ತೇರದಾಳ ತಾಲೂಕಿಗೆ 8 ಹಳ್ಳಿ ಸೇರ್ಪಡೆ-ಅಧಿಸೂಚನೆ ಪ್ರಕಟ

ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇಲ್ಲದ್ದಕ್ಕೆ ಹೋರಾಟ ಸಮಿತಿ ಆಕ್ರೋಶ

Team Udayavani, Jul 31, 2022, 2:54 PM IST

8

ತೇರದಾಳ: ನೂತನ ತಾಲೂಕು ಎಂದು ಘೋಷಣೆಗೊಂಡಿರುವ ತೇರದಾಳ ತಾಲೂಕಿಗೆ ತೇರದಾಳ ಪಟ್ಟಣ ಸೇರಿ ಸಸಾಲಟ್ಟಿ ಜಿಪಂ ವ್ಯಾಪ್ತಿಯ ಎಂಟು ಹಳ್ಳಿಗಳನ್ನು ಸೇರ್ಪಡೆಗೊಳಿಸಿ ಸರಕಾರ ಅಧಿಸೂಚನೆ ಆದೇಶ ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ನಗರ ಘಟಕ ಅಧ್ಯಕ್ಷ ಮಹಾವೀರ ಕೊಟಕನೂರ, ಈಗ ಸರಕಾರ ತೇರದಾಳ ತಾಲೂಕಿಗೆ ಕಲ್ಲಟ್ಟಿ, ಗೋಲಭಾವಿ, ಕಾಲತಿಪ್ಪಿ, ಸಸಾಲಟ್ಟಿ, ತಮದಡ್ಡಿ, ಹಳಿಂಗಳಿ, ಹನಗಂಡಿ ಹಾಗೂ ಯರಗಟ್ಟಿ ಹಳ್ಳಿಗಳನ್ನು ಸೇರ್ಪಡೆಗೊಳಿಸಿ ಭೌಗೋಳಿಕ ಕ್ಷೇತ್ರವನ್ನು ಕೂಡ ವಿಂಗಡನೆ ಮಾಡಿ ಆದೇಶ ಹೊರಡಿಸಿದೆ. ತೇರದಾಳ ತಾಲೂಕಿಗೆ ಕಡಿಮೆ ಹಳ್ಳಿಗಳನ್ನು ವಿಂಗಡಿಸಿದ್ದರೂ ಸಹ ಅಭಿವೃದ್ಧಿಗೆ ಹಾಗೂ ಸರಕಾರಿ ಕಚೇರಿಗಳಿಗೆ ತೊಂದರೆ ಆಗುವುದಿಲ್ಲ. ತಾಲೂಕಿಗೆ ಇರಬೇಕಾದ ಎಲ್ಲ ಸೌಲಭ್ಯಗಳನ್ನು ಸರಕಾರ ಒದಗಿಸಲಿದೆ. ಆ ನಿಟ್ಟಿನಲ್ಲಿ ಶಾಸಕರು ಕೂಡ ತೇರದಾಳ ತಾಲೂಕಿನ ಅಭಿವೃದ್ಧಿಗೆ ಬದ್ಧ ಇದ್ದಾರೆ ಎಂದು ಕೊಕಟನೂರ ತಿಳಿಸಿದ್ದಾರೆ.

