ರಬಕವಿ-ಬನಹಟ್ಟಿ: ಶಿಕ್ಷಕರ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ
Team Udayavani, Feb 9, 2022, 3:20 PM IST
ರಬಕವಿ-ಬನಹಟ್ಟಿ: ಶಿಕ್ಷಕರ ಮೇಲೆ ಆದ ಹಲ್ಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಒಳಪಡಿಸಲಾಗಿದೆ. ಉಳಿದ ಮೂರು ಜನರನ್ನು ಗುರುತಿಸಲಾಗಿದ್ದು, ಅವರನ್ನು ಕೂಡಾ ಅಗತ್ಯ ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹೇಳಿದರು.
ಅವರು ಬುಧವಾರ ಮಧ್ಯಾಹ್ನ ಬನಹಟ್ಟಿಯ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬನಹಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲೂ ತೂರಾಟಕ್ಕೆ ಸಂಬಂಧಿಸಿದ ಹಾಗೇ ಈಗಾಗಲೇ ನಾವು 13 ಜನರನ್ನು ಬಂಧಿಸಿದ್ದು, ಇನ್ನೂ ಉಳಿದವರನ್ನು ಗುರುತಿಸಿ ಕಾನೂನಿನ ಕ್ರಮ ತೆಗದುಕೊಳ್ಳೂವ ಪ್ರಕ್ರಿಯೆ ಮುಂದುವರೆದಿದೆ ಎಂದರು.
ಪ್ರತಿಭಟನೆಗಳು ಹೆಚ್ಚಾಗುತ್ತಿರುವುದರಿಂದ ಇಂದು ಬುಧವಾರ ಮಧ್ಯಾಹ್ನದಿಂದ ೧೪೪ ಕಲಂ ಅಡಿಯಲ್ಲಿ ನಿಶೇದಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು. ಸಹಕರಿಸದಿದ್ದರೆ ಅಂತವರ ವಿರುದ್ಧ ಅಗತ್ಯ ಕ್ರಮ ಜರುಗಿಸಲಾಗುವುದು. ಯಾರಾದರೂ ಇದನ್ನೂ ಉಲ್ಲಂಗಣೆ ಮಾಡಿ ಹೊರಗಡೆ ಬಂದರೆ ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ಮಾಡಲಾಗುವುದು ಎಂದು ಎಸ್.ಪಿ. ಲೋಕೇಶ ಜಗಲಾಸರ್ ಹೇಳಿದರು.
ಬನಹಟ್ಟಿ ಶಾಂತಿ ಪ್ರೀಯ ನಗರ, ಹೊರಗಿನವರು ಬಂದು ಶಾಂತಿಯನ್ನು ಕದಡುವ ಕೆಲಸವಾಗಬಾರದು. ವಿದ್ಯಾರ್ಥಿಗಳು ಕಾನೂನು ಕೈತೆಗೆದುಕೊಳ್ಳುವ ಕೆಲಸ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು
Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ
Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ
Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.