Bagalkot: ಆಯುರ್ವೇದ ಇಂದು ಹೆಚ್ಚು ಪ್ರಚಲಿತ

ಅಲೋಪತಿಯಂತಹ ತ್ವರಿತ ಚಿಕಿತ್ಸೆ ಪಡೆದು ಬಾಹ್ಯರೋಗಕ್ಕೆ ತುತ್ತಾಗುತ್ತಿದ್ದಾರೆ

Team Udayavani, Nov 11, 2023, 5:39 PM IST

Bagalkot: ಆಯುರ್ವೇದ ಇಂದು ಹೆಚ್ಚು ಪ್ರಚಲಿತ

ಬಾಗಲಕೋಟೆ: ಅಲೋಪತಿಕ್‌ ಔಷಧಕ್ಕೆ ಮೊರೆ ಹೋದ ಅನೇಕ ರೋಗಿಗಳು ಪರ್ಯಾಯ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಬಂದ ರೋಗದಿಂದ ಸಂಪೂರ್ಣ ಗುಣಮುಖರಾಗಲು ಇಂದು ಆಯುರ್ವೇದ ಪದ್ಧತಿಗೆ ಮೊರೆ ಹೋಗುತ್ತಿದ್ದಾರೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಋಷಿಮುನಿಗಳು ಯೋಗ, ಆಸನ, ಮುದ್ರಾ, ಯುನಾನಿಗಳಂತಹ ಹಾಗೂ ಔಷಧಿಯ ಸಸ್ಯಗಳ ವನಸ್ಪತಿ ಉಪಯೋಗಿಸಿ ಆಯುರ್ವೇದ ಪದ್ಧತಿ ಅನುಸರಿಸುತ್ತ ನೂರಾರು ವರ್ಷ ಬದುಕುತ್ತಿದ್ದರು. ಆದರೆ ಇಂದು ಒತ್ತಡದ ಬದುಕು ಹಾಗೂ ಕಲುಷಿತ ಆಹಾರ ಪದ್ಧತಿಯಿಂದ ನೂರಾರು ರೋಗಗಳು ಹುಟ್ಟಿಕೊಳ್ಳುವುದಲ್ಲದೇ ಅಲೋಪತಿಯಂತಹ ತ್ವರಿತ ಚಿಕಿತ್ಸೆ ಪಡೆದು ಬಾಹ್ಯರೋಗಕ್ಕೆ ತುತ್ತಾಗುತ್ತಿದ್ದಾರೆ.

ಆಹಾರವೇ ಔಷ ಧಿಯಾಗಿದ್ದು, ಜನರು ಇನ್ನಾದರೂ ಆಹಾರ, ವಿಹಾರ, ಜೀವನಶೈಲಿಯಂತಹ ಆಯುರ್ವೇದ ಪದ್ಧತಿ ಬಳಸಿ ನಿರೋಗಿಗಳಾಗಿ ಬದುಕುವಂತೆ ಸಲಹೆ ನೀಡಿದರು. ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಆಯುರ್ವೇದ ಔಷಧಿ ರೋಗ ಗುಣಪಡಿಸಿಕೊಳ್ಳುವಲ್ಲಿ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂಬ ತಪ್ಪು ನಿರ್ಧಾರದಿಂದ ಈ ಪದ್ಧತಿ ಕುಂಠಿತಗೊಂಡಿದೆ.

ಆದರೆ, ಇಂದಿನ ಕಲಬೆರಕೆ ಆಹಾರ, ರಾಸಾಯನಿಯುಕ್ತ ಆಹಾರದಿಂದ ಆರೋಗ್ಯದಲ್ಲಿ ಏರುಪೇರಾಗಿ ಆಯುಷ್ಯ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ 5,500 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಸರ್ಕಾರ ವಿತರಿಸುತ್ತಿರುವ ಪೌಷ್ಟಿಕ ಆಹಾರ ವಿತರಿಸಿ ಪ್ರತಿಯೊಂದು ಮಗು ಸಮಾಜದ ಆಸ್ತಿಯನ್ನಾಗಿ ರೂಪಿಸುವ ಕಾರ್ಯವಾಗಬೇಕಿದೆ ಎಂದರು.

