ಮುಂದಿನ ದಿನಗಳಲ್ಲಿ ಕೆಎಚ್‌ಡಿಸಿ ನಿಗಮಕ್ಕೆ ಹೊಸ ಬೆಳಕು – ಸಿದ್ದು ಸವದಿ


Team Udayavani, Aug 28, 2021, 8:34 PM IST

bagalakote news

ಬನಹಟ್ಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರಾಜ್ಯ ಸರ್ಕಾರ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಎಚ್‌ಡಿಸಿ ನಿಗಮದ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ  ಕೆಎಚ್‌ಡಿಸಿ ನಿಗಮಕ್ಕೆ ಹೊಸ ಬೆಳಕು ಬರಲಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಶನಿವಾರ ಬಾಗಲಕೋಟೆ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶಿಕ್ಷಣ ಇಲಾಖೆಯ ಬಟ್ಟೆ ಖರೀದಿಯ ಸಂದರ್ಭದಲ್ಲಿ ನಿಗಮಕ್ಕೆ ಅಂದಾಜು ರೂ.10 ಕೋಟಿಯಷ್ಟು ಹಾನಿಯಾಗುತ್ತಿತ್ತು. ಈಗ ಶೇ. 50 ರಷ್ಟು ಹಾನಿಯನ್ನು ಸರ್ಕಾರ ತುಂಬುವುದಾಗಿ ತಿಳಿಸಿದೆ. ನೇಕಾರರ ವಿಶೇಷ  ಪ್ಯಾಕೇಜ್ ಯೋಜನೆ ಅಡಿಯಲ್ಲಿ ನಿಗಮದ ನೇಕಾರರಿಗೆ ನೀಡಲಾಗುತ್ತಿರುವ ಪ್ರತಿ ತಿಂಗಳು ರೂ. 1 ಕೋಟಿ ಸರಕಾರದಿಂದ ಭರಿಸಲು ಒಪ್ಪಿಗೆ ಸೂಚಿಸಿದ್ದಾರೆ. ವಿದ್ಯಾ ವಿಕಾಸ ಯೋಜನೆ ಅಡಿಯಲ್ಲಿ ಕನಿಷ್ಠ ಶೇ. 25 ರಷ್ಟು ಬಟ್ಟೆ ಖರೀದಿಗೆ ಸರ್ಕಾರ ಆದೇಶ ನೀಡಿದೆ. ಈ ಯೋಜನೆ ಅಡಿಯಲ್ಲಿ ಶೇಖರಣೆಯಾಗುವ ರೂ. 20 ಕೋಟಿ ಹಣವನ್ನು ನಿಗಮದ ಅಭಿವೃದ್ಧಿಗಾಗಿ ಬಳಸಲಾಗುವುದು. ಕೇಂದ್ರ ಬ್ಯಾಂಕಿನಿಂದ 23 ಕೋಟಿ ರೂ.ಗಳಷ್ಟು ಹಾಗೂ 2017-18 ರಲ್ಲಿನ ರಾಜ್ಯ ಸರ್ಕಾರದ 6 ಕೋಟಿ ಸಾಲವನ್ನು ಷೇರು ಬಂಡವಾಳವಾಗಿ ಪರಿವರ್ತಿಸಲಾಗಿದೆ.

ರಾಜ್ಯದಲ್ಲಿ ನಿಗಮಕ್ಕೆ ಸೇರಿದ 32  ಪ್ರದೇಶಗಳಲ್ಲಿ ಆಸ್ತಿಗಳಿವೆ. ಇವುಗಳಲ್ಲಿ ಆರಂಭದಲ್ಲಿ 10 ಪ್ರದೇಶಗಳಲ್ಲಿ ಪೆಟ್ರೊಲ್ ಬಂಕ್‌ ಗಳನ್ನು ಸ್ಥಾಪನೆ ಮಾಡಲು ನಿಗಮದಿಂದ ನಿರ್ಧರಿಸಿದ್ದೇವೆ. ನೇಕಾರರ ಮಕ್ಕಳನ್ನೇ ಬಂಕ್‌ಗಳಲ್ಲಿನ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಲಾಗುವದೆಂದು ಸವದಿ ತಿಳಿಸಿದರು.

