
ಜಿಲ್ಲಾದ್ಯಂತ ಸಂಭ್ರಮದ ಬಸವೇಶ್ವರ ಜಯಂತಿ
•ಎಲ್ಲ ತತ್ವಗಳಿಗೂ ಬಸವಣ್ಣನವರ ವಚನಗಳು ಸ್ಫೂರ್ತಿ•12ನೇ ಶತಮಾನದ ಶರಣರ ಆದರ್ಶ ಪಾಲಿಸಿ
Team Udayavani, May 8, 2019, 11:08 AM IST

ಬಾಗಲಕೋಟೆ: ನವನಗರದ ಜಿಪಂ ಸಭಾಭವನದಲ್ಲಿ ಬಸವಣ್ಣನವರ ಜಯಂತಿ ಆಚರಿಸಲಾಯಿತು.
ಬಾಗಲಕೋಟೆ: ಬಸವಣ್ಣನವರ ವಿದ್ಯಾ ಸ್ಥಳ ಹಾಗೂ ಐಕ್ಯ ಸ್ಥಳ ಆಗಿರುವ ಬಾಗಲಕೋಟೆ ಜಿಲ್ಲೆ ವಿಶ್ವಕ್ಕೆ ಸಂದೇಶ ನೀಡಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಹೇಳಿದರು.
ನವನಗರದ ಜಿಪಂ ಸಭಾಭವನದಲ್ಲಿ ಜಿಲ್ಲಾ ಆಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮಾನವ ಕಾಯಕ ರೂಢಿಸಿಕೊಳ್ಳಬೇಕು. ಕಾಯಕವೇ ಕೈಲಾಸ ಎಂದು ಹೇಳಿದ ಮಾತು ಇಂದಿಗೂ ಕೂಡ ಪ್ರಚಲಿತವಾಗಿದೆ. ಬಸವಣ್ಣವರು ದುಡಿತದಿಂದ ಸನ್ಮಾರ್ಗ ಕಂಡುಕೊಳ್ಳಲು ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರು ತಮ್ಮನ್ನು ತಾವು ಅರಿತು ನಡೆಯಬೇಕು. ನಡೆ-ನುಡಿಗಳು ಒಂದಾಗಿರಬೇಕು ಎಂಬುದು ಅವರ ತತ್ವವಾಗಿತ್ತು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಮಾತನಾಡಿ, ದೇಶ ವಿದೇಶಗಳ ಸಂವಿಧಾನ ಮತ್ತು ತತ್ವ ಸಿದ್ಧಾಂತ ಅವಲೋಕಿಸಿದಾಗ ಆ ಎಲ್ಲ ತತ್ವಗಳಿಗೂ ಬಸವಣ್ಣನವರ ವಚನಗಳು ಸ್ಫೂರ್ತಿಯಾಗಿವೆ. 12ನೇ ಶತಮಾನದ ಈ ಶರಣರು ರಚಿಸಿದ ವಚನಗಳು ಕನ್ನಡ ಭಾಷೆಯಲ್ಲಿರುವುದರಿಂದ ಬೇರೆ ದೇಶಕ್ಕೆ ಹೋಗದೇ ಮತ್ತು ಕನ್ನಡಕ್ಕೆ ಅಂದು ರಾಷ್ಟ್ರೀಯ ಭಾಷೆ ಸ್ಥಾನಮಾನ ದೊರೆಯದೇ ಇರುವುದರಿಂದ ಬೇರೆ ದೇಶದವರಿಗೆ ಈ ವಚನಗಳ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದರು.
ಇಂಗ್ಲೆಂಡಿನ ಥೇಮ್ಸ್ ನದಿ ದಡದಲ್ಲಿ ಕನ್ನಡಿಗ ನೀರಜ್ ಪಾಟೀಲರ ಇಚ್ಚಾಶಕ್ತಿಯಿಂದ ಅಲ್ಲಿ ಬಸವಣ್ಣನವರ ಮೂರ್ತಿ ಸ್ಥಾಪಿಸಲಾಗಿದೆ. ಇಂದು ವಿಶ್ವವೇ ಬಸವಣ್ಣನವರ ವಚನಗಳಿಗೆ ಮಾರು ಹೋಗಿದೆ. ಈ ಎಲ್ಲ ಕೀರ್ತಿಯೂ ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆ ಸಲ್ಲಬೇಕಾಗಿದೆ. ನಾವು ಇಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಬಸವೇಶ್ವರ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ| ಸುಮಂಗಲಾ ಮೇಟಿ ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ದುರ್ಗೆಶ ರುದ್ರಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಕಂದಾಯ ಇಲಾಖೆಯ ಮಲ್ಲಿಕಾರ್ಜುನ ಗುಡೂರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.