ವಾಸನ ಗ್ರಾಮದ ನಾಟಿ ವೈದ್ಯ ಹನುಮಂತ ಮಳಲಿ ಮಾತನಾಡಿ, ಮನೆ ಮೊದಲು ಪಾಠ ಶಾಲೆ ಎಂಬಂತೆ ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ದೊರೆಯುವ ಆಹಾರ ಪದಾರ್ಥ ಬಳಸಿಕೊಂಡು ಆರೋಗ್ಯ ಉತ್ತಮವಾಗಿ ಇಟ್ಟುಕೊಳ್ಳಬೇಕು. ಜನತೆ ಆಧುನಿಕತೆಗೆ
ಮರುಳಾಗದೇ ಪ್ರಾಕೃತಿಕವಾಗಿ ಸಿಗುವ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿ ಆರೋಗ್ಯವಂತ ಜೀವನ ನಡೆಸಬೇಕು ಎಂದರು.

ಶಾಸಕ ಎಚ್‌.ವೈ. ಮೇಟಿ ಮಾತನಾಡಿ, ಹಿಂದಿನ ಕಾಲದಲ್ಲಿ ಆಸ್ಪತ್ರೆ, ಔಷಧಿಗಳು ಇರಲಿಲ್ಲ. ಅಂದು ನಾವೆಲ್ಲ ಅನೇಕ ನಾಟಿ ವೈದ್ಯರ ಬಳಿ ತೆರಳಿ ಗಾಯಗೊಂಡಾಗ ಅರಿಶಿಣ, ಸೀತವಾದಾಗ ತುಳಸಿ, ಕರಿಮೆಣಸು ಉಪಯೋಗಿಸಿ ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದೆವು.ಇಂದು ಅನೇಕ ಹೊಸ ಹೊಸ ರೋಗಗಳು ಬರುತ್ತಿವೆ. ಅಲೋಪತಿಕ್‌ ಔಷಧಿಗಳಿಂದಾಗುವ ದುಷ್ಪರಿಣಾಮದಿಂದ ತಾತ್ಕಾಲಿಕ ಶಮನವಾದರೂ ಮತ್ತೆ ರೋಗ ಮರುಕಳಿಸುತ್ತದೆ. ಆದರೆ, ಆಯುರ್ವೇದ ಔಷಧಿಯಿಂದ ನಿಧಾನವಾಗಿ ಕಡಿಮೆಯಾದರೂ ಮರಳಿ ಬರುತ್ತಿರಲಿಲ್ಲ ಎಂದರು. ಬಾದಾಮಿ ಕಾಳಿದಾಸ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊ. ಡಾ|ಸಂಗೀತಾ ಬಳಗಾನೂರ ಅತಿಥಿ ಉಪನ್ಯಾಸ ನೀಡಿದರು. ಇದೇ ವೇಳೆ ಆಯುರ್ವೇದ ಮಾಹಿತಿಯುಳ್ಳ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಈ ವೇಳೆ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಆಯುಷ್‌ ಇಲಾಖೆ ಹಿರಿಯ ವೈದ್ಯಾಧಿಕಾರಿ ಚಂದ್ರಕಾಂತ ರಕ್ಕಸಗಿ, ಜಿಲ್ಲಾ ಆಯುಷ್‌ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ ಸೇರಿದಂತೆ ಇತರರಿದ್ದರು.

ಸಾಮಾನ್ಯ ಕಾಯಿಲೆಗೆ ಆಸ್ಪತ್ರೆಗೆ ಅಲೆದಾಡಿ ಹಣ-ಸಮಯ ಹಾಳು ಮಾಡಿಕೊಳ್ಳಬಾರದು. ಮನೆಯಲ್ಲಿ ಸಿಗುವ ವಸ್ತುಗಳಾದ ಕರಿಮೆಣಸು, ತುಳಸಿ ಎಲೆ, ಶುಂಠಿ, ಕಲ್ಲುಪ್ಪು, ಬೆಲ್ಲ, ರಾಗಿ, ಜೋಳ ಮುಂತಾದವುಗಳನ್ನು ಬಳಸಿ ಕಾಯಿಲೆ ನಿವಾರಿಸಿಕೊಳ್ಳಬಹುದು.
*ಹನುಮಂತ ಮಳಲಿ
ಪಾರಂಪರಿಕ ವೈದ್ಯ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.