
ಹಳೆನಂದಗಾಂವ ಜಲಾವೃತ- ಸಾವಿರಾರು ಎಕರೆ ಬೆಳೆ ಹಾನಿ
Team Udayavani, Aug 19, 2020, 3:56 PM IST

ಮಹಾಲಿಂಗಪುರ: ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಕಾರಣ ನದಿ ಪಾತ್ರದ ಗ್ರಾಮಗಳು ಮತ್ತೇ ಪ್ರವಾಹಕ್ಕೆ ಸಿಲುಕಿವೆ.
ಕಾಳಜಿ ಕೇಂದ್ರ ಪ್ರಾರಂಭ: ಹಳೆನಂದಗಾಂವ ಗ್ರಾಮದ ಜನರಿಗೆ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು. ಸೋಮವಾರ ರಾತ್ರಿಯಿಂದಲೇ ಅವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಸುಮಾರು 20ಕ್ಕೂ ಅಧಿಕ ಜನರು ವಾಸವಿದ್ದಾರೆ. ನಂದಗಾಂವ ಗ್ರಾಮದ ಜನತೆಯು ಪ್ರತಿವರ್ಷ ಪ್ರವಾಹ ತೊಂದರೆ ಎದುರಾಗುತ್ತಿರುವುದರಿಂದ ನಮಗೆ ವಸತಿ ಶಾಶ್ವತ ಪರಿಹಾರವನ್ನು ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಾವಿರಾರು ಎಕರೆ ಬೆಳೆ ಹಾನಿ: ಪ್ರವಾಹದಿಂದಾಗಿ ಅಕ್ಕಿಮರಡಿ, ಮಿರ್ಜಿ, ನಂದಗಾಂವ, ಅವರಾದಿ, ಢವಳೇಶ್ವರ ಗ್ರಾಮಗಳಲ್ಲಿ ಸಾವಿರಾರು ಎಕರೆ ಬೆಳೆ ಜಲಾವೃತವಾಗಿ ಬೆಳೆಹಾನಿಯಾಗಿದೆ. ಘಟಪ್ರಭಾ ನದಿಗೆ ನಿರಂತರವಾಗಿ ನೀರು ಏರಿಕೆಯಾಗುತ್ತಿರುವ ಕಾರಣ, ಮಂಗಳವಾರ ಹಳೆನಂದಗಾವ ಜಲಾವೃತವಾಗಿ ನಡುಗಡ್ಡೆಯಾಗಿದೆ.
ಗ್ರಾಮದಲ್ಲಿ ಆಸರೆ ಮನೆ ಹಂಚಿಕೆ ಮಾಡಿ ಉಳಿದವರಿಗೆ ಸರ್ಕಾರ ಜಾಗ ಖರೀದಿಸಿ ನೀಡಬೇಕು. ಪ್ರತಿ ವರ್ಷ ಪ್ರವಾಹದಿಂದ ಆಗುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು. ಬೆಳೆ ಹಾನಿ ಸಮೀಕ್ಷೆ ಮಾಡಿ ಬೆಳೆ ಪರಿಹಾರ ನೀಡಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಾಮಚಂದ್ರ ಜಾಧವ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.