2005-೦6 ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಂಜೂರಾದ ರೂ. 40 ಕೋಟಿ ಮಾರ್ಜಿನ್ ಹಣವನ್ನು ಠೇವಣಿಯನ್ನಾಗಿ ಮಾಡಲಾಗಿತ್ತು. ಇದು ಈಗ ರೂ.101.55 ಕೋಟಿಯಷ್ಟಾಗಿದೆ. ಈ ಠೇವಣಿಯ ಮೇಲೆ ರೂ. 85 ಲಕ್ಷ ಸಾಲವನ್ನು ಮಾಡಲಾಗಿತ್ತು. ಈಗ ಸಾಲವನ್ನು ಮರು ಪಾವತಿಸಿ ಉಳಿದ ಹಣವನ್ನು ನಿಮಗದ ಅಭಿವೃದ್ಧಿಗಾಗಿ ಬಳಸಲಾಗುವುದು. ರಾಜ್ಯ ಸರ್ಕಾರದಿಂದ ರೂ.23 ಕೋಟಿ 54 ಲಕ್ಷ ಸಾಲವನ್ನು ಪಡೆದುಕೊಳ್ಳಲಾಗಿತ್ತು. ಈಗ ಈ ಹಣವನ್ನು ಸರ್ಕಾರ ಶೇರು ಬಂಡವಾಳವನ್ನಾಗಿ ಪರಿವರ್ತಿಸಲು ಸರ್ಕಾರ ಸಮ್ಮತಿಯನ್ನು ಸೂಚಿಸಿದೆ ಎಂದು ಸವದಿ ತಿಳಿಸಿದರು.

ಇದನ್ನೂ ಓದಿ:ಸರ್ಕಾರದ ಸುಳ್ಳುಗಳನ್ನು ತಡೆಯಲು ನಾಗರಿಕರು ಕಟಿಬದ್ಧರಾಗಿ : ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌

ನೇಕಾರರಿಗೆ ಮುಂಗಡ, ಪ್ರೋತ್ಸಾಹ ಧನವನ್ನು ಹಂತ ಹಂತವಾಗಿ ನೀಡಲಿದ್ದು, ಕನಿಷ್ಠ 2 ವರ್ಷ ನಿಗಮದಲ್ಲಿ ಕೆಲಸ ಮಾಡಿದ ನೇಕಾರರಿಗೆ ಮನೆ ಹಂಚಿಕೆ ಮಾಡುವಲ್ಲಿ ಚಿಂತನೆಯಾಗಿದ್ದು ಒಟ್ಟಾರೆ ಮುಳುಗುವ ಹಂತದಲ್ಲಿದ್ದ ನಿಗಮವನ್ನು ಹೊಸ ಆಶಾಕಿರಣವಾಗಿ ನೇಕಾರರಿಂದ ಹೋರಾಟಗಳಿಗೆ ಅವಕಾಶ ನೀಡದೆ ದೊಡ್ಡ ಮಟ್ಟದಲ್ಲಿ ಬದಲಾವಣೆಯಾಗಿದ್ದು ನೆಮ್ಮದಿ ತಂದಿದೆ ಎಂದು ಸವದಿ ಸಂತಸ ವ್ಯಕ್ತಪಡಿಸಿದರು.

ನಿಗಮದ ನೇಕಾರರಿಗೆ ನೀಡಬೇಕಾಗಿದ್ದು ಹಲವಾರು ಸೌಲಭ್ಯಗಳು ನಿಂತು ಹೋಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಹಂತ ಹಂತವಾಗಿ ಮತ್ತೆ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಕೆಎಚ್‌ಡಿಸಿ ನಿಗಮವನ್ನು ಲಾಭದಾಯಕ ಸಂಸ್ಥೆಯನ್ನು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ರಾಜು ಅಂಬಲಿ, ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ, ದುಂಡಪ್ಪ ಮಾಚಕನೂರ, ಮಲ್ಲಿಕಾರ್ಜುನ ಬಾಣಕಾರ, ಸುರೇಶ ಅಕ್ಕಿವಾಟ, ಆನಂದ ಕಂಪು, ಗೋವಿಂದ ಡಾಗಾ, ಮಹಾದೇವ ಕೋಟ್ಯಾಳ, ಸಂಜಯ ತೆಗ್ಗಿ, ಗೌರಿ ಮಿಳ್ಳಿ, ದುರ್ಗವ್ವ ಹರಿಜನ, ಶ್ರೀಶೈಲ ಆಲಗೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.