ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜನೆ

ಮುಳುಗಡೆ ಪ್ರದೇಶದಲ್ಲಿರುವ ಶೆಡ್‌ಗಳ ತೆರವು ­ನಗರಸಭೆ-ಬಿಟಿಡಿಎ ಅಧಿಕಾರಿಗಳ ಕಾರ್ಯಕ್ಕೆ ಜನಾಕ್ರೋಶ ­ಕೊರೊನಾ ಲಾಕ್‌ಡೌನ್‌ ವೇಳೆ ಇದೆಂಥಾ ದುರ್ಗತಿ  

Team Udayavani, Jun 13, 2021, 4:57 PM IST

12 bgk-2f

ಬಾಗಲಕೋಟೆ: ನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಜೆಸಿಬಿಗಳು ಗರ್ಜಿಸಿದ್ದು, ನಗರದ ಮುಳಗಡೆ ಪ್ರದೇಶದಲ್ಲಿನ ಶೆಡ್‌ಗಳನ್ನು ತೆರವುಗೊಳಿಸಲಾಯಿತು. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭಗಳಲ್ಲಿ ಜೆಸಿಬಿ ಮೂಲಕ ಬಡವರ ಶೆಡ್‌ ತೆರವುಗೊಳಿಸಿದ ನಗರಸಭೆ ಹಾಗೂ ಬಿಟಿಡಿಎ ಅಧಿಕಾರಿಗಳ ಕಾರ್ಯಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹಳೆಯ ಅಂಜುಮನ್‌ ಸಂಸ್ಥೆಯ ಏರಿಯಾ, ಕಿಲ್ಲಾ ಪ್ರದೇಶಗಳಲ್ಲಿ ಇದ್ದ ಶೆಡ್‌ ಗಳನ್ನು ನಗರಸಭೆ, ಬಿಟಿಡಿಎ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು. ಈ ವೇಳೆ ಶೆಡ್‌ನ‌ಲ್ಲಿದ್ದ ಮಹಿಳೆಯರು, ಅಧಿಕಾರಿಗಳಿಗೆ ಕೈ ಮುಗಿದು, ಶೆಡ್‌ ನಾವು ತೆಗೆದುಕೊಳ್ಳುತ್ತೇವೆ. ಜೆಸಿಬಿ ಮೂಲಕ ಹಾಳು ಮಾಡಬೇಡಿ ಎಂದು ಕೇಳಿಕೊಂಡರು.

ಕೈ ಮುಗಿದು ಕೇಳಿಕೊಂಡರೂ ಕರಗದ ಅಧಿಕಾರಿಗಳು, ಹಲವು ಶೆಡ್‌ಗಳನ್ನು ನೆಲಸಮಗೊಳಿಸಿದರು. ಈ ವೇಳೆ ಕೆಲ ಮಹಿಳೆಯರು ಕಣ್ಣೀರು ಹಾಕಿದರು. ಅಲ್ಲದೇ ಕೊರೊನಾ ಸಂಕಷ್ಟದಲ್ಲಿರುವ ಬಡ ಜನರಿಗೆ ಅಧಿಕಾರಿಗಳು ಈ ರೀತಿ ತೊಂದರೆ ಕೊಡುತ್ತಿರುವುದಕ್ಕೆ ಹಿಡಿಶಾಪ ಹಾಕಿದರು .

ಸದ್ಯ ಅತಿಕ್ರಮಣ ತೆರವುಗೊಳಿಸಿದ ಪ್ರದೇಶ, ಬಿಟಿಡಿಎದಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಲ್ಲಿನ ಕಟ್ಟಡಕ್ಕೆ ಪರಿಹಾರ ನೀಡುವ ಜತೆಗೆ ನವನಗರದಲ್ಲಿ ಬಿಟಿಡಿಎದಿಂದ ನಿವೇಶನ ಕೂಡ ನೀಡಲಾಗಿದೆ. ಆದರೂ, ನವನಗರದಲ್ಲಿ ಮನೆ ಕಟ್ಟಿಕೊಂಡ ಕೆಲವರು, ಅದನ್ನು ಬಾಡಿಗೆ ಕೊಟ್ಟು, ಹಳೆಯ ನಗರದ ಮುಳುಗಡೆ ಪ್ರದೇಶದಲ್ಲಿ ಶೆಡ್‌ನ‌ಲ್ಲಿ ವಾಸಿಸುತ್ತಿದ್ದಾರೆ. ಅವರೆಲ್ಲ ನವನಗರಕ್ಕೆ ಸ್ಥಳಾಂತರಗೊಳ್ಳಲಿ, ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಿನ್ನೀರ ಪ್ರದೇಶ ಆವರಿಸಿಕೊಳ್ಳುತ್ತದೆ. ಹೀಗಾಗಿ ಅವರ ಆರೋಗ್ಯ ಹಿತದೃಷ್ಟಿಯ ಜತೆಗೆ ಅವರು ನವನಗರಕ್ಕೆ ಸ್ಥಳಾಂತರಗೊಳ್ಳಲಿ ಎಂಬ ಉದ್ದೇಶದಿಂದ ತೆರವುಗೊಳಿಸಲಾಗಿದೆ. ಈ ಕುರಿತು ಸಾಕಷ್ಟು ಬಾರಿ ಅವರಿಗೆ ಸೂಚನೆ ನೀಡಿದರೂ, ತೆರವುಗೊಳಿಸಿರಲಿಲ್ಲ. ಹೀಗಾಗಿ ನಾವೇ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಬೇಕಾಯಿತು ಎಂದು ಅಧಿಕಾರಿಗಳು ಸಮಜಾಯಿಸಿ ನೀಡಿದ್ದಾರೆ.

ಟಾಪ್ ನ್ಯೂಸ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.