Bagalkot: ಕಾಯಕ ಶ್ರಮ ಜೀವಿಗಳೇ ನಿಜ ದೇವರು- ರಕ್ಷಿತಾ ಭರತಕುಮಾರ

ನಾವು ಕೂಲಿ ಕೆಲಸ ಮಾಡುವ ಸ್ಥಳಕ್ಕೆ ಬಂದು ಉಡಿ ತುಂಬಿದ್ದು ಬಹಳ ಖುಷಿ ಆಯಿತು

Team Udayavani, Oct 21, 2023, 10:17 AM IST

Bagalkot: ಕಾಯಕ ಶ್ರಮ ಜೀವಿಗಳೇ ನಿಜ ದೇವರು- ರಕ್ಷಿತಾ ಭರತಕುಮಾರ

ಬಾಗಲಕೋಟೆ: ಭೂಮಿಯಲ್ಲಿ ಶ್ರಮಪಟ್ಟು ದುಡಿಯುವ ರೈತರು, ನಿತ್ಯ ಪರಿಶ್ರಮಪಡುವ ಕಾಯಕ ಜೀವಿಗಳೇ ನಮಗೆ ನಿಜವಾದ ದೇವರು. ನವರಾತ್ರಿ ಅಂಗವಾಗಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಉಡಿ ತುಂಬುವುದು ಸಾಮಾನ್ಯ. ಆದರೆ, ಕೆರೆಯಂಗಳದಲ್ಲಿ ಬೆವರು ಸುರಿಸಿ ಶ್ರಮಪಡುವ ಕಾಯಕ ಜೀವಿಗಳಿಗೆ ಉಡಿ ತುಂಬುವ ಮೂಲಕ ಅವರನ್ನು ಗೌರವಿಸಬೇಕೆಂಬುದು ನಮ್ಮ ಅಭಿಲಾಸೆ. ಹೀಗಾಗಿ ಕಾಯಕ ಜೀವಿ ಮಹಿಳೆಯರೇ ದೇವರೆಂದು ಭಾವಿಸಿ, ಅವರ ಉಡಿ ತುಂಬುವ ಕಾರ್ಯ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯೆ, ಕಾಂಗ್ರೆಸ್‌ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಹೇಳಿದರು.

ಜಿಲ್ಲೆಯ ಬಾದಾಮಿ ತಾಲೂಕಿನ ಕೆಂದೂರ ಕೆರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಯ ಹೂಳೆತ್ತುವ ಕಾಯಕದಲ್ಲಿ ತೊಡಗಿರುವ ಸುಮಾರು 500ಕ್ಕೂ ಹೆಚ್ಚು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನವರಾತ್ರಿ ಅಂಗವಾಗಿ ಎಲ್ಲರೂ ಪ್ರತಿಯೊಬ್ಬ ಮಹಿಳೆಯರು ದೇವಾಲಯಕ್ಕೆ ಹೋಗುತ್ತೇವೆ. ಎಲ್ಲ ಮಹಿಳೆಯರನ್ನು ಒಟ್ಟಿಗೆ ಕೂಡಿಸಿ, ಅರಿಶಿಣ, ಕುಂಕುಮ, ಕುಪ್ಪಸ ನೀಡಿ ಉಡಿ ತುಂಬುವುದು ಸಂಪ್ರದಾಯ. ಮಹಾನವಮಿಯಲ್ಲಿ ಮುತ್ತೈದೆ ಮಹಿಳೆಯರನ್ನು ದೇವಿ ಸ್ವರೂಪವೆಂದೇ ಭಾವಿಸಲಾಗುತ್ತದೆ. ಆದರೆ, ನಾನು ಇಂದು ಕೂಲಿ ಕಾರ್ಮಿಕ ಮಹಿಳೆಯರನ್ನೇ ದೇವಿ ಸ್ವರೂಪವೆಂದು ಭಾವಿಸಿ, ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿರುವ ಮಹಿಳೆಯರಿಗೆ ಉಡಿ ತುಂಬಲು ಬಂದಿದ್ದೇನೆ. ಇವರೇ ನಿಜವಾದ ದೇವರು ಎಂದು ಹೇಳಿದರು.

