ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ


Team Udayavani, Jun 27, 2024, 5:22 PM IST

ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ

■ ಉದಯವಾಣಿ ಸಮಾಚಾರ
ಬಾಗಲಕೋಟೆ: ಸರಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಗಾಗಿ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸುವಂತೆ ಜಿಪಂ ಸಿಇಒ ಶಶಿಧರ ಕುರೇರ, 15 ದಿನಗಳ ಗಡುವು ನೀಡಿದರು.

ಜಿಪಂ ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಅಗ್ರಣಿ ಬ್ಯಾಂಕ್‌ನಿಂದ ಜರುಗಿದ ಬ್ಯಾಂಕರ್ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರದ ಯೋಜನೆಗಳಿಗೆ ಬ್ಯಾಂಕುಗಳು ಸಾಲ ಕೊಡದೇ ಇದ್ದರೆ ಹೇಗೆ. ಹೀಗಾದರೆ ಯೋಜನೆಗಳು ಹೇಗೆ ಅನುಷ್ಠಾನಗೊಳ್ಳಬೇಕು ಎಂದು ಪ್ರಶ್ನಿಸಿದರು. ಕಾಟಾಚಾರಕ್ಕೆ ಸಭೆಗೆ ಬರಬೇಡಿ, ಕೇವಲ ಸಭೆ ನಡೆಸುವುದು, ನಿರ್ದೇಶನ ನೀಡುವುದು ಆಗುತ್ತಿದೆ. ಯಾವುದೇ ರೀತಿಯ ಕೆಲಸವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದಿನ ವರ್ಷಗಳ ಅರ್ಜಿಗಳು ಶೇ.50 ರಷ್ಟು ಬಾಕಿ ಉಳಿದಿವೆ. ಎಸ್‌ಬಿಐ ಬ್ಯಾಂಕಿಗೆ ಹೆಚ್ಚಿನ ಅರ್ಜಿ ಬಾಕಿ ಇದ್ದು, ಕೂಡಲೇ ವಿಲೆಯಾಗಬೇಕು. ಕಳೆದ 6 ತಿಂಗಳುಗಟ್ಟಲೇ ಅರ್ಜಿಗಳನ್ನು ಇಟ್ಟುಕೊಂಡರೆ ಹೇಗೆ. ಅರ್ಹತೆ ಇದ್ದವರಿಗೆ ಸಾಲ ವಿತರಿಸಬೇಕು. ದಾಖಲಾತಿ ಸರಿಯಾಗಿ ಇರದಿದ್ದರೆ ರಿಜೆಕ್ಟ್ ಮಾಡಲು ತಿಳಿಸಿದರು.

ಸಂಬಂಧಿಸಿದ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು 15 ದಿನಗಳ ಒಳಗಾಗಿ ಎಲ್ಲ ಅರ್ಜಿಗಳ ವಿಲೆ ಮಾಡಬೇಕು. ಬಾಕಿ ಉಳಿದಲ್ಲಿ ಸಂಬಂಧಿಸಿದ ಬ್ಯಾಂಕ್‌ಗಳ ಮೇಲಧಿಕಾರಿಗಳಿಗೆ ಶಿಸ್ತು ಕ್ರಮಕ್ಕಾಗಿ ಪತ್ರ ಬರೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಅಗ್ರಣೀಯ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ ಹೂಗಾರ ಮಾತನಾಡಿ, ಆದ್ಯತಾ ವಲಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಶೇ. 100.56 ಸಾಧನೆ ಮಾಡಲಾಗಿದೆ. ಬೆಳೆ ಸಾಲದಲ್ಲಿ ಶೇ. 98.27, ಇತರೆ ಕೃಷಿ ಸಾಲದಲ್ಲಿ ಶೇ. 107.67, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಶೇ. 91.24 ರಷ್ಟು, ಇತರೆ ಆದ್ಯತಾ ವಲಯಕ್ಕೆ ಶೇ. 64.16 ಸಾಲ ವಿತರಣೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಭಾರತೀಯ ರಿಸರ್ವ್‌ ಬ್ಯಾಂಕಿನ ಅಗ್ರಣೀಯ ಜಿಲ್ಲಾ ಅಧಿಕಾರಿ ಜಯಶ್ರೀ ಮಾತನಾಡಿ, ಆರ್ಥಿಕ ಸಾಕ್ಷರತೆಯನ್ನು ಉತ್ತೇಜಿಸುವ ಉದ್ದೇಶದಿಂದ 2024ರ ಆರ್ಥಿಕ ಸಪ್ತಾಹವನ್ನು ಜೂನ್‌ 26 ರಿಂದ ಮಾರ್ಚ 1, 2024ವರೆಗೆ ಸರಿಯಾಗಿ ಪ್ರಾರಂಭಿಸಿ-ಆರ್ಥಿಕವಾಗಿ ಸಾರ್ಟ್‌ ಆಗಿರಿ ಎಂಬ ವಿಷಯದ ಮೇಲೆ ಆಚರಿಸಲಾಗುತ್ತಿದೆ. ಈ ವರ್ಷ ಯುವ ವಯಸ್ಕರನ್ನು ಮುಖ್ಯವಾಗಿ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಳ್ಳಲಾಗಿದೆ. ಚಿಕ್ಕ ವಯಸ್ಸಿನಿಂದಲೇ ಆರ್ಥಿಕ ಶಿಸ್ತು ರೂಢಿಸಿಕೊಳ್ಳುವ ಪ್ರಯೋಜನಗಳ ಬಗ್ಗೆ ಅರಿವು
ಮೂಡಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಸಾಲ ಯೋಜನೆಯ ಮಾರ್ಗದರ್ಶಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ನಬಾರ್ಡನ ಡಿಡಿಎಂ ಮಂಜುನಾಥ ರೆಡ್ಡಿ, ಕೆನರಾ ಬ್ಯಾಂಕಿನ ರಿಸನಲ್‌ ಮ್ಯಾನೇಜರ್‌ ಶೈಲಜಾ ಕೆ.ಎಂ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ರಿಜಿನಲ್‌ ಮ್ಯಾನೇಜರ್‌ ರಾಜಶೇಖರ, ಜಿಲ್ಲಾ ಪಂಚಾ ಯತಿಯ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

BJP-protest

Congress Government: ತೈಲ, ಹಾಲಿನ ದರ ಹೆಚ್ಚಿಸಿ ಬಡವರಿಗೆ ಅನ್ಯಾಯ 

8–Mudhol

Mudhol: ಅಕ್ರಮ ಅಕ್ಕಿ ಸಾಗಾಟ ಲಾರಿ ವಶಕ್ಕೆ: ಇಬ್ಬರ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.