HK Patil ಅವರನ್ನು ಭೇಟಿಯಾದ ನಟ ಅನಿರುದ್ಧ; ಐಹೊಳೆಯ ವಾಸ್ತುಶಿಲ್ಪದ ಬಿರುಕು ಸರಿಪಡಿಸಲು ಮನವಿ
Team Udayavani, Aug 28, 2024, 10:08 PM IST
ಅಮೀನಗಡ: ದೇವಾಲಯಗಳ ತೊಟ್ಟಿಲು ಎಂದೇ ಖ್ಯಾತಿ ಪಡೆದ ರಾಷ್ಟ್ರೀಯ ಪ್ರವಾಸಿ ತಾಣ, ಐಹೊಳೆಯ ದೇವಾಲಯದ ವಾಸ್ತು ಶಿಲ್ಪಗಳ ನಡುವೆ ಕಾಣುತ್ತಿರುವ ಬಿರುಕುಗಳನ್ನು ಕೂಡಲೇ ಸರಿಪಡಿಸಬೇಕು ಎಂದು ನಟ ಅನಿರುದ್ಧ ಜತಕರ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದ ಅತ್ಯಂತ ಪ್ರಸಿದ್ಧವಾದ, ಅತ್ಯದ್ಭುತ ವಾಸ್ತು ಶಿಲ್ಪ ಕಲೆಯನ್ನು ಹೊಂದಿರುವಂತಹ ಅತ್ಯಂತ ಮಹತ್ವದ ಐತಿಹಾಸಿಕ ಕ್ಷೇತ್ರ ಐಹೊಳೆಯ ದೇವಾಲಯಕ್ಕೆ ಇತ್ತಿಚೆಗೆ ಭೇಟಿ ನೀಡಿದಾಗ, ಅಲ್ಲಿನ ವಾಸ್ತು ಶಿಲ್ಪಗಳ ನಡುವೆ ಅಲ್ಲಲ್ಲಿ ಬಿರುಕುಗಳು ಮೂಡಿರುವುದನ್ನು ನೋಡಿ ತುಂಬಾ ಬೇಸರವಾಯಿತು.
ಐತಿಹಾಸಿಕ ಪ್ರವಾಸಿ ತಾಣ ಐಹೊಳೆಯಲ್ಲಿರುವ ಸ್ಮಾರಕಗಳು ಅತ್ಯಂತ ಪ್ರಾಚೀನವಾದ ವಾಸ್ತು ಶಿಲ್ಪಗಳಿಂದ ರೂಪುಗೊಂಡಿರುವುದು ಮರಳುಗಲ್ಲುಗಳಿಂದ. ಸಾವಿರಕ್ಕೂ ಹೆಚ್ಚು ವರ್ಷಗಳಷ್ಟು ಪುರಾತನವಾದ ಇಲ್ಲಿನ ವಾಸ್ತು ಶಿಲ್ಪಗಳು ಕಾಲಕ್ರಮೇಣ ಶಿಥಿಲಗೊಳ್ಳುವ ಮತ್ತು ತನ್ನ ಸೌಂದರ್ಯ ಕಳೆದುಕೊಳ್ಳುವಂತಹ ಅಪಾಯವಿದೆ. ಹೀಗಾಗಿ, ಪುರಾತತ್ವ ಇಲಾಖೆಯು ಕೂಡಲೇ ಇದನ್ನು ಪರಿಶೀಲಿಸಿ, ಇಲ್ಲಿಯ ವಾಸ್ತು ಶಿಲ್ಪಗಳ ಮೂಲ ರೂಪವನ್ನು ಯಥಾವತ್ತಾಗಿ ಕಾಪಾಡಿಕೊಳ್ಳಲು ಬೇಕಾದ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
ನಮ್ಮ ನಾಡಿನ ಪ್ರಸಿದ್ಧ ಶಿಲ್ಪಕಲೆಯ ವೈಭವ ಮತ್ತು ಪ್ರಾಚೀನತೆಯನ್ನು ಮುಂದಿನ ಪೀಳಿಗೆಯ ಜನರೂ ಸಹ ನೋಡಿ ಆನಂದಿಸುವಂತಾಗಲು ಅನುವು ಮಾಡಿಕೊಡಬೇಕು, ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಅಪಾರವಾಗಿ ಗೌರವಿಸುವ ತಾವು ಅತಿ ಶೀಘ್ರದಲ್ಲಿಯೇ ಐಹೊಳೆಯ ವಾಸ್ತು ಶಿಲ್ಪಗಳ ನಡುವೆ ಕಾಣುತ್ತಿರುವ ಬಿರುಕುಗಳನ್ನು ಕೂಡಲೇ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: UP Government: ದೇಶದ್ರೋಹಿ ಪೋಸ್ಟ್ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ
High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ
BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ
HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?
New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಕೇಂದ್ರ ಸಚಿವ ಸೋಮಣ್ಣ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.