ನಿತ್ಯವೂ ಬಿರು ಬಿಸಲಿನಲ್ಲಿ ಎಲ್ಲರೂ ಶ್ರಮಪಟ್ಟು ದುಡಿಯುತ್ತಾರೆ. ಸಧ್ಯ ಜಿಲ್ಲೆಯಲ್ಲಿ ತೀವ್ರ ಬರವಿದೆ. ಮಳೆ ಇಲ್ಲ. ಬೆಳೆಯೂ ಬಂದಿಲ್ಲ. ಹೀಗಾಗಿ ಗ್ರಾಮೀಣ ರೈತರು, ಬಡ ಜನರು ಕಷ್ಟ ಎದುರಿಸುತ್ತಿದ್ದಾರೆ. ಅವರಿಗೆ ನೆಮ್ಮದಿಯ ಬದುಕು ಸಿಗಬೇಕು. ಹೀಗಾಗಿ ಕಾಂಗ್ರೆಸ್‌ ಸರ್ಕಾರ, ಮಹಿಳೆಯರಿಗೆ ಮಾಸಿಕ 2 ಸಾವಿರ ನೀಡುವ ಜತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಯೂ ಕೊಡುತ್ತಿದೆ. ಪ್ರತಿಯೊಬ್ಬ ಮಹಿಳೆಯರು ಇದರ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.

ನಮ್ಮ ಸರ್ಕಾರ ಮಹಿಳೆಯರು, ತಮ್ಮ ಬಂಧು- ಬಾಂಧವರ ಭೇಟಿ ಮಾಡಲು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ. ಇದು ಮಹಿಳೆಯರಿಗೆ ಅತ್ಯುತ್ತಮ ಯೋಜನೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೊಮ್ಮೆ ಬಡವರು, ದೀನ ದಲಿತರು ಹಾಗೂ ಕಾಯಕ ಜೀವಿಗಳ ಪರವಾಗಿ ಯೋಜನೆ ರೂಪಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಗ್ಯಾರಂಟಿ ಯೋಜನೆಗಳು, ಯಾವುದೇ ಜಾತಿ, ಧರ್ಮ, ಪಂಗಡ ಎನ್ನದೇ ಎಲ್ಲರಿಗೂ ನೀಡಲಾಗುತ್ತಿದೆ.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಕಾಂಗ್ರೆಸ್‌ನ ಧ್ಯೇಯ. ಗ್ರಾಮೀಣ ಮಹಿಳೆ ಯರು ಸರ್ಕಾರದ ಸೌಲಭ್ಯ ಪಡೆಯಬೇಕು ಎಂದು ಸಲಹೆ ನೀಡಿದರು.

