ಸರಕಾರಿ ಆಸ್ಪತ್ರೆಗಳ ಸುಸ್ಥಿತಿಗೆ ಬದ್ಧ: ಮಾನಕರ

•ಸಮನ್ವಯ ಸಮಿತಿ ಸಭೆ•ಆಸ್ಪತ್ರೆಗೆ ಉತ್ತಮ ಸೌಲಭ್ಯ ಒದಗಿಸಿ•ಅಂಗವಿಕಲರು-ಅಶಕ್ತರಿಗೆ ವೀಲ್ಚೇರ್‌ ಕಲ್ಪಿಸಿ

Team Udayavani, May 17, 2019, 2:35 PM IST

bagalkote-tdy-8…

ಬಾಗಲಕೋಟೆ: ರಾಷ್ಟ್ರೀಯ ಡೆಂಘೀ ದಿನಾಚರಣೆ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಗಂಗೂಬಾಯಿ ಮಾನಕರ ಚಾಲನೆ ನೀಡಿದರು.

ಬಾಗಲಕೋಟೆ: ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಪ್ರತಿಯೊಂದು ಸರಕಾರಿ ಆಸ್ಪತ್ರೆಗಳಿಗೆ ಕೊರತೆ ನೀಗಿಸಿ ಸುಸ್ಥಿತಿಗೆ ತರಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನಡೆದ ಆರೋಗ್ಯ ಇಲಾಖೆಯ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರಿ ಆಸ್ಪತ್ರೆಗಳು ಬರುವ ರೋಗಿಗಳಲ್ಲಿ ಅರ್ಧ ರೋಗ ವಾಸಿಯಾಗುವಂತಹ ವಾತಾವರಣ ನಿರ್ಮಾಣವಾಗಬೇಕು. ಆಸ್ಪತ್ರೆಗೆ ಬೇಕಾಗುವ ಚಿಕ್ಕ ಯಂತ್ರಗಳಿಂದ ಡಯಾಲಿಸಿಸ್‌ ಹಾಗೂ ಎಮ್‌ಆರ್‌ಐ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ತಯಾರಿದ್ದು ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಚ್ಚಾಶಕ್ತಿ ಹೊಂದಬೇಕು ಎಂದರು.

ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದೊರೆಯುವ ಸೌಲಭ್ಯಗಳು ದೊರೆತರೆ ರೋಗಿಗಳು ಅನ್ಯ ಆಸ್ಪತ್ರೆಗಳ ಮೊರೆಹೋಗುವುದಿಲ್ಲ. ಆಸ್ಪತ್ರೆ ಆಕರ್ಷಣೆಗಾಗಿ ಆವರಣ ಸ್ವಚ್ಚತೆ ಶಿಸ್ತ್ತುಬದ್ದವಾದ ವಾರ್ಡ್‌ಗಳು ಉತ್ತಮ ಹಾಸಿಗೆ ಹೊಂದಿರಬೇಕು. ಚಿಕ್ಕ ಮಕ್ಕಳ ವಿಭಾಗದಲ್ಲಿ ಮಕ್ಕಳಿಗೆ ಆಕರ್ಷಕವಾಗುವಂತಹ ಮತ್ತು ಗರ್ಭಿಣಿಯರಿಗೆ ಪೂರಕವಾದಂತ, ಅಂಗವಿಕಲರಿಗೆ, ಅಶಕ್ತರಿಗೆ ಬಾಗಿಲಲ್ಲಿಯೇ ವೀಲ್ಚೇರ್‌ ವ್ಯವಸ್ಥೆ ಮಾಡುವುದರ ಜೊತೆಗೆ ರೋಗಿಯು ಔಷಧ ಹಾಗೂ ಮಾತ್ರೆಗಳಿಗಾಗಿ ಬೇರೆ ಕಡೆ ಹೋಗದಂತಾಗಬಾರದು ಎಂದರು.

