![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 7, 2021, 3:03 PM IST
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದ ಸಿಡಿ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬೆಳಗಾವಿ ರಾಜಕೀಯಕ್ಕೆ ಸಂಬಂಧಿಸಿದ ಸಿಡಿ ಪ್ರಕರಣದ ಕುರಿತು ಮತ್ತೊಂದು ಬಾಂಬ್ ಸಿಡಿಸಿರುವ ಬಳ್ಳಾರಿಯ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮಲಾಲಿ, ಮಾ.8ರಂದು ರಾಜಕಾರಣಿಗಳ ಹೊಸ ಗುಟ್ಟು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.
ರವಿವಾರ ಮಧ್ಯಾಹ್ನ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಶೇ.75ರಷ್ಟು ಸಿಡಿ ತಂತ್ರಗಾರಿಕೆಗೆ ಬಲಿಯಾಗಿದ್ದಾರೆ. ಈ ವಿಷಯದಲ್ಲಿ ಅವರೆಲ್ಲ ಮುಗ್ಧರು ಎಂದರು.
ಉತ್ತರ ಕರ್ನಾಟಕದ ರಾಜಕಾರಣಿಗಳಲ್ಲಿ ಶೇ.75ರಷ್ಟು ಜನ ಸಿಡಿ ರಾಜಕಾರಣಕ್ಕೆ ಬಲಿಯಾಗಿದ್ದಾರೆ. ಇದು ಎಲ್ಲಿ ನಡೆಯಿತು. ಹೇಗೆ ನಡೆಯಿತು ಎಂಬುದರ ಕುರಿತು ಸೋಮವಾರ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಸಿದ್ದು- ಡಿಕೆಶಿ ಜೋಡೆತ್ತುಗಳಲ್ಲ, ಅಧಿಕಾರಕ್ಕೆ ಬಡಿದಾಡುವ ಹೋರಿಗಳು: ಶ್ರೀರಾಮುಲು ಟೀಕೆ
ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೋಳಿ ಅವರದು ಎನ್ನಲಾದ ಸಿಡಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮಾನವ ಹಕ್ಕುಗಳ ಹೋರಾಟಗಾರರು ಎನ್ನಲಾದ ಇಂದಿರಾ ಎಂಬುವವರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಈ ಕುರಿತು ನನಗೂ ನೋಟಿಸ್ ಬಂದಿದ್ದು, ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ನಮ್ಮ ವಕೀಲರು ವಿಚಾರಣೆಗೆ ಹಾಜರಾಗುತ್ತಾರೆ. ಖುದ್ದಾಗಿ ನಾನೇ ಹಾಜರಾಗಬೇಕು ಎಂದು ಹೇಳಿದರೆ, ಯಾವ ದಿನದಿಂದ ಹಾಜರಾಗಬೇಕು ಎಂಬುದರ ಕುರಿತು ಬಳಿಕ ತಿಳಿಸುವೆ ಎಂದರು.
ಇದನ್ನೂ ಓದಿ: ಐಪಿಎಲ್ 2021ಕ್ಕೆ ಮುಹೂರ್ತ ನಿಗದಿ: 6 ನಗರದಲ್ಲಿ ನಡೆಯಲಿದೆ ಕೂಟ, ಸಂಪೂರ್ಣ ವೇಳಾಪಟ್ಟಿ
ಎಚ್ಡಿಕೆ ಎಚ್ಚರಿಕೆಯಿಂದ ಮಾತನಾಡಲಿ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಏಳು ಜನ ಇದ್ದಾರೆ. ಅದರಲ್ಲಿ ಒಬ್ಬರು ಪದೇ ಪದೇ ವಯಾನಾಡಿಗೆ ಹೋಗುತ್ತಾರೆ ಎಂದು ನಾನು ಹೇಳಿದ್ದು ನಿಜ. ಆದರೆ, ಕುಂಬಳಕಾಯಿ ಕಳ್ಳ ಅಂದರೆ ಕುಮಾರಸ್ವಾಮಿ ಯಾಕೆ, ಹೆಗಲು ಮುಟ್ಟಿಕೊಳ್ಳಬೇಕು. ಇನ್ನೂ ಆರು ಜನ ಸಿಎಂಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕುಮಾರಸ್ವಾಮಿ ಮಾತ್ರ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ. ಹೋರಾಟಗಾರರು ಎಂದರೆ ಕೇವಲವಾಗಿ ಕಾಣಬೇಡಿ. ಗೌರವದಿಂದ ಮಾತನಾಡಬೇಕು. ನಾನು ಮಾಜಿ ಮುಖ್ಯಮಂತ್ರಿಗಳು ಎಂದು ಗೌರವದಿಂದ ಕರೆದಿದ್ದೇನೆ. ಆದರೆ, ಕುಮಾರಸ್ವಾಮಿ, ಬಂಧಿಸಬೇಕು, ಎರೋಪ್ಲೇನ್ ಹತ್ತಿಸಬೇಕೆಂದು ಹೇಳಿದ್ದಾರೆ. ನಾವೇನು ಚಿತ್ರ ನಟಿಯನ್ನು ಮದುವೆಯಾಗಿಲ್ಲ. ಬಳಿಕ ನಟಿಯನ್ನು ಕೈಬಿಟ್ಟು ಬೇರೊಬ್ಬರನ್ನು ಮದುವೆಯಾಗಿಲ್ಲ. ಹೋರಾಟಗಾರರೆಂದರೆ ಏನು ಎಂದು ತೋರಿಸುತ್ತೇವೆ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.