ಮಾದರಿಯಾದ ಈಟಿ ನಡೆ: ನವರಾತ್ರಿ ನಿಮಿತ್ಯ ಗ್ರಾಮೀಣ ಕೂಲಿ ಕಾರ್ಮಿಕರು, ಕೆರೆಯ ಹೂಳೆತ್ತು ಸ್ಥಳಕ್ಕೆ ತೆರಳಿ, ಸುಮಾರು 500ಕ್ಕೂ ಹೆಚ್ಚು ಮಹಿಳೆಯರಿಗೆ ಉಡಿ ತುಂಬುವ ಮೂಲಕ ವಿಶೇಷವಾಗಿ ನವರಾತ್ರಿ ಆಚರಣೆ ಮಾಡಿದ ಕಾರ್ಯಕ್ಕೆ ಹಲವರ ಮೆಚ್ಚುಗೆ ಕೂಡ ವ್ಯಕ್ತವಾಯಿತು. ನಗರ-ಪಟ್ಟಣ ಪ್ರದೇಶದಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಸುವುದು ಸಾಮಾನ್ಯ. ಆದರೆ, ನಾವು ಕೂಲಿ ಕೆಲಸ ಮಾಡುವ ಸ್ಥಳಕ್ಕೆ ಬಂದು ಉಡಿ ತುಂಬಿದ್ದು ಬಹಳ ಖುಷಿ ಆಯಿತು ಎಂದು ಕೆಂದೂರ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸಂತಸ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದ ಬಳಿಕ, ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೆಲ ಮಹಿಳೆಯರು, ನಮಗೆ ಆಶ್ರಯ ಮನೆ ಇಲ್ಲ. ಕಳೆದ 2019ರಲ್ಲಿ ಪ್ರವಾಹ ಬಂದಾಗ, ಶೆಡ್‌ನ‌ಲ್ಲಿ ವಾಸಿಸುತ್ತಿದ್ದು, ಅಂದಿನಿಂದ ಅದೇ ಶೆಡ್‌ನ‌ಲ್ಲಿ ಇದ್ದೇವೆ. ನಮಗೆ ಮನೆ ಕೊಡಿಸಿ ಎಂದು ಮನವಿ ಮಾಡಿದರು. ಇನ್ನೂ ಕೆಲ ಮಹಿಳೆಯರು, ಗ್ಯಾರಂಟಿ ಯೋಜನೆಯ 2 ಸಾವಿರ ಹಣ ನಮಗೆ ಬರುತ್ತಿಲ್ಲ ಎಂದು ತಿಳಿಸಿದರು. ಬಹುತೇಕರ ಸಮಸ್ಯೆ ಆಲಿಸಿದ ಬಳಿಕ, ನಿಮ್ಮೆಲ್ಲ ಸಮಸ್ಯೆಗಳ ಕುರಿತು ಈ ಕ್ಷೇತ್ರದ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ಗಮನಕ್ಕೆ ತರುತ್ತೇವೆ. ಶಾಸಕರೂ ಈ ಕ್ಷೇತ್ರದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಕಾರ್ಯ
ನಿರ್ವಹಿಸುತ್ತಿದ್ದು, ನಿಮ್ಮೆಲ್ಲರ ಸಮಸ್ಯೆಗೆ ಸ್ಪಂದಿಸಲಿದ್ದಾರೆ ಎಂದು ಈಟಿ ತಿಳಿಸಿದರು.

ನವರಾತ್ರಿ ವೇಳೆ ಮಹಿಳೆಯರಿಗೆ ಉಡಿ ತುಂಬುವುದು ನಮ್ಮ ಸಂಪ್ರದಾಯ. ಆದರೆ, ಕೂಲಿ ಕಾರ್ಮಿಕರ ಮಹಿಳೆಯರಿಗೆ ಅವರದೇ ಆದ ಕೆಲಸ-ಜಂಟಾಟಗಳಿರುತ್ತವೆ. ನವರಾತ್ರಿ ಆಚರಣೆ ಮಾಡಿದರೂ, ಪರಸ್ಪರ ಉಡಿ ತುಂಬಿ ಸತ್ಕರಿಸುವ ಕಾರ್ಯ ನಡೆಯುವುದು ವಿರಳ. ಹೀಗಾಗಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿರುವ ಮಹಿಳೆಯರಿಗೆ ಪ್ರೀತಿಯಿಂದ ಉಡಿ ತುಂಬುವ ಕಾರ್ಯ ಮಾಡಲಾಗಿದೆ. ಇದಕ್ಕೆ ಕಾರ್ಮಿಕ ಮಹಿಳೆಯರೂ ಸಂತಸಪಟ್ಟಿದ್ದಾರೆ. ಶ್ರಮಜೀವಿ ತಾಯಂದಿರೇ ನಿಜವಾದ ದೇವರು ಎಂದು ನಾನು ಭಾವಿಸಿರುವೆ.
ರಕ್ಷಿತಾ ಭರತಕುಮಾರ ಈಟಿ, ಜಿಲ್ಲಾ ಅಧ್ಯಕ್ಷೆ, ಮಹಿಳಾ ಕಾಂಗ್ರೆಸ್‌

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.