ಬ್ಯಾಂಕ್‌ ನೌಕರರ ಮುಷ್ಕರ; ಗ್ರಾಹಕ ಕಂಗಾಲು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Mar 29, 2022, 12:34 PM IST

9

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖೀಲ ಭಾರತ ಬ್ಯಾಂಕ್‌ ನೌಕರರು ಎರಡು ದಿನಗಳ ಮುಷ್ಕರ ನಡೆಸುತ್ತಿದ್ದು, ಗ್ರಾಹಕರು ಪರದಾಡುವಂತಾಯಿತು.

ಕಳೆದ ನಾಲ್ಕು ದಿನಗಳಿಂದ ಬ್ಯಾಂಕ್‌ಗಳ ಕಾರ್ಯ ಚಟುವಟಿಕೆ ಸ್ಥಗಿತಗೊಂಡಿವೆ. ಕೊನೆಯ ಶನಿವಾರ, ರವಿವಾರ ರಜೆ ಇದ್ದವು. ಅಲ್ಲದೇ ಸೋಮವಾರ ಮತ್ತು ಮಂಗಳವಾರ ಎರಡು ದಿನ ನೌಕರರು ಮುಷ್ಕರಕ್ಕೆ ಕಡೆ ನೀಡಿದ್ದಾರೆ.

ನೌಕರರ ಮುಷ್ಕರದ ಕುರಿತು ಗೊತ್ತಿಲ್ಲದೇ ಗ್ರಾಹಕರು ಬ್ಯಾಂಕ್‌ನತ್ತ ಆಗಮಿಸಿ, ನಿರಾಸೆಯಿಂದ ಮರಳಿದರು. ಮುಖ್ಯವಾಗಿ ಕೇಂದ್ರೀಯ ವಿದ್ಯಾಲಯ ಸಹಿತ ವಿವಿಧ ಶಾಲೆಗಳ ಮಕ್ಕಳ ಶಾಲಾ ಶುಲ್ಕ ಪಾವತಿ, ಆನ್‌ಲೈನ್‌ ಬ್ಯಾಂಕಿಂಗ್‌ ವ್ಯವಸ್ಥೆ ಮಾಡಿದ್ದು, ಮಾರ್ಚ್‌ ಕೊನೆ ಆಗಿದ್ದರಿಂದ ಆನ್‌ಲೈನ್‌ ವ್ಯವಸ್ಥೆ ಕೂಡ ಸ್ಥಗಿತಗೊಂಡಿದೆ. ಹೀಗಾಗಿ ಹಲವಾರು ಪಾಲಕರು, ವಿದ್ಯಾಗಿರಿಯ ಯೂನಿಯನ್‌ ಬ್ಯಾಂಕ್‌ ಶಾಖೆಗೆ ಆಗಮಿಸಿ, ಶುಲ್ಕ ಪಾವತಿಸಲಾಗದೇ ಮರಳಿದರು.

ಬೇಡಿಕೆ ಈಡೇರಿಕೆಗೆ ಒತ್ತಾಯ: ಕರ್ನಾಟಕ ಪ್ರದೇಶ ಬ್ಯಾಂಕ್‌ ನೌಕರರ ಫೆಡರೇಶನ್‌ ಜಿಲ್ಲಾ ಅಧ್ಯಕ್ಷ ಆನಂದ ಕುಲಕರ್ಣಿ ನೇತೃತ್ವದಲ್ಲಿ ವಿದ್ಯಾಗಿರಿಯ ಬ್ಯಾಂಕ್‌ ಆಫ್‌ ಬರೋಡಾ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಸಾರ್ವಜನಿಕರಿಗೆ ಆರ್ಥಿಕ ಸಹಕಾರ ನೀಡುವ ಬ್ಯಾಂಕ್‌ ಬಲಪಡಿಸಬೇಕು, ಖಾಸಗೀಕರಣ ನಿಲ್ಲಿಸಬೇಕು. ಕಟಬಾಕಿ ಸಾಲ ವಸೂಲಿಗೆ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು. ಬ್ಯಾಂಕ್‌ನ ಠೇವಣಿ ಮೇಲಿನ ಬಡ್ಡಿ ದರ ಹೆಚ್ಚಿಸಬೇಕು. ಹೆಚ್ಚಿನ ಸೇವಾ ಶುಲ್ಕಗಳನ್ನು ಕಡಿಮೆ ಮಾಡಿ, ಗ್ರಾಹಕರಿಗೆ ಹೊರೆಯಾಗದಂತೆ ನಿಯಮ ರೂಪಿಸಬೇಕು. ಎನ್‌ಪಿಎಸ್‌ ರದ್ದುಪಡಿಸಿ, ಡಿಎ ಲಿಂಕ್ಡ್ ಪಿಂಚಣಿ ಯೋಜನೆ ಪುನಃ ಆರಂಭಿಸಬೇಕು. ಹೊರ ಗುತ್ತಿಗೆ ನಿಲ್ಲಿಸಿ, ನೇಮಕಾತಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಫೆಡರೇಶನ್‌ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಸಂಗಮ್‌, ಪ್ರಮುಖರಾದ ಮಂಜುನಾಥ ಬಿರಾದಾರ, ಶಿವಶಂಕರ ಮುದಗಲ್‌, ಅಂಜನ ಝಳಕಿ, ಶ್ರೀಮಂತ ನೀರಗುದಿ, ಶರಣು ಅಂಟಿನ್‌, ರಾಘವೇಂದ್ರ ಧಾಮಜಿ, ಸುಮಿತ ಜೂಜಿನ, ಹರ್ಷವರ್ಧನ ಹಣಮಂತ ಕದಾಂಪುರ, ಪ್ರವೀಣ ಕುದರಿ ಸೇರಿದಂತೆ ನೂರಾರು ಜನ ಬ್ಯಾಂಕ್‌ನ ನೌಕರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.