ಆಸ್ಪತ್ರೆಯಲ್ಲಿ ತೀರಿಹೋದ ಔಷಧಿಗಳ ಪಟ್ಟಿಯನ್ನು ಕೂಡಲೇ ತಯಾರಿಸಿ ರೋಗಿಗಳಿಗೆ ದೊರಕುವಂತಾಗಬೇಕು. ಇದಕ್ಕಾಗಿ ವೈದ್ಯಾಧಿಕಾರಿಗಳು 5000 ರೂ.ಗಳ ವರೆಗೆ ಖರ್ಚು ಮಾಡುವ ಅಧಿಕಾರ ಹೊಂದಿರುತ್ತಾರೆ. ಅಂತಹ ಪ್ರಸಂಗ ಬಂದಲ್ಲಿ ವೈದ್ಯರು ರೋಗಿಗಳಿಗೆ ಔಷಧಿ ತರಿಸಿಕೊಟ್ಟು ಅದನ್ನು ರೋಗಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸುವ್ಯಸ್ಥಿತವಾದ ಸೌಲಭ್ಯ ಸರಕಾರಿ ಆಸ್ಪತ್ರೆಗಳಲ್ಲಿ ದೊರೆತಾಗ ರೋಗಿಗಳ ಸಂಖ್ಯೆ ಹೆಚ್ಚಾಗುತ್ತದೆ ಎಂಬ ಕೀಳರಿಮೆ ಬಿಡಬೇಕು ಎಂದರು. ರೋಗಿಗಳ ಸಂಖ್ಯೆ ಹೆಚ್ಚಾದಂತೆಲ್ಲ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು. ಒಂದು ವೇಳೆ ರೋಗಿಗೆ ಚಿಕಿತ್ಸೆ ನೀಡುವ ತಜ್ಞ ವೈದ್ಯರ ಕೊರತೆ ಕಂಡಲ್ಲಿ ಸ್ಥಳಿಯ ಖಾಸಗಿ ಆಸ್ಪತ್ರೆ ವೈದ್ಯರು ಕರೆದು ಚಿಕಿತ್ಸೆ ಕೊಡಿಸಬೇಕು. ಇದಕ್ಕಾಗಿ ಆ ವೈದ್ಯರಿಗೂ ಕೂಡ ಸಂಭಾವನೆ ನೀಡಲಾಗುವುದು. ಈ ಮೊದಲಿನ ಆಸ್ಪತ್ರೆಗಳು ಚಿಕ್ಕದಾಗಿದ್ದಲ್ಲಿ ಇನ್ನು ಹೆಚ್ಚಿನ ಕೊಠಡಿಗಳ ಹಾಗೂ ಯಂತ್ರೋಪಕರಣಗಳ ಕೊರತೆ ಇದ್ದಲ್ಲಿ ಜಿಲ್ಲಾ ಪಂಚಾಯತ ಗಣನೆ ತೆಗೆದುಕೊಂಡು ಪೂರೈಸಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಉತ್ತಮ ವಾತಾವರಣ ಒದಗಿಸಿಕೊಟ್ಟ ಹುನಗುಂದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕುಸುಮಾ ಮಾಗಿ ಕಾರ್ಯ ಶ್ಲಾಘಿಸಿದರು. ಬಾದಾಮಿ ಸರಕಾರಿ ಆಸ್ಪತ್ರೆಯ ಡಾ| ರೇವಣಸಿದ್ದಪ್ಪ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎ.ಎನ್‌.ದೇಸಾಯಿ ಮಾತನಾಡಿ, ಜಿಲ್ಲೆಯ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಗರ್ಭಿಣಿಯರಿಗೆ ಹಾಗೂ ಚಿಕ್ಕಮಕ್ಕಳಿಗೆ ರಕ್ತದ ಕೊರತೆ ನಿಗಿಸುವಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಲ್ಲೆಯ ಪ್ರತಿಯೊಂದು ಗ್ರಾಪಂನಲ್ಲಿ ರಕ್ತದಾನ ಶಿಬಿರ ನಡೆಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅನುಮತಿ ನೀಡಿರು‌ವುಲ್ಲದೆ ಸ್ವತ ಅವರು ಹಾಗೂ ಅವರ ಪತಿಯವರು ರಕ್ತದಾನ ಮಾಡಿ ಮಾದರಿ ಆಗಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಡಿ.ಬಿ. ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ಅಧಿಕಾರಿ ಜಯಶ್ರೀ ಯಮ್ಮಿ, ಡಾ| ವಿಜಯ ಕಂಠಿ ಉಪಸ್ಥಿತರಿದ್ದರು. ಈ ಮುನ್ನ ರಾಷ್ಟ್ರೀಯ ಡೆಂಗಿ ದಿನಾಚರಣೆ ನಿಮಿತ್ತ ಜಿಲ್ಲಾ ಆಸ್ಪತ್ರೆಯಿಂದ ವಿದ್ಯಾಗಿರಿ ಸರ್ಕಲ್ವರೆಗೆ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಜಿಪಂ ಸಿಇಒ ಚಾಲನೆ ನೀಡಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.