ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣ ಅಗತ್ಯ: ಡಾ| ವಿಜಯಲಕ್ಷ್ಮೀ

ವಿಕಸನಕ್ಕೆ ತಾಯಿ ಮತ್ತು ಸಮರ್ಥಗುರುವಿನ ಮಾರ್ಗದರ್ಶನ ಅಗತ್ಯವಾಗಿಬೇಕು.

Team Udayavani, Jul 13, 2022, 5:36 PM IST

ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣ ಅಗತ್ಯ: ಡಾ| ವಿಜಯಲಕ್ಷ್ಮೀ

ಬಾಗಲಕೋಟೆ: ಒಂದು ರಾಷ್ಟ್ರೀಯ ಭವಿಷ್ಯ ನಿಂತಿರುವುದು ಒಳ್ಳೆಯ ಸಂಸ್ಕಾರವಂತ ಮಕ್ಕಳ ಮೇಲೆ. ಶಿಕ್ಷಣ, ಶಿಸ್ತು, ಶಿಷ್ಟಾಚಾರ, ಸುಚಿತ್ವ, ಮತ್ತು ಸ್ವಾಸ್ಥ್ಯ ಈ ಪಂಚ ತತ್ವಗಳನ್ನು ಅಳವಡಿಸಿಕೊಂಡ ಮಕ್ಕಳು ಒಂದು ಸಮಾಜ‌, ರಾಷ್ಟ್ರದ ಆಸ್ತಿಯಾಗಬಲ್ಲರು ಎಂದು ಬೆಂಗಳೂರು ವೈದ್ಯಕೀಯ ಕಾಲೇಜಿನ ಹಾಗೂ ಸಂಶೋಧನ ಸಂಸ್ಥೆಯ ಹಿರಿಯ ವಿಶ್ರಾಂತ ವೈದ್ಯ ಪ್ರಾಧ್ಯಾಪಕಿ ಡಾ|ವಿಜಯಲಕ್ಷ್ಮೀ ಬಾಳೆಕುಂದ್ರಿ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಕಾಲೇಜಿನ ಮಹಿಳಾ ಸಶಕ್ತೀಕರಣ ಘಟಕ, ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಮಹಿಳಾ ಸಶಕ್ತೀಕರಣ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆಯಲ್ಲಿ ಮಹಿಳೆ ಕೇಂದ್ರ ಬಿಂದು. ಶ್ರಮದ ಬದುಕನ್ನು ತಳೆದು, ತನ್ನ ನಿರಂತರ ಕ್ರಿಯಾಶೀಲತೆಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ$ವಿವಿಧ ಆಯಾಮಗಳಲ್ಲಿ ವೈವಿಧ್ಯಮಯವಾಗಿ ಕಾರ್ಯನಿರ್ವಹಿಸಿ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಬಂದವಳು.

ಕೌಟುಂಬಿಕ ಅನೇಕ ಸಮಸ್ಯೆ ಮತ್ತು ಸವಾಲುಗಳ ಮಧ್ಯದಲ್ಲಿಯೂ ತನ್ನ ಆತ್ಮಸ್ಥೈರ್ಯ ಕಳೆದುಕೊಳ್ಳದೇ ತನ್ನ ಕುಟುಂಬಕ್ಕೆ ಆತ್ಮಬಲವನ್ನು ತುಂಬಿ ಇಡಿ ಕುಟುಂಬವನ್ನು ಮುನ್ನಡೆಸುತ್ತಾ ಬಂದಿದ್ದಾಳೆ.

ಅಂತಹ ತಾಯಿಯೊಂದಿಗೆ ಅಜ್ಜ, ಅಜ್ಜಿಯರ ಸಂಸ್ಕಾರ ಒಂದೆಡೆಯಾದರೆ, ಇನ್ನೊಂದೆಡೆ ಗುರುವಿನ ಸಂಸ್ಕಾರ ಮಗುವಿಗೆ ದೊರೆಯುವಂತಾಗಬೇಕು. ವ್ಯಕ್ತಿತ್ವ ವಿಕಸನಕ್ಕೆ ತಾಯಿ ಮತ್ತು ಸಮರ್ಥಗುರುವಿನ ಮಾರ್ಗದರ್ಶನ ಅಗತ್ಯವಾಗಿಬೇಕು. ಪರಿಶುದ್ಧವಾದ, ಪ್ರಾಮಾಣಿಕತೆಯ ಮತ್ತು ಅನ್ಯರ ನೋವಿಗೆ ಸ್ಪಂದಿಸುವ ಹೃದಯವಂತಿಕೆಯಲ್ಲಿ ಮಗುವಿನ ವ್ಯಕ್ತಿತ್ವ ಅರಳುವಂತಾಗಬೇಕು ಎಂದರು.

ಬಿವಿವಿ ಸಂಘದ ಮುಖ್ಯ ಸಲಹೆಗಾರ ಡಾ| ಮೀನಾ ಚಂದಾವರಕರ ಮಾತನಾಡಿ, ಅವರಿಬ್ಬರ ಸಹಕಾರ ಮನೋಭಾವ ಬಹಳ ಮುಖ್ಯ ಎಂದು ಹೇಳಿದರು. ಕಾಲೇಜಿನ ಪ್ರಾಚಾರ್ಯ ಪ್ರೊ| ಎಸ್‌.ಎ. ಭೂಸನೂರಮಠ, ಆಡಳಿತಾಧಿ ಕಾರಿ ಪ್ರೊ| ವಿ.ಆರ್‌. ಶಿರೋಳ, ಮಹಿಳಾ ಕಾಲೇಜಿನ ಪ್ರಾಚಾರ್ಯೆ ಎಸ್‌. ಜೆ. ಒಡೆಯರ, ಡಾ|ಎಸ್‌.ಎಂ. ಗಾಂವಕರ, ಎಸ್‌. ಆರ್‌. ದೇಶಪಾಂಡೆ, ಪಿ.ಕೆ. ಚೌಗಲಾ, ವಿ.ಆರ್‌. ಗೌಡರ, ಟಿ.ಪಿ. ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಎಸ್‌.ಜೆ. ಒಡೆಯರ ಸ್ವಾಗತಿಸಿ ಪರಿಚಯಿಸಿದರು. ಶ್ವೇತಾ ಪಾಟೀಲ ನಿರೂಪಿಸಿದರು. ಎಸ್‌.ಆರ್‌. ದೇಶಪಾಂಡೆ ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.