ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ ಶಾಲೆ

Team Udayavani, Sep 13, 2024, 1:35 PM IST

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಉದಯವಾಣಿ ಸಮಾಚಾರ
ಗುಳೇದಗುಡ್ಡ: ತೋಗುಣಶಿ ಗ್ರಾಮದ ಹತ್ತಿರ ಇಂದಿರಾಗಾಂಧಿ ವಸತಿಯುತ ಶಾಲೆಯ ನೂತನ ಕಟ್ಟಡ ಪೂರ್ಣಗೊಂಡಿದ್ದರೂ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ. ಹೀಗಾಗಿ ಶಾಲೆ ಇನ್ನೂ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿದ್ದು ಸುಸಜ್ಜಿತ ಹೊಸ ಕಟ್ಟಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಬಳಕೆಗೆ ಸಿಗುತ್ತಿಲ್ಲ. ಹೊಸ ಕಟ್ಟಡ ಸಮುಚ್ಛಯದಲ್ಲಿ ವಸತಿ ಶಾಲೆ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿಗೃಹ ಸೇರಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಎಲ್ಲ ಸಾಮಗ್ರಿಗಳು ಇಲ್ಲಿಗೆ ಬಂದಿವೆ. ಆದರೆ ಇದುವರೆಗೆ ಶಾಲೆ ಸ್ಥಳಾಂತರವಾಗಿಲ್ಲ. ಅ ಧಿಕಾರಿಗಳು ಶೀಘ್ರವೇ ಶಾಲೆ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎನ್ನುತ್ತಿದ್ದಾರೆ. ಆದರೆ ಈವರೆಗೂ ಮುಹೂರ್ತ ಕೂಡಿಬಂದಿಲ್ಲ.

ಪಟ್ಟಣದ ಖಾಸಗಿ ಕಟ್ಟಡದಲ್ಲಿ 2016-17ನೇ ಸಾಲಿನಿಂದ ಇಂದಿರಾಂಧಿ ವಸತಿ ಶಾಲೆ ಆರಂಭವಾಗಿದೆ. ಇದುವರೆಗೆ ಎಸ್‌ಎಸ್‌ಎಲ್‌
ಸಿಯ ಮೂರು ಬ್ಯಾಚ್‌ ವಿದ್ಯಾರ್ಥಿಗಳು ಉತ್ತಿರ್ಣರಾಗಿ ಹೊರ ಹೋಗಿದ್ದಾರೆ. ಪ್ರಸ್ತುತ ಒಟ್ಟು 240 ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 10ನೇ ತರಗತಿಗಳಲ್ಲಿ ಓದುತ್ತಿದ್ದಾರೆ. ಒಟ್ಟು 19 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದು ಅದರಲ್ಲಿ 8 ಜನ ಹೊರಗುತ್ತಿಗೆ ನೌಕರರಿದ್ದಾರೆ.

ವಾರ್ಷಿಕ 14 ಲಕ್ಷ ಬಾಡಿಗೆ: ಪಟ್ಟಣದ ಖಾಸಗಿ ಕಟ್ಟಡದಲ್ಲಿ ವಸತಿ ಶಾಲೆ ನಡೆಸುವುದಕ್ಕೆ ವಾರ್ಷಿಕ 14 ಲಕ್ಷಕ್ಕೂ ಅಧಿಕ ಬಾಡಿಗೆ ನೀಡಲಾಗುತ್ತಿದೆ. ಆದರೆ ಆಟದ ಬಯಲು ಇರದೆ ಇರುವುದರಿಂದ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಎಲ್ಲ ಸೌಲಭ್ಯ ಒಳಗೊಂಡಿರುವ ಕಟ್ಟಡಕ್ಕೆ ಶೀಘ್ರ ಶಾಲೆ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು
ಒತ್ತಾಯಿಸುತ್ತಿದ್ದಾರೆ.

ಕಟ್ಟಡ ಮುಗಿದಿದ್ದು, ಕಟ್ಟಡದ ಮೂಲಭೂತ ಸೌಲಭ್ಯ ಮತ್ತು ಇತರೆ ಸಾಮಗ್ರಿ ಮತ್ತು ಸಿಸಿ ಟಿವಿ ಅಳವಡಿಸುವುದು ಸೇರಿದಂತೆ ಎಲ್ಲ ಮಾಹಿತಿ ನೀಡಿದ್ದು, ಅದರಂತೆ ಎಲ್ಲ ಕೆಲಸ ಮುಗಿದಿದೆ. ವಿದ್ಯಾರ್ಥಿಗಳಿಗೆ ಸಂಬಂಧಿ ಸಿದ ಸಾಮಗ್ರಿಗಳು ಬಂದಿವೆ. ಕೆಲವೇ ದಿನಗಳಲ್ಲಿ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
●ಆರ್‌.ಜೆ.ಪವಾರ, ಪ್ರಾಚಾರ್ಯರು,
ಇಂದಿರಾಗಾಂಧಿ  ವಸತಿ ಶಾಲೆ,ಗುಳೇದಗುಡ್ಡ

ಇಂದಿರಾಗಾಂಧಿ ವಸತಿ ನಿಲಯ ಕಟ್ಟಡ ನಿರ್ಮಾಣವಾಗಿದೆ. ಆದರೆ ಅದರ ಹಸ್ತಾಂತರ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಅದನ್ನು ಸಂಬಂಧಿಸಿದ ಪ್ರಾಚಾರ್ಯರಿಗೆ ಹಸ್ತಾಂತರ ಮಾಡಬೇಕಾಗುತ್ತದೆ. ಅದು ಯಾವ ಸ್ಥಿತಿಯಲ್ಲಿದೆ ಎನ್ನುವ ಮಾಹಿತಿ ಇಲ್ಲ.
●ಸದಾಶಿವ ಬಡಿಗೇರ,
ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ

ಕಟ್ಟಡ ಪೂರ್ಣಗೊಂಡರೂ ಇದುವರೆಗೆ ಸ್ಥಳಾಂತರಿಸಿಲ್ಲ. ಮಕ್ಕಳಿಗೆ ಎಲ್ಲ ಸೌಲಭ್ಯ ಇರುವುದರಿಂದ ಅದಷ್ಟು ಬೇಗನೇ ಹೊಸ
ಕಟ್ಟಡದಲ್ಲಿ ಪಾಠಗಳು ನಡೆಯುವಂತಾಗಬೇಕು.
●ಶ್ರೀನಿವಾಸ ನೆಲ್ಲೂರ, ಹಾನಾಪೂರ ಎಸ್‌.ಪಿ. ಗ್ರಾಮ

ಎಲ್ಲ ಕೆಲಸಗಳು ಮುಗಿದಿದ್ದು ವಿದ್ಯುತ್‌ ಸರಬರಾಜಿಗೆ ಸಂಬಂಧಿ ಸಿದ ಕೆಲಸ ಬಾಕಿ ಇದೆ. ಅದನ್ನು ಈ ವಾರದಲ್ಲಿ ಪೂರ್ಣಗೊಳಿಸಿ
15 ದಿನದಲ್ಲಿ ಪ್ರಾಚಾರ್ಯರಿಗೆ ಕಟ್ಟಡ ಹಸ್ತಾಂತರಿಸಲಾಗುವುದು.
●ನಟರಾಜನ್‌, ಕಿರಿಯ ಇಂಜಿನಿಯರ್‌,
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ

*ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.