![1-havy](https://www.udayavani.com/wp-content/uploads/2024/12/1-havy-415x277.jpg)
ಬಾಗಲಕೋಟೆ: ಆರೋಗ್ಯ-ದೇಶಪ್ರೇಮ-ಸಂಪ್ರದಾಯದ ಅರಿವು
ಹನುಮಾನ್ ಚಾಲೀಸ್ ಪಠಿಸುವ ಕುರಿತು ಸತ್ಸಂಗಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ.
Team Udayavani, May 20, 2023, 2:15 PM IST
![ಬಾಗಲಕೋಟೆ: ಆರೋಗ್ಯ-ದೇಶಪ್ರೇಮ-ಸಂಪ್ರದಾಯದ ಅರಿವು](https://www.udayavani.com/wp-content/uploads/2023/05/Bagalkot-620x285.jpg)
ಬಾಗಲಕೋಟೆ: ಮಕ್ಕಳಿಗೆ ಇಂದು ಶಿಕ್ಷಣದ ಜತೆಗೆ ಆರೋಗ್ಯ, ದೇಶಪ್ರೇಮ ಹಾಗೂ ಸನಾತನ ಸಂಪ್ರದಾಯದ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಏಕಲ್ ಅಭಿಯಾನ ಉಪಾಧ್ಯಕ್ಷ ಸಿ.ಎಚ್. ಕಟಗೇರಿ ಹೇಳಿದರು.
ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ಏಕಲ್ ಅಭಿಯಾನ ಬಾಗಲಕೋಟೆ ಸೇವಾ ಸಂಘಟನೆ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಏಕಲ್ ಅಭಿಯಾನ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಾಲೆ ಅವಧಿ ನಂತರ ಪ್ರಾಥಮಿಕ ಶಿಕ್ಷಣ, ಆರೋಗ್ಯ, ಗ್ರಾಮ ವಿಕಾಸ, ಜಾಗರಣೆ ಹಾಗೂ ಸತ್ಸಂಗ ಸೇರಿ ಪಂಚಮುಖಿ ಶಿಕ್ಷಣ ನೀಡುವುದು ಏಕಲ್ ಅಭಿಯಾನದ ಮುಖ್ಯ ಉದ್ದೇಶ. ಆಯ್ದ ಗ್ರಾಮಗಳಲ್ಲಿ ರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ, ದೇಶಭಕ್ತಿ ಗೀತೆ, ಸಂಸ್ಕೃತಿ ಬಗ್ಗೆ ಹೇಳಿಕೊಡಲಾಗುತ್ತದೆ. ಗೋವು, ಗಂಗೆ, ತುಳಸಿ, ದುರ್ಗಾ ಪೂಜೆ ಹಾಗೂ ಹನುಮಾನ್ ಚಾಲೀಸ್ ಪಠಿಸುವ ಕುರಿತು ಸತ್ಸಂಗಗಳ ಮೂಲಕ ಜಾಗೃತಿ
ಮೂಡಿಸಲಾಗುತ್ತದೆ.
ಇದರೊಂದಿಗೆ ಏಕಲ್ ಸ್ವಯಂ ಸೇವಕರು ಗ್ರಾಮಗಳಲ್ಲಿ ಆರೋಗ್ಯ, ಸ್ವಚ್ಛತೆ, ಸಾವಯವ ಕೃಷಿ, ಸರಕಾರದ ಯೋ ಜನೆಗಳು, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸುವುದು, ಗುಡಿ ಕೈಗಾರಿಕೆಗಳ ತರಬೇತಿ ಬಗ್ಗೆಯೂ ತಿಳಿಸುತ್ತಾರೆ. ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದರು.
ಬಿಜೆಪಿ ಮುಖಂಡ ರಾಜು ನಾಯಕ ಮಾತನಾಡಿ, ಏಕಲ್ ಲಾಭ ರಹಿತ ಸಂಘಟನೆಯಾಗಿದ್ದು, ಧರ್ಮ, ಪರಿಸರ, ಗೋವುಗಳ ಸಂರಕ್ಷಣೆ ಹಾಗೂ ಮತಾಂತರ ತಡೆ ಬಗ್ಗೆ ಈ ಸಂಘಟನೆ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಡಾ| ಗಿರೀಶ ಅವರು
ನಗರದ ಬನಶಂಕರಿ ಆಸ್ಪತ್ರೆಯಲ್ಲಿ 2011ರಲ್ಲಿ ಡಾ| ಗಿರೀಶ ಮಾಸೂರಕರ್, ಡಾ| ಬಾಬುರಾಜೇಂದ್ರ ನಾಯಕ, ಶಿವಕುಮಾರ ಚಿಲ್ಲಾಳ, ಪರಶುರಾಮ ಮುಳಗುಂದ ಮತ್ತಿತರರ ನೇತೃತ್ವದಲ್ಲಿ ಈ ಸಂಘಟನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಅಂದು 30 ಹಳ್ಳಿಗಳಲ್ಲಿ ಕಾರ್ಯ ಆರಂಭಿಸಲಾಗಿತ್ತು. ಸದ್ಯ ಜಿಲ್ಲೆಯ 150 ಹಳ್ಳಿಗಳಲ್ಲಿ ಸಂಘಟನೆ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಮುಂಬೈನ ಸೂರಜ್ಮಲ್ ತಪಾಡಿಯಾ
ಮೆಮೋರಿಯಲ್ ಟ್ರಸ್ಟ್ ನೀಡಿದ ವಾಹನ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರ ನೇತೃತ್ವದಲ್ಲಿ ಬರಮಾಡಿಕೊಳ್ಳಲಾಯಿತು. ಪರಶುರಾಮ ಮುಳಗುಂದ, ರಮೇಶ ಅಂಗಡಿ, ಚಂದ್ರಶೇಖರ ದೊಡಮನಿ, ಬಾಬುರಾಜೇಂದ್ರ ನಾಯಕ, ಬೇವಿನಮಟ್ಟಿ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10](https://www.udayavani.com/wp-content/uploads/2024/12/10-30-150x80.jpg)
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
![ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ](https://www.udayavani.com/wp-content/uploads/2024/12/mahalingapura-150x109.jpg)
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
![4-soldier](https://www.udayavani.com/wp-content/uploads/2024/12/4-soldier-150x90.jpg)
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
![Mudhola](https://www.udayavani.com/wp-content/uploads/2024/12/Mudhola-150x90.jpg)
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
![Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ](https://www.udayavani.com/wp-content/uploads/2024/12/POLICE-STATION-150x100.jpg)
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.