ಕೆರೂರ ಪಟ್ಟಣ ಪಂಚಾಯಿತಿ ಗದ್ದುಗೆಗೆ ಪೈಪೋಟಿ-ಹುದ್ದೆ ಮೇಲೆ ಬಿಜೆಪಿ ಕಣ್ಣು


Team Udayavani, Aug 7, 2024, 1:10 PM IST

ಕೆರೂರ ಪಟ್ಟಣ ಪಂಚಾಯಿತಿ ಗದ್ದುಗೆಗೆ ಪೈಪೋಟಿ-ಹುದ್ದೆ ಮೇಲೆ ಬಿಜೆಪಿ ಕಣ್ಣು

ಉದಯವಾಣಿ ಸಮಾಚಾರ
ಕೆರೂರ: ಸುಮಾರು ಒಂದೂವರೆ ವರ್ಷದಿಂದ ಖಾಲಿ ಉಳಿದಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದರೊಂದಿಗೆ ಗದ್ದುಗೇರಲು ಪೈಪೋಟಿ ಶುರುವಾಗಿದೆ.

ಪಪಂಗೆ ಈ ಹಿಂದಿನ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ
ಮೀಸಲಾಗಿತ್ತು. ಕಾಂಗ್ರೆಸ್‌ನ ಮಂಜುಳಾ ತಿಮ್ಮಾಪುರ ಅಧ್ಯಕ್ಷರಾಗಿ, ಪಕ್ಷೇತರಾಗಿ ಜಯಗಳಿಸಿ ಬಿಜೆಪಿ ಬೆಂಬಲಿಸಿದ
ಸದಸ್ಯರಾದ ಕುಮಾರ ಐಹೊಳ್ಳಿ, ಸಿದ್ದಣ್ಣ ಕೊಣ್ಣೂರ, ಪ್ರಮೋದ ಪೂಜಾರ ಸೇರಿ ಮೂರು ಜನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಈ ಬಾರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಹೆಚ್ಚಿನ ಸದಸ್ಯರ ಬಲ ಹೊಂದಿದ ಬಿಜೆಪಿ ಅಧಿ ಕಾರಕ್ಕೆ ಏರುವುದು ಖಚಿತವಾಗಿದ್ದರೂ ತೆರೆಮರೆಯಲ್ಲಿ ಕಾಂಗ್ರೆಸ್‌ ಕೂಡಾಕಸರತ್ತು ನಡೆಸಿದೆ.

16 ತಿಂಗಳ ಬಳಿಕ ಮೀಸಲಾತಿ ಪ್ರಕಟ: 2018ರ ಆಗಸ್ಟ್‌ನಲ್ಲಿ ಪಪಂ ಚುನಾವಣೆ ನಡೆದಿತ್ತಾದರೂ ಆಡಳಿತ ಮಂಡಳಿ ರಚನೆಯಾಗಿದ್ದು ಅಕ್ಟೋಬರ್‌ 2020ರಲ್ಲಿ. ಬರೋಬ್ಬರಿ 14ತಿಂಗಳ ಕಾಲ ಅಧ್ಯಕ್ಷರಿ ಲ್ಲದೇ ಪಪಂ ಅಧಿಕಾರಿಗಳು
ಕಾರ್ಯನಿರ್ವಹಿಸಿದರು. 2ನೇ ಅವಧಿಯಲ್ಲೂ 16 ತಿಂಗಳು ತಡವಾಗಿ ಮೀಸಲಾತಿ ಪ್ರಕಟಗೊಂಡಿದೆ.

ಈ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಹಿನ್ನಡೆಯಾಗಿದೆ. 20ರಲ್ಲಿ 12ಬಿಜೆಪಿ, 8 ಕಾಂಗ್ರೆಸ್‌ ಸದಸ್ಯರು : ಪಪಂ 20 ಸದಸ್ಯರ ಸಂಖ್ಯಾ ಬಲ ಹೊಂದಿದೆ . ಇಬ್ಬರು ಪಕ್ಷೇತರು ಬೆಂಬಲದಿಂದ ಕಾಂಗ್ರೆಸ್‌ಗೆ 8 ಸದಸ್ಯರ ಬಲ ಇದೆ. ಮೂವರು ಪಕ್ಷೇತರ ಸದಸ್ಯರ ಬೆಂಬಲ ಪಕ್ಷದ 9 ಸದಸ್ಯರು ಸೇರಿ ಬಿಜೆಪಿ 12 ಸದಸ್ಯರ ಸಂಖ್ಯಾ ಬಲ ಇದ್ದು , ಅಧ್ಯಕ್ಷ ಉಪಾಧ್ಯಕ್ಷ ಎರಡು ಸ್ಥಾನಗಳ ಮೇಲೆ ಬಿಜೆಪಿ ಕಣ್ಣು ಇಟ್ಟಿದೆ.

