ಪರೀಕ್ಷಾ ಅಕ್ರಮ ತಡೆಗೆ ಕ್ರಮ: ಭೂಬಾಲನ್‌

ಅಕ್ರಮ ತಡೆಗೆ 2 ಹಂತದ ತಪಾಸಣೆ

Team Udayavani, May 19, 2022, 6:16 PM IST

20

ಬಾಗಲಕೋಟೆ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಅಭ್ಯರ್ಥಿಗಳ ಎರಡು ಹಂತದ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಸಿಇಟಿ ಪರೀಕ್ಷಾ ಕುರಿತು ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿಯೊಂದು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಅಲ್ಲದೇ ಪರೀಕ್ಷಾ ಅಭ್ಯರ್ಥಿಗಳನ್ನು ಎರಡು ಹಂತದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಗಳ ಪ್ರವೇಶ ಪತ್ರ ಪರಿಶೀಲಿಸಿ ಖಚಿತಪಡಿಸಿಕೊಂಡ ನಂತರ ಮೊಬೈಲ್‌, ಬ್ಲೂಟೂತ್‌ ಡಿವೈಸ್‌, ಇಲೆಕ್ಟ್ರಾನಿಕ್‌ ವಸ್ತುಗಳು, ಕ್ಯಾಲ್ಕುಲೇಟರ್‌ ಸೇರಿದಂತೆ ಇತರೆ ನಿಷೇಧಿತ ವಸ್ತುಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.

2ನೇ ಹಂತದಲ್ಲಿ ಪರೀಕ್ಷಾ ಕೊಠಡಿಯ ಪ್ರವೇಶಿಸುವ ಅಭ್ಯರ್ಥಿಗಳನ್ನು ಮೆಟಲ್‌ ಡಿಟೆಕ್ಟರ್‌ ಉಪಯೋಗಿಸಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಯಾವುದೇ ರೀತಿಯ ಪರೀಕ್ಷಾ ಕೊಠಡಿಯಲ್ಲಿ ನಿರ್ಬಂಧಿಸಿದ ವಸ್ತುಗಳನ್ನು ಪರಿಶೀಲಿಸಿದ ನಂತರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ನಿಯೋಜನೆಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ನಿಗಾವಹಿಸುವ ಕೆಲಸವಾಗಬೇಕು. ಮೇಲುಸ್ತುವಾರಿಗಾಗಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ ಸೂತ್ತ 144 ಕಲಂ 200 ಮೀಟರ್‌ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಝರಾಕ್ಸ್‌ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಪರೀಕ್ಷಾರ್ಥಿಗಳು ಯಾವುದೇ ತರಹದ ಮೊಬೈಲ್‌, ಬ್ಲೂಟೂತ್‌, ಡಿವೈಸ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್‌ ವಸ್ತುಗಳು ಹಾಗೂ ಬ್ಯಾಗ್‌ಗಳನ್ನು ತರುವುದು ಸಂಪೂರ್ಣ ನಿಷೇಧವಿರುತ್ತದೆ.

ಅಭ್ಯ ರ್ಥಿಗಳು 1 ಗಂಟೆ ಮುಂಚೆ ಪರೀಕ್ಷಾ ಕೇಂದ್ರ ದಲ್ಲಿ ಹಾಜರಿರತಕ್ಕದ್ದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಮೇ 21ರಂದು ಪ್ರಥಮ ಅಧಿವೇಶನಕ್ಕೆ 5059, ದ್ವಿತೀಯ ಅಧಿವೇಶನದಲ್ಲಿ 1031 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮೇ 22ರಂದು ಪ್ರಥಮ ಹಾಗೂ ದ್ವಿತೀಯ ಅಧಿವೇಶನಕ್ಕೆ 4720 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗೌಪ್ಯ ಸಾಮಗ್ರಿಗಳ ಅಭಿರಕ್ಷೆ, ವಿತರಣಾ ಸಮಿತಿ ಸಹ ರಚಿಸಲಾಗಿದ್ದು, 12 ಜನ ಪ್ರಶ್ನೆ ಪತ್ರಿಕಾ ಮಾರ್ಗಾಧಿಕಾರಿ, 22 ಜನ ಸಿಟಿಂಗ್‌ ಸ್ಕ್ವಾಡ್‌, ಪರೀಕ್ಷಾ ಕೇಂದ್ರದ ನಿಯಂತ್ರಣಾಧಿಕಾರಿಗಳು ಹಾಗೂ 307 ಜನರನ್ನು ಮೇಲ್ವಿಚಾರಕರನ್ನು ಮತ್ತು 22 ಜನ ಮೊಬೈಲ್‌ ಸ್ವಾಧೀನಾಧಿಕಾರಿಗಳು, ಪರೀಕ್ಷಾ ಕೇಂದ್ರಕ್ಕೆ 22 ಜನ ಹೆಡ್‌ ಪೊಲೀಸ್‌, ಪೊಲೀಸ್‌ ರನ್ನು ನಿಯೋಜಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಶ್ವೇತಾ ಬಿಡಿಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಎಸ್‌. ಬಿರಾದಾರ, ಇಲಕಲ್ಲ ಡಯಟ್‌ನ ಉಪನಿರ್ದೇಶಕ ಬಿ.ಕೆ. ನಂದನೂರ, ಪರೀಕ್ಷಾ ನೋಡಲ್‌ ಅಧಿಕಾರಿ ಎ.ಕೆ. ಬಸಣ್ಣವರ ಮುಂತಾದವರು ಇದ್ದರು.

ಪ್ರಥಮ ಹಂತದಲ್ಲಿ ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಗಳ ಪ್ರವೇಶ ಪತ್ರ ಪರಿಶೀಲಿಸಿ, ಖಚಿತಪಡಿಸಿಕೊಂಡ ನಂತರ ಮೊಬೈಲ್‌, ಬ್ಲೂಟೂತ್‌ ಡಿವೈಸ್‌, ಇಲೆಕ್ಟ್ರಾನಿಕ್‌ ವಸ್ತುಗಳು, ಕ್ಯಾಲ್ಕುಲೇಟರ್‌ ಸೇರಿದಂತೆ ಇತರೆ ನಿಷೇಧಿತ ವಸ್ತುಗಳನ್ನು ಪರಿಶೀಲಿಸಿಯೇ ಒಳಗೆ ಬಿಡಲಾಗುವುದು. –ಟಿ. ಭೂಬಾಲನ್‌, ಪ್ರಭಾರಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.