ನಡುಗಡ್ಡೆ ಸ್ಥಳಾಂತರಕ್ಕೆ ಆಗ್ರಹ


Team Udayavani, Dec 18, 2019, 12:14 PM IST

bk-tdy-4

ಬಾಗಲಕೋಟೆ: ಆಲಮಟ್ಟಿ ಜಲಾಯಶವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ಸಂಪೂರ್ಣ ನಡುಗಡ್ಡೆಯಾಗಿ ಸಂಪರ್ಕ ಕಳೆದುಕೊಳ್ಳುವ ನಗರದ ಕಿಲ್ಲಾ ಭಾಗದ ನಡುಗಡ್ಡೆ ಪ್ರದೇಶ ಸ್ಥಳಾಂತರಿಸಬೇಕು ಎಂದು ನಡುಗಡ್ಡೆ ಹೋರಾಟ ಸಮಿತಿ ಒತ್ತಾಯಿಸಿದೆ.

ಮಂಗಳವಾರ ಕೃಷ್ಣಾ ಮೇಲ್ದಂಡೆ ಯೋಜನೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಎನ್‌. ಜಯರಾಮ್‌ ಅವರಿಗೆ ಹೋರಾಟ ಸಮಿತಿಯಪದಾಧಿಕಾರಿಗಳು, ಸುಮಾರು 45ಕ್ಕೂ ಹೆಚ್ಚು ಸಂತ್ರಸ್ತರು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡರು. ನೂತನ ಆಯುಕ್ತರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ ಹೋರಾಟ ಸಮಿತಿ ಪದಾಧಿಕಾರಿಗಳು ಸಂತ್ರಸ್ತರು, ವಿವಿಧ ಸಮಸ್ಯೆ ಗಮನಕ್ಕೆ ತಂದರು.

ಈ ವೇಳೆ ಹೋರಾಟ ಸಮಿತಿಯ ಕಾರ್ಯದರ್ಶಿ ಅರವಿಂದ ಮುಚಖಂಡಿ ಮಾತನಾಡಿ, ನಡುಗಡ್ಡೆ ಪ್ರದೇಶದ ಸುಮಾರು 1120 ಮನೆಗಳು, ಇಡೀ ಬಾಗಲಕೋಟೆಯ ಸಂಪರ್ಕ ಕಳೆದುಕೊಳ್ಳಲಿವೆ. ಅವುಗಳನ್ನು ಮುಳುಗಡೆ ವ್ಯಾಪ್ತಿಗೆ ತಂದು ಸ್ಥಳಾಂತರಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ. ಬಿಟಿಡಿಎದಿಂದ ಈ ಪ್ರಕ್ರಿಯೆ ನಡೆಸಿತ್ತು. ಆದರೆ, ಜಲ ಸಂಪನ್ಮೂಲ ಇಲಾಖೆ, ಕಾರ್ಯ ಭಾರದ ಒತ್ತಡದ ನೆಪ ಹೇಳಿ, ನಡುಗಡ್ಡೆ ಸ್ಥಳಾಂತರ ಕಾರ್ಯವನ್ನು ಕೈಬಿಟ್ಟಿದೆ. ಇದರಿಂದ ಹಲವು ವರ್ಷಳಿಂದ ನಡೆದ ಹೋರಾಟಕ್ಕೆ ಜಲ ಸಂಪನ್ಮೂಲ ಇಲಾಖೆ ಮಾನ್ಯತೆ ನೀಡಿಲ್ಲ. ಈ ವಿಷಯದ ಸ್ವತಃ ಸ್ಥಳೀಯ ಶಾಸಕರ ಗಮನಕ್ಕೂ ಅಧಿಕಾರಿಗಳು ತಂದಿಲ್ಲ ಎಂದು ತಿಳಿಸಿದರು.

ಸಂತ್ರಸ್ತರಿಗೆ ಮುದ್ರಾಂಕ ಶುಲ್ಕ ವಿನಾಯಿತಿ ನಾಲ್ಕು ವರ್ಷಗಳ ಕಾಲ ಮಾತ್ರವಿದೆ. ವರ್ಷಗಳ ಗಡವು ತೆಗೆಯಬೇಕು. 1991ರಲ್ಲಿ ಬಾಗಲಕೋಟೆ ನಗರಸಭೆಗೆ ಸರ್ಕಾರ, ಲಿಖೀತ ಆದೇಶ ಹೊರಡಿಸಿ, ಮುಳುಗಡೆ ವ್ಯಾಪ್ತಿಗೆ ಬರುವ ಕಟ್ಟಡ, ಖಾಲಿ ನಿವೇಶನ ಸಹಿತ ನಗರದಲ್ಲಿ ಭೂ ಕಂದಾಯ ತೆರಿಗೆ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ, ಮುಳುಗಡೆ ವ್ಯಾಪ್ತಿಯ ಜಾಗೆಗೂ ಭೂ ಕಂದಾಯ ಹೆಚ್ಚಳ ಮಾಡಲಾಗಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಆದರೆ, ಇದನ್ನು ಜೆಓಡಿಸಿ, ಐಟಿಐ, ಡಿಪ್ಲೋಮಾ ಶಿಕ್ಷಣಕ್ಕೆ ಮಾತ್ರ ಸಿಮೀತಗೊಳಿಸಿದೆ. ಸರ್ಕಾರ ಶಿಕ್ಷಣ ಮೀಸಲಾತಿ ವ್ಯಾಖ್ಯಾನ ಬದಲಿಸಿ, ಎಲ್ಲ ರೀತಿಯ ಶಿಕ್ಷಣಕ್ಕೂ ಮೀಸಲಾತಿ ಕಲ್ಪಿಸಬೇಕು. ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಡುಗಡ್ಡೆ ಹೋರಾಟ ಸಮಿತಿಯ ಅಧ್ಯಕ್ಷ ಎ.ಎ. ದಂಡಿಯಾ, ಸಹ ಕಾರ್ಯದರ್ಶಿ ದೀಪಕ ಹಂಚಾಟೆ, ಪ್ರಮುಖರಾದ ವೀರಣ್ಣ ಹೊಸೂರ, ಅಶೋಕ ಘಾಟಗೆ ಉಪಸ್ಥಿತರಿದ್ದರು.

ಶಾಸಕರ ಭೇಟಿ: ಇದೇ ವೇಳೆ ಶಾಸಕ ಡಾ|ವೀರಣ್ಣ ಚರಂತಿಮಠ ಕೂಡ, ಯುಕೆಪಿ ನೂತನ ಆಯುಕ್ತ ಎನ್‌. ಜಯರಾಮ್‌ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಬರಮಾಡಿಕೊಂಡರು. ನಡುಗಡ್ಡೆ ಸಹಿತ ಸಂತ್ರಸ್ತರ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.