ಬಿಜೆಪಿಯಲ್ಲಿ 5 ಜನರ ಪೈಪೋಟಿ: ಬಿಜೆಪಿಯಿಂದ ನಿರ್ಮಲಾ ಮದಿ, ಪರಶುರಾಮ ಮಲ್ಲಾಡದ ಅವರ ಹೆಸರುಗಳು ಅಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿವೆ. ಕುಮಾರ ಐಹೊಳ್ಳಿ, ಶೋಭಾ ಛತ್ರಬಾಣ, ಅಕ್ಕಮಾದೇವಿ ಶೆಟ್ಟರ ಕೂಡ ಆಕಾಂಕ್ಷಿಗಳಾಗಿದ್ದಾರೆ.ಅವರ ಹೊರತಾಗಿಯೂ ಇನ್ನೂ ಇಬ್ಬರು ಸದಸ್ಯರ ಹೆಸರು ಕೇಳಿ ಬಂದಿದೆ. ಬಿಜೆಪಿ ಸುಲಭವಾಗಿ ಆಡಳಿತ ಚುಕ್ಕಾಣಿ ಹಿಡಿಯುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್‌ನಲ್ಲಿ ಸಂಖ್ಯಾಬಲವಿಲ್ಲದಿದ್ದರೂ ಸದಸ್ಯ ಮಲ್ಲಪ್ಪ ಹಡಪದ ಹಾಗೂ ಯಾಸಿನ್‌ ಖಾಜಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಹಿಡಿತದಲಿಲ್ಲ ಸದಸ್ಯರು: ಚುನಾವಣೆಯಲ್ಲಿ ಪಕ್ಷೇತರಾಗಿ ಜಯಗಳಿಸಿದ ಕುಮಾರ ಐಹೊಳ್ಳಿ, ಸಿದ್ದಣ್ಣ ಕೊಣ್ಣೂರ, ಪ್ರಮೋದ ಪೂಜಾರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ, ಬಿಜೆಪಿಯಿಂದ ಜಯ ಗಳಿಸಿದ ಇಬ್ಬರು ಸದಸ್ಯರು ಕಳೆದ ಅವಧಿಯಲ್ಲಿ ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದು, ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಗಣಿಸಿದೆ.

ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು ಪಕ್ಷದ ನಾಯಕರ ಆಶೀರ್ವಾದ ಮತ್ತು ಸದಸ್ಯರು ಬೆಂಬಲಿಸುವ ವಿಶ್ವಾಸ ನಮಗಿದೆ. ಪತಿ ಸದಾನಂದ ಮದಿ ಪಪಂ ಅಧ್ಯಕ್ಷರಾಗಿ ಅಧಿಕಾರ ನಡೆಸಿದ ಅನುಭವವಿದೆ.
ನಿರ್ಮಲಾ ಮದಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ

ಕಾಂಗ್ರೆಸ್‌ ಪಕ್ಷದಲ್ಲಿ ಅಧಿಕಾರ ಹಿಡಿಯಲು ಬೇಕಾದ ಸಂಖ್ಯಾ ಬಲ ಇಲ್ಲ. ಶಾಸಕರು ಪಕ್ಷದ ನಾಯಕರ ಹಾಗೂ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಎಲ್ಲ ಸದಸ್ಯರು ಬದ್ಧರಾಗಿದ್ದೇವೆ.
ಮಲ್ಲಪ್ಪ ಹಡಪದ ಕಾಂಗ್ರೆಸ್‌ ಸದಸ್ಯ

■ ಶ್ರೀಧರ ಚಂದರಗಿ

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.