![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 26, 2023, 6:57 PM IST
ರಬಕವಿ ಬನಹಟ್ಟಿ : ಅಕ್ಕಲಕೋಟೆಯ ರೇವಣಸಿದ್ಧ ಮಹಾಸಂಸ್ಥಾನ ಮಠದ ಹಾಗೂ ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಚಿಕ್ಕರೇವಣಸಿದ್ಧ ಶಿವ ಶರಣರು(62) ಇಂದು ಅಸ್ತಂಗತರಾದರು. ಶ್ರೀಗಳು ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಕಳೆದ ಫೆ.3 ರಂದು ಬನಹಟ್ಟಿಯ ಬೃಹತ್ ವೇದಿಕೆಯಲ್ಲಿ ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರುಗಳಾಗಿ ಪರಮಪೂಜ್ಯ ಶ್ರೀ ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಕಾರ್ಯಕ್ರಮ, ಕಿರೀಟ ಪೂಜೆ, ಕೈಲಾಸ ಮಂಟಪ ಪೂಜೆ, ಜಗದ್ಗುರುಗಳ ತುಲಾಭಾರ ಕಾರ್ಯಕ್ರಮವು ಇತಿಹಾಸ ನಿರ್ಮಿಸಿತ್ತು.
ಇವರ ಅಗಲಿಕೆಯಿಂದ ಕರ್ನಾಟಕ ಹಾಗು ಮಹಾರಾಷ್ಟ್ರ ರಾಜ್ಯಗಳಲ್ಲಿರುವ ಲಕ್ಷಾಂತರ ಭಕ್ತರು ಕಂಬನಿ ಮಿಡಿದಿದ್ದಾರೆ. ಇವರ ಅಂತ್ಯಕ್ರಿಯೆ ರಾಯಚೂರ ಜಿಲ್ಲೆಯ ಲಿಂಗಸೂರ ತಾಲೂಕಿನ ಗುಡದನಾಳದ ಚಿಕ್ಕ ರೇವಣಸಿದ್ದರ ಮಠದ ಆವರಣದಲ್ಲಿ ಬುಧವಾರ 27ರಂದು ಮುಂಜಾನೆ 8 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.