ಮಂಗಳಮುಖೀಯರ ಉನ್ನತಿಗೆ ಸಮಿತಿ

•ಜಿಲ್ಲೆಯಲ್ಲಿ 884 ಜನ ಮಂಗಳಮುಖೀಯರಿಗೆ ಗುರುತಿನ ಚೀಟಿ•ಸಮಾಜದಲ್ಲಿ ಉತ್ತಮ ಬದುಕಿಗೆ ಕ್ರಮ

Team Udayavani, Jul 24, 2019, 4:14 PM IST

bk-tdy-4

ಬಾಗಲಕೋಟೆ: ಜಿಲ್ಲೆಯಲ್ಲಿರುವ ಮಂಗಳ ಮುಖೀಯರ ಶ್ರೇಯೋಭಿವೃದ್ಧಿಗಾಗಿ, ಸಮಾಜ ದಲ್ಲಿ ಗೌರವಯುತವಾದ ಅಸ್ತಿತ್ವ ಹಾಗೂ ಜನಸಮುದಾಯದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ದಮನಿತ ಮಹಿಳೆಯರ ಮತ್ತು ಟ್ರಾನ್ಸ್‌ಜೆಂಡರ್ಗಳ ಜೀವನ ಮಟ್ಟ ಸುಧಾರಣೆ, ಸಬಲೀಕರಣ ಮತ್ತು ಪುನರ್ವಸತಿ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದ ಸಮಿತಿ ರಚಿಸುವ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.

ಟ್ರಾನ್ಸ್‌ಜೆಂಡರ್ಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ 884 ಟ್ರಾನ್ಸ್‌ಜೆಂಡರ್ಗಳಿದ್ದು, ಅವರಿಗೆ ಮೊದಲು ಗುರುತಿನ ಚೀಟಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕಾ ಹಂತದಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಅರ್ಹ ಟ್ರಾನ್ಸ್‌ಜೆಂಡರ್ಗಳಿಂದ ಅರ್ಜಿ ಸ್ವೀಕಾರ, ದಾಖಲಾತಿ ಪರಿಶೀಲನೆಗಳೊಂದಿಗೆ ಮಿಲನ ಸಂಸ್ಥೆಯೊಂದಿಗೆ ಸಭೆ ನಡೆಸಿ ಜಿಲ್ಲಾ ಮಟ್ಟದಲ್ಲಿ ಅನುಮೋದನೆ ಪಡೆದು ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ತೃತೀಯ ಲಿಂಗಗಳನ್ನು ಗೌರವದಿಂದ ಕಾಣುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಟ್ರಾನ್ಸ್‌ಜೆಂಡರ್ಗಳ ಬಗ್ಗೆ ಶಾಲೆಗಳ ಮತ್ತು ಮಕ್ಕಳ ಹಕ್ಕುಗಳ ಸಂಸ್ಥೆಗಳ ಮತ್ತು ನೆಟ್ವರ್ಕ್‌ಗಳ ಸಹಭಾಗಿತ್ವದಲ್ಲಿ ಶಿಕ್ಷಕರಿಗೆ ಹಾಗೂ ಕುಟುಂಬದವರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಟ್ರಾನ್ಸ್‌ ಜೆಂಡರ್ಗಳ ಮಕ್ಕಳಿಗೆ ಸರ್ಕಾರದ ವಿವಿಧ ವಸತಿ ನಿಲಯಗಳಡಿ ಉಚಿತ ಪ್ರವೇಶ ಒದಗಿಸಬೇಕು. ಪೋಷಕರು ಮತ್ತು ಟ್ರಾನ್ಸ್‌ಜೆಂಡರ್ ಮಕ್ಕಳನ್ನು ಪರಿತ್ಯಜಿಸದೆ ಅವರಿಗೆ ಕುಟುಂಬದಲ್ಲಿ ಸಮಾನ ಅವಕಾಶ ನೀಡುವಂತೆ ಅರಿವು ಮೂಡಿಸುವ ಕೆಲಸವಾಗಬೇಕು. ಟ್ರಾನ್ಸ್‌ಜೆಂಡರ್ಗಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೊಲೀಸ್‌ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ವಿವಿಧ ಇಲಾಖಾ ಸೌಲಭ್ಯ ಟ್ರಾನ್ಸ್‌ಜೆಂಡರ್ಗಳಿಗೆ ಒದಗಿಸಲು ನಿಟ್ಟಿನಲ್ಲಿ ಸೌಲಭ್ಯ ನೀಡಲು ಬೆಂಬಲ ಘಟಕದಿಂದ ಪ್ರತ್ಯೇಕ ಕ್ರಿಯಾಯೋಜನೆ ಸಿದ್ಧಪಡಿಸಿ ರಾಜ್ಯದ ಮಟ್ಟದ ಕೋಶಕ್ಕೆ ತಕ್ಷಣವೇ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಟ್ರಾನ್ಸ್‌ಜೆಂಡರ್ಗಳ ಮಕ್ಕಳಿಗೆ ಸುರಕ್ಷಿತ ನಿವಾಸ, ಅಲ್ಪಾವಧಿ ವಸತಿ ಗೃಹಗಳ, ಅನಾಥಾಶ್ರಮಮಗಳ, ದತ್ತು ಮತ್ತು ಪೋಷಣಾ ಸೇವೆಗಳ ಸೌಕರ್ಯ ಒದಗಿಸಬೇಕು. ವಯಸ್ಸಾದವರಿಗೆ ವೃದ್ಧ್ದಾಶ್ರಮಗಳ ವ್ಯವಸ್ಥೆ ಮತ್ತು ಪಿಂಚಣಿ ಒದಗಿಸಿಕೊಡುವ ಬಗ್ಗೆ ಕ್ರಮವಹಿಸಬೇಕು. ಟ್ರಾನ್ಸ್‌ಜೆಂಡರ್ಗಳ ನೀತಿಯ ಬಗ್ಗೆ ಮೂಲ ಮಾಹಿತಿ ರೇಡಿಯೋ, ಟಿವಿ ಮೂಲಕ ಬಿತ್ತರಿಸಿ ಅವರನ್ನು ಮುಖ್ಯವಾಹಿನಿಯಲ್ಲಿ ವಿಲೀನಗೊಳಿಸುವ ಬಗ್ಗೆ ಧನಾತ್ಮಕ ಚಿಂತನೆ ಮೂಡಿಸಬೇಕು. ವಿದ್ಯಾರ್ಥಿ ವೇತನ, ಆರೋಗ್ಯ ಸೇವೆ, ಸಾಮಾಜಿಕ ಭದ್ರತೆ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಬೇರೆ ಇಲಾಖೆಗಳಡಿ ಬಾಹ್ಯ ಗುತ್ತಿಗೆಯಲ್ಲು ಗ್ರುಫ್‌ ಡಿ ಹುದ್ದೆಗಳಲ್ಲಿ ಆಯ್ಕೆಗೊಳಿಸಲು ಕ್ರಮ ಕೈಗೊಳ್ಳಲು ತಿಳಿಸಿದರು. ಬಾಲಕರ ಬಾಲಭವನದಲ್ಲಿ ಕಚೇರಿ ಸ್ಥಾಪಿಸಲು ಸೂಚಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪೋವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.