![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 14, 2023, 6:42 PM IST
ರಬಕವಿ-ಬನಹಟ್ಟಿ : ಕ್ಷುಲ್ಲಕ ಕಾರಣಕ್ಕೆ ಸಹೋದರಿಯಬ್ಬರನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಸೋಮವಾರ ಸಂಜೆ ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಡಪ್ಪ ಯಲ್ಲಪ್ಪ ಭುಜಂಗ(30) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ಕಾಡಪ್ಪ ತನ್ನ ಸಹೋದರಿ ಬಂದವ್ವ ಮಿರ್ಜಿಯವಳ ಮನೆಯಾದ ಬನಹಟ್ಟಿಯ ಸೋಮವಾರ ಪೇಟೆ ಕುರುಬರ ಓಣಿಗೆ ಹೋಗಿ, ನಾಲ್ಕೈದು ದಿನ ನಮ್ಮ ಮನೆಗೆ ಹೋಗೋಣ, ನಿನ್ನ ಇಬ್ಬರೂ ಮಕ್ಕಳ ಪರೀಕ್ಷೆಯಿರುವ ಕಾರಣ ಪರೀಕ್ಷೆ ಮುಗಿದ ನಂತರ ವಾಪಸ್ ಬರುವಂತೆ ಹೇಳಿದ್ದಾನೆ.
ಈ ವಿಚಾರಕ್ಕೆ ಕೋಪಗೊಂಡ ನಾದಿನಿಯರಾದ ಯಲ್ಲವ್ವ ಹಾಗೂ ಸಹೋದರಿ ಬೌರವ್ವ ಕಾಡಪ್ಪನಲ್ಲಿ ನಮ್ಮ ಮನೆ ಮಂದಿಯ ಆರೋಗ್ಯವೂ ಸರಿಯಿಲ್ಲ ಅದಲ್ಲದೆ ಆಕೆಯ ಪತಿ ತೀರಿಕೊಂಡು ಆರೇಳು ತಿಂಗಳು ಮಾತ್ರವಾಗಿದೆ. ನೀನೂ ಹಿರಿಯನಾಗಿ ನಿನಗೂ ತಿಳಿಯುವುದಿಲ್ಲವೇ ಎಂದಿದ್ದಕ್ಕೆ ಕೋಪಗೊಂಡ ಆರೋಪಿ ಕಾಡಪ್ಪ ಅವರಿಬ್ಬರ ಮೇಲೆ ಕಬ್ಬಿಣದ ಹುಕ್ಕಿನಿಂದ ಇಬ್ಬರೂ ನಾದಿನಿಯರ ತಲೆಗೆ ಹೊಡೆದಿದ್ದಾನೆ, ಗಂಭೀರ ಗಾಯಗೊಂಡ ಅವರಿಬ್ಬರನ್ನೂ ಮನೆಯಿಂದ ಹೊರಗೆ ಎಳೆದೊಯ್ದು ಬಳಿಕ ಅಂಗಳದಲ್ಲಿ ಕಲ್ಲು ತಲೆಯಮೇಲೆ ಎತ್ತಿ ಹಾಕಿ ಕೊಲೆಗೈದಿದ್ದಾನೆ.
ಈ ಕುರಿತು ಬಂದವ್ವ ಸತೀಷ ಮಿರ್ಜಿ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಾಂತವೀರ ಇ., ಸಿಪಿಐ ಸುನೀಲ ಪಾಟೀಲ, ಪಿಎಸ್ಐ ರಾಘವೇಂದ್ರ ಖೋತ ಆಗಮಿಸಿ ತನಿಖೆ ಮುಂದುವರೆಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.