ನಡುಗಡ್ಡೆ ಸ್ಥಳಾಂತರಕ್ಕೆ ಆಗ್ರಹ
Team Udayavani, Dec 18, 2019, 12:14 PM IST
ಬಾಗಲಕೋಟೆ: ಆಲಮಟ್ಟಿ ಜಲಾಯಶವನ್ನು 519.60 ಮೀಟರ್ನಿಂದ 524.256 ಮೀಟರ್ಗೆ ಎತ್ತರಿಸಿದಾಗ ಸಂಪೂರ್ಣ ನಡುಗಡ್ಡೆಯಾಗಿ ಸಂಪರ್ಕ ಕಳೆದುಕೊಳ್ಳುವ ನಗರದ ಕಿಲ್ಲಾ ಭಾಗದ ನಡುಗಡ್ಡೆ ಪ್ರದೇಶ ಸ್ಥಳಾಂತರಿಸಬೇಕು ಎಂದು ನಡುಗಡ್ಡೆ ಹೋರಾಟ ಸಮಿತಿ ಒತ್ತಾಯಿಸಿದೆ.
ಮಂಗಳವಾರ ಕೃಷ್ಣಾ ಮೇಲ್ದಂಡೆ ಯೋಜನೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಎನ್. ಜಯರಾಮ್ ಅವರಿಗೆ ಹೋರಾಟ ಸಮಿತಿಯಪದಾಧಿಕಾರಿಗಳು, ಸುಮಾರು 45ಕ್ಕೂ ಹೆಚ್ಚು ಸಂತ್ರಸ್ತರು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡರು. ನೂತನ ಆಯುಕ್ತರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ ಹೋರಾಟ ಸಮಿತಿ ಪದಾಧಿಕಾರಿಗಳು ಸಂತ್ರಸ್ತರು, ವಿವಿಧ ಸಮಸ್ಯೆ ಗಮನಕ್ಕೆ ತಂದರು.
ಈ ವೇಳೆ ಹೋರಾಟ ಸಮಿತಿಯ ಕಾರ್ಯದರ್ಶಿ ಅರವಿಂದ ಮುಚಖಂಡಿ ಮಾತನಾಡಿ, ನಡುಗಡ್ಡೆ ಪ್ರದೇಶದ ಸುಮಾರು 1120 ಮನೆಗಳು, ಇಡೀ ಬಾಗಲಕೋಟೆಯ ಸಂಪರ್ಕ ಕಳೆದುಕೊಳ್ಳಲಿವೆ. ಅವುಗಳನ್ನು ಮುಳುಗಡೆ ವ್ಯಾಪ್ತಿಗೆ ತಂದು ಸ್ಥಳಾಂತರಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ. ಬಿಟಿಡಿಎದಿಂದ ಈ ಪ್ರಕ್ರಿಯೆ ನಡೆಸಿತ್ತು. ಆದರೆ, ಜಲ ಸಂಪನ್ಮೂಲ ಇಲಾಖೆ, ಕಾರ್ಯ ಭಾರದ ಒತ್ತಡದ ನೆಪ ಹೇಳಿ, ನಡುಗಡ್ಡೆ ಸ್ಥಳಾಂತರ ಕಾರ್ಯವನ್ನು ಕೈಬಿಟ್ಟಿದೆ. ಇದರಿಂದ ಹಲವು ವರ್ಷಳಿಂದ ನಡೆದ ಹೋರಾಟಕ್ಕೆ ಜಲ ಸಂಪನ್ಮೂಲ ಇಲಾಖೆ ಮಾನ್ಯತೆ ನೀಡಿಲ್ಲ. ಈ ವಿಷಯದ ಸ್ವತಃ ಸ್ಥಳೀಯ ಶಾಸಕರ ಗಮನಕ್ಕೂ ಅಧಿಕಾರಿಗಳು ತಂದಿಲ್ಲ ಎಂದು ತಿಳಿಸಿದರು.
ಸಂತ್ರಸ್ತರಿಗೆ ಮುದ್ರಾಂಕ ಶುಲ್ಕ ವಿನಾಯಿತಿ ನಾಲ್ಕು ವರ್ಷಗಳ ಕಾಲ ಮಾತ್ರವಿದೆ. ವರ್ಷಗಳ ಗಡವು ತೆಗೆಯಬೇಕು. 1991ರಲ್ಲಿ ಬಾಗಲಕೋಟೆ ನಗರಸಭೆಗೆ ಸರ್ಕಾರ, ಲಿಖೀತ ಆದೇಶ ಹೊರಡಿಸಿ, ಮುಳುಗಡೆ ವ್ಯಾಪ್ತಿಗೆ ಬರುವ ಕಟ್ಟಡ, ಖಾಲಿ ನಿವೇಶನ ಸಹಿತ ನಗರದಲ್ಲಿ ಭೂ ಕಂದಾಯ ತೆರಿಗೆ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ, ಮುಳುಗಡೆ ವ್ಯಾಪ್ತಿಯ ಜಾಗೆಗೂ ಭೂ ಕಂದಾಯ ಹೆಚ್ಚಳ ಮಾಡಲಾಗಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಆದರೆ, ಇದನ್ನು ಜೆಓಡಿಸಿ, ಐಟಿಐ, ಡಿಪ್ಲೋಮಾ ಶಿಕ್ಷಣಕ್ಕೆ ಮಾತ್ರ ಸಿಮೀತಗೊಳಿಸಿದೆ. ಸರ್ಕಾರ ಶಿಕ್ಷಣ ಮೀಸಲಾತಿ ವ್ಯಾಖ್ಯಾನ ಬದಲಿಸಿ, ಎಲ್ಲ ರೀತಿಯ ಶಿಕ್ಷಣಕ್ಕೂ ಮೀಸಲಾತಿ ಕಲ್ಪಿಸಬೇಕು. ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಡುಗಡ್ಡೆ ಹೋರಾಟ ಸಮಿತಿಯ ಅಧ್ಯಕ್ಷ ಎ.ಎ. ದಂಡಿಯಾ, ಸಹ ಕಾರ್ಯದರ್ಶಿ ದೀಪಕ ಹಂಚಾಟೆ, ಪ್ರಮುಖರಾದ ವೀರಣ್ಣ ಹೊಸೂರ, ಅಶೋಕ ಘಾಟಗೆ ಉಪಸ್ಥಿತರಿದ್ದರು.
ಶಾಸಕರ ಭೇಟಿ: ಇದೇ ವೇಳೆ ಶಾಸಕ ಡಾ|ವೀರಣ್ಣ ಚರಂತಿಮಠ ಕೂಡ, ಯುಕೆಪಿ ನೂತನ ಆಯುಕ್ತ ಎನ್. ಜಯರಾಮ್ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಬರಮಾಡಿಕೊಂಡರು. ನಡುಗಡ್ಡೆ ಸಹಿತ ಸಂತ್ರಸ್ತರ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.