ಬಯಲಾಟ ಕಲಾವಿದರಿಗೆ ಕೋವಿಡ್ 19 ಸಂಕಷ್ಟ


Team Udayavani, Apr 17, 2020, 3:46 PM IST

ಬಯಲಾಟ ಕಲಾವಿದರಿಗೆ ಕೋವಿಡ್ 19 ಸಂಕಷ್ಟ

ಸಾಂದರ್ಭಿಕ ಚಿತ್ರ

ಲೋಕಾಪುರ: ಗ್ರಾಮ ಕಲಾವಿದರ ತವರೂರು. ಕಲೆ ನಂಬಿ ಬದುಕುವ ಇಲ್ಲಿಯ ಬಡಕಲಾವಿದರು ಲಾಕ್‌ಡೌನ್‌ ನಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.  ದೀಪಾವಳಿಯಿಂದ ಕಾರಹುಣ್ಣಿಮೆವರೆಗೆ ಜಾತ್ರೆ, ಉತ್ಸವ, ಓಕಳಿ, ಕಂಬಿ ಐದೇಶಿ ಹಬ್ಬದ ದಿನಗಳಲ್ಲಿ ನಾಟಕ, ಬಯಲಾಟ, ಭಜನೆ , ಚೌಡಕಿ ಪದಗಳ ಪ್ರದರ್ಶನದಿಂದ ಕಲಾವಿದರು, ಜೀವನ ಸಾಗಿಸುತ್ತಿದ್ದರು. ಈಗ ಪ್ರದರ್ಶನಗಳು ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿರುವುದರಿಂದ ಬದುಕು ಸಾಗಿಸುವುದು ಕಷ್ಟಕರವಾಗಿದೆ.

ಲೋಕಾಪುರ ಬಯಲಾಟದ ಕೇಂದ್ರವನ್ನಾಗಿ ಮಾಡಿಕೊಂಡು ಈ ಭಾಗದ ಶ್ರೀಕೃಷ್ಣ ಪಾರಿಜಾತ, ಸಂಗ್ಯಾಬಾಳ್ಯಾ ರೇಣುಕಾ, ಹೇಮರಡ್ಡಿ ಮಲ್ಲಮ್ಮ ಸೇರಿದಂತೆ ಮುಂತಾದ ಬಯಲಾಟಗಳು ಈ ಭಾಗದಲ್ಲಿ ಹಾಸುಹೊಕ್ಕಾಗಿವೆ. ಎಲ್ಲ ಬಯಲಾಟಗಳ ಪ್ರದರ್ಶನಗಳು ಸ್ಥಗಿತಗೊಂಡಿವೆ. ಲೋಕಾಪುರ, ದಾದನಟ್ಟಿ, ಕನಸಗೇರಿ, ಜಾಲಿಕಟ್ಟಿ, ಚಿತ್ರಭಾನಕೋಟಿ, ಯಂಡಿಗೇರಿ ಗ್ರಾಮಗಳಲ್ಲಿ ವಿವಿಧ ಬಯಲಾಟ ಕಂಪನಿಗಳು ಇದ್ದು ಇಲ್ಲದಂತಾಗಿವೆ. ಬಯಲಾಟ ಕಲೆಯನ್ನು ನಂಬಿ ಬದುಕುತ್ತಿರುವ ಬಡ ಕಲಾವಿದರಿಗೆ ಸರ್ಕಾರ ನೆರವು ನೀಡಬೇಕಿದೆ. ಕಲಾವಿದರಿಗೆ ಸಹಾಯ -ಸಹಕಾರ ನೀಡುವುದರ ಜತೆಗೆ ಅವರ ಜೀವನಕ್ಕೆ ನೆರವು ಕಲ್ಪಿಸುವ ಅಗತ್ಯವಿದೆ.

ನಾಡೋಜ ಪ್ರಶಸ್ತಿ ಪುರಸ್ಕೃತೆ ಯಲ್ಲವ್ವ ರೊಡ್ಡಪ್ಪನವರ, ಜಾನಪದ ಪ್ರಶಸ್ತಿ ಪುರಸ್ಕೃತೆ ಕಾಶಿಬಾಯಿ ದಾದನಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳಬಸಯ್ಯ ಸಂಬಾಳದ, ಕಮಲಸಾಬ ಡಂಗಿ, ನಾರಾಯಣ ಪತ್ತಾರ, ಸಿದ್ದಪ್ಪ ಕುರಿ, ಮಲ್ಲಪ್ಪ ಚೌಧರಿ, ಶಾಂತವ್ವ ಮಾದರ, ಗಂಗವ್ವ ಮುಧೋಳ, ದುರಗವ್ವ ಮುಧೋಳ, ಸುನಂದಾ ಮ್ಯಾಗೇರಿ, ಪಾರ್ವತಿ ರೊಡ್ಡಪ್ಪನವರ, ಸತ್ಯವ್ವ ಮಾದರ, ಚಿದಾನಂದ ಹಲಗಲಿ, ಮಲ್ಲಿಕಾರ್ಜುನ ಕುಂದರಗಿ, ಮಲ್ಲಿಕಾರ್ಜುನ ಮುದಕವಿ, ಭೀಮಸಿ ಕಂಬಾರ ಸೇರಿದಂತೆ ಹಲವಾರು ಕಲಾವಿದರು ಲಾಕ್‌ಡೌನ್‌ನಿಂದ ಬದುಕು ಕಟ್ಟಿಕೊಳ್ಳಲು ಪರದಾಡುವಂತಾಗಿದೆ.

ಕಲಾವಿದರು ಸಾಂಸ್ಕೃತಿಕ ಲೋಕದ ವಾರಸುದಾರರು. ಅವರು ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಅವರನ್ನು ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ಸಂಕಷ್ಟಕ್ಕೆ ಒಳಗಾಗಿರುವ ಕಲಾವಿದರಿಗೆ ನೆರವು ನೀಡಬೇಕಾಗಿದೆ.  ಶಿವಾನಂದ ಶೆಲ್ಲಿಕೇರಿ, ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ

ಕೋವಿಡ್ 19 ದಿಂದ ಕಲಾವಿದರು. ಸಂಗೀತಗಾರರು ಜೀವನ ನಡೆಸುವುದು ಕಷ್ಟಕರವಾಗಿದೆ. ಮುಂದುವರಿದರೆ ಕಲಾವಿದರು ಬೀದಿ ಪಾಲಾಗುತ್ತಾರೆ. ಆದ್ದರಿಂದ ಅವರಿಗೆ ನೆರವಿನ ಉರುಗೋಲು ಅವಶ್ಯಕವಾಗಿದೆ.  ಕೃಷ್ಣಾ ಭಜಂತ್ರಿ, ಲೋಕಾಪುರ ಕಲಾವಿದ

 

-ಸಲೀಮ ಐ. ಕೊಪ್ಪದ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.