ಪಟ್ಟಣದಲ್ಲಿರುವ ಸರಕಾರಿ ಕಚೇರಿಗಳ ಜತೆಗೆ ಇತರೇ ಕಚೇರಿಗಳು ಶೀಘ್ರ ಆರಂಭಗೊಳ್ಳಲಿವೆ. ಆ ನಿಟ್ಟಿನಲ್ಲಿ ಶಾಸಕರ ಮೇಲೆ ಒತ್ತಡ ಕೂಡ ಹೇರಲಾಗಿದೆ. ತೇರದಾಳ ತಾಲೂಕಿಗೆ ಪಕ್ಷಾತೀತ, ಜಾತ್ಯತೀತವಾಗಿ ನಡೆದ ಹೋರಾಟ ಹೆಮ್ಮೆ ಪಡುವಂತಾಗಿದ್ದು, ತೇರದಾಳ ಜನತೆಯ ತಾಲೂಕಿನ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ತೇರದಾಳ ತಾಲೂಕು ರಚನೆ ಹಾಗೂ ಹಳ್ಳಿಗಳ ವಿಂಗಡನೆಗೆ ಕೈ ಜೋಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್‌. ಅಶೋಕ ಹಾಗೂ ಶಾಸಕ ಸಿದ್ದು ಸವದಿ ಅವರಿಗೆ ಧನ್ಯವಾದ ತಿಳಿಸಿದರು. ರಾಮಣ್ಣ ಹಿಡಕಲ್‌, ಪ್ರಭಾಕರ ಬಾಗಿ, ಅಪ್ಪು ಮಂಗಸೂಳಿ, ಅಲ್ಲಪ್ಪ ಬಾಬಗೊಂಡ, ಸಿದ್ದು ಅಮ್ಮಣಗಿ, ಪ್ರಕಾಶ ಹೊಸಮನಿ, ಸಂತೋಷ ಜಮಖಂಡಿ, ಸದಾಶಿವ ಹೊಸಮನಿ ಇನ್ನಿತರಿದ್ದರು.

ತೇರದಾಳ ತಾಲೂಕಿಗೆ ಹಳ್ಳಿಗಳ ವಿಂಗಡನೆ ಮಾಡಿ ಆದೇಶ ಹೊರಡಿಸುವ ಮೂಲಕ ಸರಕಾರ ತೇರದಾಳ ಜನತೆಯ ಹೋರಾಟಕ್ಕೆ ಬೆಲೆ ನೀಡಿದೆ. ತೇರದಾಳ ತಾಲೂಕಿಗೆ ಮಠಾಧಿಧೀಶರು ಸೇರಿ ಹೋರಾಟ ಸಮಿತಿ ನಡೆಸಿದ ಹೋರಾಟ ಶ್ಲಾಘನೀಯ. ಬರುವ ದಿನಗಳಲ್ಲಿ ಎಲ್ಲ ಸರಕಾರಿ ಕಚೇರಿ ಆರಂಭಗೊಂಡು ಹೊಸ ತಾಲೂಕು ಅಭಿವೃದ್ಧಿ ಹೊಂದುವಂತಾಗಲಿ. –ಕುಸುಮಾಂಡಿನಿ ಅಲ್ಲಪ್ಪ ಬಾಬಗೊಂಡ, ಅಧ್ಯಕ್ಷರು ತೇರದಾಳ, ಪುರಸಭೆ

ತಾಲೂಕಿಗೆ ಸರಕಾರ ಹಳ್ಳಿಗಳನ್ನು ವಿಂಗಡಿಸಿ ಆದೇಶ ಹೊರಡಿಸಿರುವುದು ನಿಯಮಾನುಸಾರ ಇಲ್ಲ. ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಆಗುವಂತೆ ಹಳ್ಳಿಗಳನ್ನು ವಿಂಗಡನೆ ಮಾಡಿ ಎಂದು ಸಾಕಷ್ಟು ಬಾರಿ ಹೇಳಿದ್ದೇವೆ. ಆದರೆ, ಕೆಲ ಜನಪ್ರತಿನಿಧಿಗಳು ಸರಕಾರದ ಜತೆಗೆ ಅಧಿಕಾರಿಗಳ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ವಿಂಗಡನೆ ಮಾಡಿರುವ ಹಳ್ಳಿಗಳನ್ನು ನಾವು ಒಪ್ಪುವುದಿಲ್ಲ. ಆದ್ದರಿಂದ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಮಾಡಿ ಹಳ್ಳಿಗಳನ್ನು ವಿಂಗಡನೆ ಮಾಡಬೇಕು. ಇಲ್ಲದಿದ್ದರೆ ಸದ್ಯದರಲ್ಲೆ ಸಾರ್ವಜನಿಕ ಸಭೆ ಕರೆದು ಹೋರಾಟದ ಬಗ್ಗೆ ಚರ್ಚಿಸಲಾಗುವುದು. ಅಗತ್ಯ ಬಿದ್ದರೆ ಮುಖ್ಯಮಂತ್ರಿ, ಕಂದಾಯ ಸಚಿವರು, ಜಿಲ್ಲಾಡಳಿತ ಸರಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. –ಬಸವರಾಜ ಬಾಳಿಕಾಯಿ, ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.