
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
Team Udayavani, Nov 15, 2024, 10:20 AM IST

ಉದಯವಾಣಿ ಸಮಾಚಾರ
ಮುಧೋಳ: ತಾಲೂಕಿನಲ್ಲಿ ಹರಡಿಕೊಂಡಿರುವ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿ ಹಲಗಲಿ ಗ್ರಾಮಸ್ಥರ ಜಮೀನುಗಳಿದ್ದು, ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಮಾಡಲು ಅರಣ್ಯಾಧಿ ಕಾರಿಗಳು ಸ್ವಾತಂತ್ರ್ಯ ನೀಡುತ್ತಿಲ್ಲ. ಇದರಿಂದ ರೈತರು ಬೇಸತ್ತಿದ್ದು ನಮಗೆ ಪರ್ಯಾಯ ವ್ಯವಸ್ಥೆಯಾದರೂ ಮಾಡಿಕೊಡಿ ಎಂದು ಇಲಾಖೆ ಬಾಗಿಲು ಬಡಿದರೂ ಪ್ರಯೋಜನವಾಗುತ್ತಿಲ್ಲ. ಸ್ವಂತ ಜಮೀನಿನಲ್ಲಿ ಕೃಷಿ ಮಾಡಲು ಸಾಧ್ಯವಾಗದೆ ಬೇರೆಯವರ ಜಮೀನಿಗೆ ದುಡಿಯಲು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಅರಣ್ಯ ಮಧ್ಯದಲ್ಲಿರುವ ಜಮೀನು:
ಮುಧೋಳ ತಾಲೂಕಿನ ಕಿಶೋರಿ, ಮೆಳ್ಳಿಗೇರಿ, ಹಲಗಲಿ ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿ ನೂರಾರು ಎಕರೆ ರೈತರ ಜಮೀನುಗಳಿವೆ. ಆದರೆ ಅರಣ್ಯ ಸೂಕ್ಷ್ಮ ಪ್ರದೇಶ ಆಗಿದ್ದರಿಂದ ಸಾರ್ವಜನಿಕರಿಗೆ ಸ್ವೇಚ್ಛಾಚಾರ ಪ್ರವೇಶ ನಿಷೇಧಿ ಸಲಾಗಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು, ಉತ್ತಲು ಬಿತ್ತಲು ಮಾಡಲು ಹಲವಾರು ತೊಂದರೆ ಉಂಟಾಗುತ್ತಿವೆ. ಗ್ರಾಮದಿಂದ ಜಮೀನು ಎರಡೂ¾ರು ಕಿ.ಮೀ ದೂರವಿದ್ದರೆ ಅಲ್ಲಿಗೆ ವಾಹನ ತೆಗೆದುಕೊಂಡೇ ಹೋಗಬೇಕು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ವಾಹನ ಸಂಚಾರಕ್ಕೆ ಹತ್ತಾರು ಷರತ್ತು ವಿಧಿಸುತ್ತಾರೆ. ಇದರಿಂದ ಕೃಷಿ ಕಾರ್ಯಕ್ಕೆ ಹೆಚ್ಚಿನ ತೊಂದರೆ ಉುಂಟಾಗುತ್ತದೆ ಎನ್ನುತ್ತಾರೆ ರೈತರು.
ಕಾಡುಪ್ರಾಣಿಗಳ ಹಾವಳಿ:ಅರಣ್ಯ ಇಲಾಖೆ ಎಲ್ಲ ಷರತ್ತಿಗೂ ಒಗ್ಗಿಕೊಂಡು ಹಲವು ರೈತರು ಬಿತ್ತನೆ ಮಾಡಿದರೂ ಬೆಳೆ ರೈತರ ಕೈ ಸೇರುವ ನಿಶ್ಚಿತತೆ ಇಲ್ಲದಂತಾಗಿದೆ. ನಿತ್ಯ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಹಾನಿಯಾಗುತ್ತಿದ್ದು ರೈತರು ಪ್ರತಿ ವರ್ಷ ನಷ್ಟ
ಅನುಭವಿಸುವಂತಾಗಿದೆ.
ಮನವಿಗೆ ಸ್ಪಂದಿಸದ ಇಲಾಖೆ:ಅರಣ್ಯ ಮಧ್ಯಭಾಗದಲ್ಲಿರುವ ಜಮೀನಿನಲ್ಲಿ ಕೃಷಿ ಕಾರ್ಯ ಕಷ್ಟಸಾಧ್ಯ ಎಂಬುದನ್ನರಿತ ರೈತರು ತಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ, ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅರ್ಜಿ ಪಡೆದ ರೈತರು ಇದುವರೆಗೆ ನಮ್ಮ ಕಷ್ಟ ಆಲಿಸಲು ಬಂದಿಲ್ಲ. ಅರಣ್ಯ ಇಲಾಖೆಯವರು ನಮ್ಮ ಜಮೀನು ಪಡೆದು ನಮಗೆ ಬೇರೆಡೆ ಜಮೀನು ನೀಡಿದರೆ ಕೃಷಿ ಕಾರ್ಯಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎನ್ನುತ್ತಾರೆ ರೈತರು.
ಬೋರ್ವೆಲ್ ಕೊರೆಯಿಸಲು ಅಡಚಣೆ: ಹಲವು ರೈತರು ಅರಣ್ಯದ ಮಧ್ಯದಲ್ಲಿರುವ ತಮ್ಮ ಜಮೀನುಗಳಲ್ಲಿ ಬೋರ್ವೆಲ್ ಕೊರೆಸಿ ನೀರಾವರಿ ಕೃಷಿ ಕೈಗೊಳ್ಳುವ ಉದ್ದೇಶದಿಂದ ಹಲವು ಬಾರಿ ಮೌಖಿಕವಾಗಿ ಅಧಿಕಾರಿಗಳನ್ನು ಸಂಪರ್ಕಿಸಿದರೆ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಜಮೀನಿನಿಂದ ಯಾವುದೇ ಪ್ರಯೋಜನವಾಗದೆ ಅರಣ್ಯ ರೋದನೆಯ ನೋವು ಅನುಭವಿಸುತ್ತಿದ್ದಾರೆ.
ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದ ಮಧ್ಯದಲ್ಲಿ ನಮ್ಮ ಜಮೀನಿದೆ. ನಮಗೆ ಬಿತ್ತನೆ ಮಾಡಲು ಅರಣ್ಯ ಇಲಾಖೆಯಿಂದ
ಕಿರಿಕಿರಿ ಉಂಟಾಗುತ್ತಿದೆ. ನಮ್ಮ ಜಮೀನಿನ ಬದಲಿಗೆ ಪರ್ಯಾಯ ಜಮೀನು ನೀಡಿದರೆ ಹೆಚ್ಚಿನ ಅನುಕೂಲವಾಗುತ್ತದೆ.
ಶಿವಪ್ಪ ಡೊಳ್ಳಿ, ಹಲಗಲಿಯ ಯಡಹಳ್ಳಿ
ಚೀಂಕಾರ ರಕ್ಷಿತಾರಣ್ಯದಲ್ಲಿ ಜಮೀನು ಹೊಂದಿದ ರೈತ
ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿ ಜಮೀನು ಹೊಂದಿರುವ ರೈತರ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಿ ಪರ್ಯಾಯ ಮಾರ್ಗದ ಕುರಿತು ಕ್ರಮ ಕೈಗೊಳ್ಳಲಾಗುವುದು.
ರುಥೈನ್, .ಪಿ., ಡಿಎಫ್ಒ, ಬಾಗಲಕೋಟ
*ಗೋವಿಂದಪ್ಪ ತಳವಾರ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.