸಭಾ ಭವನದಲ್ಲಿ ಸಂಜೆ ನಡೆದ ಬರ ನಿರ್ವಹಣೆ ಸಭೆಯಲ್ಲಿ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ಅವರು, ಅಧಿಕಾರಿಗಳು ನೀಡಿದ ಅಂಕಿ-ಸಂಖ್ಯೆ ಹಾಗೂ ವಾಸ್ತವದ ಸ್ಥಿತಿಗತಿಗೂ ವ್ಯತ್ಯಾಸವಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮಕ್ಕೆ ಭೇಟಿ ಕೊಡಲು ಸೂಚನೆ: ಸಭೆಯ ಅಧ್ಯಕ್ಷತೆ ವಹಿಸಿದ್ದ ಕಂದಾಯ ಸಚಿವ ದೇಶಪಾಂಡೆ, ನಾನು ಸ್ವತಃ ಇಂದು ಬಾದಾಮಿ ತಾಲೂಕಿನ ಎರಡು ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಜನರು ನೀರು ಕೊಡಿ ಎಂದು ಕೇಳುತ್ತಿದ್ದಾರೆ. ದನಗಳಿಗೆ ನೀರು-ಮೇವು ಕೊಡಲು ಕೇಳಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು, ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತಿದ್ದೀರಿ. ನಾನು ಸಮಸ್ಯೆ ಸೃಷ್ಟಿಸಲು ಇಲ್ಲಿಗೆ ಬಂದಿಲ್ಲ. ಅಧಿಕಾರಿಗಳು ಪ್ರಾಮಾಣಿಕವಾಗಿ ಸಮಸ್ಯೆ ತಿಳಿಸಿ. ಅಗತ್ಯ ಬಿದ್ದರೆ ಸಲಹೆ ಕೊಡುತ್ತೇವೆ. ಜತೆಗೆ ಅನುದಾನ ಕಲ್ಪಿಸುತ್ತೇವೆ ಎಂದರು.

ಎಲ್ಲ ತಹಶೀಲ್ದಾರ್‌, ತಾಪಂ. ಇಒ ಹಾಗೂ ಕುಡಿಯುವ ನೀರು ಪೂರೈಕೆ, ಪಶು ಸಂಗೋಪನೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ತಮ್ಮ ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ, ವಾಸ್ತವದ ಚಿತ್ರಣ ತಿಳಿಯಬೇಕು. ಎಲ್ಲಿಯೇ ಸಮಸ್ಯೆ ಇದ್ದರೂ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕೇವಲ 7 ಮೇವು ಬ್ಯಾಂಕ್‌ ಸ್ಥಾಪಿಸಲಾಗಿದೆ. 15ರಿಂದ 20 ಕಿ.ಮೀ ವರೆಗೆ ತೆರಳಿ, ತಾಲೂಕು ಕೇಂದ್ರದಿಂದ ಮೇವು ತರಲು ರೈತರಿಗೆ ಆಗುವುದಿಲ್ಲ. ಹೋಬಳಿಗೊಂದು ಅಥವಾ ಅಗತ್ಯಬಿದ್ದೆಡೆ ಮೇವು ಬ್ಯಾಂಕ್‌ ಸ್ಥಾಪಿಸಬೇಕು. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಸಂಪರ್ಕಿಸಿ, ಸಮಸ್ಯೆ ಬಗ್ಗೆ ಚರ್ಚೆ ಮಾಡಿ. ಅವರ ಸಲಹೆ ಯೋಗ್ಯವಾಗಿದ್ದರೆ, ಅನುಷ್ಠಾನಕ್ಕೆ ತನ್ನಿ. ಅಲ್ಲದೇ ಒಂದು ವಾರದಲ್ಲಿ ಜಿಲ್ಲೆಯ ಅರ್ಹ ರೈತರಿಗೆ ಬೆಳೆ ಪರಿಹಾರ ವಿತರಣೆಯಾಗಬೇಕು ಎಂದು ಸೂಚಿಸಿದರು.

ಶಾಶ್ವತ ಯೋಜನೆ ಕೈಗೊಳ್ಳಿ: ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಯುವುದು ಅಂತಿಮ ಪರಿಹಾರವಲ್ಲ. ಎಷ್ಟು ಕೊಳವೆ ಬಾವಿ ಕೊರೆದಂತೆ, ಬೇರೆ ಕೊಳವೆ ಬಾವಿ ಸ್ಥಗಿತಗೊಳ್ಳುತ್ತವೆ. ಬರದ ಹಿನ್ನೆಲೆಯಲ್ಲಿ ಸಧ್ಯ ತಾತ್ಕಲಿಕ ವ್ಯವಸ್ಥೆ ಮಾಡಿ. ಬಳಿಕ ಜಿಲ್ಲೆಯ ಎಲ್ಲಾ ಜನ ವಸತಿಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಕೊಡಲು ಯೋಜನೆ ಕೈಗೊಳ್ಳಬೇಕು ಎಂದು ಸಚಿವ ದೇಶಪಾಂಡೆ ಸೂಚಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.