ಮಹಿಳೆಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ; ಉಮಾ ಮಹಾದೇವನ್‌

ಘನತ್ಯಾಜ್ಯ ವಿಲೇವಾರಿಗೆ ಕಾರ್ಯಕ್ಕೆ 5 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ

Team Udayavani, Nov 30, 2022, 6:33 PM IST

ಮಹಿಳೆಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ; ಉಮಾ ಮಹಾದೇವನ್‌

ಬಾಗಲಕೋಟೆ: ಸ್ವಚ್ಛ ಸಂಕೀರ್ಣ ನಿರ್ವಹಣೆಯಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಅವಶ್ಯವಾಗಿದೆ ಎಂದು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್‌ ತಿಳಿಸಿದರು.

ಜಿಪಂ ನೂತನ ಸಭಾಭವನದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್‌ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನಯೋಪಾಯ ಇಲಾಖೆ ಜಿಪಂ ಸಹಯೋಗದಲ್ಲಿ ಸ್ವತ್ಛ ಸಂಕೀರ್ಣ ನಿರ್ವಹಣೆಯಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮನೆಯನ್ನು ಸ್ವತ್ಛವಾಗಿಟ್ಟುಕೊಳ್ಳುವ ಹಾಗೆ ಗ್ರಾಮವನ್ನು ಸ್ವಚ್ಛವಾಗಿಡುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಗ್ರಾಮಗಳ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಅಗತ್ಯವಾಗಿದೆ. ಗ್ರಾಮದಲ್ಲಿ ಡಿಜಿಟಲ್‌ ಗ್ರಂಥಾಲಯ, ಘನತ್ಯಾಜ್ಯ ವಿಲೇವಾರಿ ಮುಖ್ಯವಾಗಿದೆ. ಗ್ರಾಮಗಳ ಘನತ್ಯಾಜ್ಯವನ್ನು ಬೇರ್ಪಡಿಸಿ ವಿಲೇವಾರಿಯಲ್ಲಿ ಸ್ವ-ಸಹಾಯಗಳ ಪಾತ್ರ ಮುಖ್ಯವಾಗಿದೆ. ಇದರಿಂದ ಮಹಿಳೆಯರು ಉದ್ಯೋಗ ಪಡೆಯುವುದರ ಜೊತೆಗೆ ಗ್ರಾಮ ಸ್ವತ್ಛವಾಗಿಡಲು ಸಾಧ್ಯವಾಗುತ್ತದೆ. ತಮ್ಮದೇಯಾದ ನಿವೇಶನ ಹೊಂದಿದಲ್ಲಿ ಶೆಡ್‌ ನಿರ್ಮಿಸಿಕೊಂಡು ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.

ಮಹಿಳೆ ಸ್ವಚ್ಛವಾಹಿನಿಯ ಚಾಲನೆ ಮಾಡುವುದಷ್ಟೇ ಅಲ್ಲ ಟ್ರ್ಯಾಕ್ಟರ್‌, ಜೆಸಿಬಿಗಳನ್ನು ಸಹ ಚಾಲನೆ ಮಾಡುತ್ತಿದ್ದಾಳೆ. ಗಂಡಿಗೆ ಸಮಾನವಾದ ಕೆಲಸವನ್ನು ಮಹಿಳೆಯರು ಮಾಡಬಹುದಾಗಿದೆ. ಇದಕ್ಕಾಗಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಮಹಿಳಾ ಸಬಲೀಕರಣದ ಜೊತೆಗೆ ಗ್ರಾಮಗಳ ಅಭವೃದ್ಧಿ ಮಾಡಲಾಗುತ್ತಿದೆ. ತರಬೇತಿ ಸಂಪೂರ್ಣ ಲಾಭವನ್ನು ಪಡೆಯಬೇಕು ಎಂದು ಹೇಳಿದರು.

ಜಿಪಂ ಸಿಇಒ ಟಿ. ಭೂಬಾಲನ್‌ ಮಾತನಾಡಿ, ಜಿಲ್ಲೆಯಲ್ಲಿ ಸುಸಜ್ಜಿತವಾದ ಕಟ್ಟಡ ಹೊಂದಿರುವ ಸ್ಥಳಗಳಲ್ಲಿ ಡಿಜಿಟಲ್‌ ಗ್ರಂಥಾಲಯ ಪ್ರಾರಂಭಿಸಲಾಗುತ್ತದೆ. ಘನತ್ಯಾಜ್ಯ ವಿಲೇವಾರಿಗೆ ಕಾರ್ಯಕ್ಕೆ 5 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು.

ಎಎನ್‌ಎನ್‌ಎಸ್‌ಐಆರ್‌ಡಿ ಮತ್ತು ಪಿಆರ್‌ ನಿರ್ದೇಶಕಿ ಲಕ್ಷ್ಮೀಪ್ರಿಯಾ ದೂರದೃಷ್ಟಿ ಯೋಜನೆ ಕುರಿತು, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಆರ್‌. ಮುಂಡರಗಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಜಿಲ್ಲೆಯ ಪ್ರಸ್ತುತ ಅನುಷ್ಠಾನ ಹಾಗೂ ಪ್ರಗತಿ ವರದಿ ಕುರಿತು ಮಾತನಾಡಿದರು. ಹಸಿರು ದಳ ಸಂಸ್ಥೆಯ ಮಂಜುನಾಥ ಅವರು ಕಸ ವಿಂಗಡಣೆ ಕುರಿತು, ಬೆಂಗಳೂರಿನ ಸಾಹಸ್‌ ಸಂಸ್ಥೆ ಪ್ರತಿನಿಧಿ ಚಂದ್ರಶೇಖರ ಸುಸ್ಥಿರ ಕಸ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಕುಂದರಗಿ ಗ್ರಾಮ ಪಂಚಾಯತಿಯ ಸ್ವತ್ಛ ವಾಹಿನಿ ಚಾಲಕಿ ಶರೀಫಾಬಾನು ಬೂದಿಹಾಳ, ಸೂಳಿಭಾವಿ ಗ್ರಾಮದ ತ್ಯಾಜ್ಯ ನಿರ್ವಹಣೆ ಮಹಿಳಾ ಸದಸ್ಯೆ ಶ್ರೀದೇವಿ ಮಾದರ, ಕುಳಲಿ ಗ್ರಾಪಂ ಅಧ್ಯಕ್ಷೆ ಶಾರದಾ ತೇಲಿ ಮೊದಲಾದವರು ತಮ್ಮ ಅನುಭವ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಪ್ರೊಬೆಷನರಿ ಐಎಎಸ್‌ ಅಧಿಕಾರಿ ಕನಿಷ್ಕ, ಜಿಪಂ ಉಪ ಕಾರ್ಯದರ್ಶಿ ಎನ್‌.ವೈ. ಬಸರಿಗಿಡದ ಮುಂತಾದವರು ಉಪಸ್ಥಿತರಿದ್ದರು. ಪಿಡಿಒಗಳು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ನೂತನ ಎರಡು ಸ್ವತ್ಛ ವಾಹಿನಿಗಳಿಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.