ಮುಳುಗಡೆ ಜಿಲ್ಲೆಗೆ ಡೆಂಘೀ ಭೀತಿ; ಈವರೆಗೆ 226 ಜನರಿಗೆ ರೋಗ ದೃಢ

ನಗರ ಪ್ರದೇಶದಲ್ಲಿ ಹೆಚ್ಚು ಡೆಂಘೀ ಕಾಣಿಸಿಕೊಂಡಿದೆ

Team Udayavani, Dec 22, 2022, 4:17 PM IST

ಮುಳುಗಡೆ ಜಿಲ್ಲೆಗೆ ಡೆಂಘೀ ಭೀತಿ; ಈವರೆಗೆ 226 ಜನರಿಗೆ ರೋಗ ದೃಢ

ಬಾಗಲಕೋಟೆ: ಮುಳುಗಡೆ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಿಂದ ಡೆಂಘೀ ಸಾಂಕ್ರಾಮಿಕ ರೋಗದಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ನವ್ಹೆಂಬರ್‌ ಒಂದೇ ತಿಂಗಳಲ್ಲಿ ಬರೋಬ್ಬರಿ 53 ಜನರಿಗೆ ಈ ರೋಗ ದೃಢಪಟ್ಟಿದೆ.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಡೆಂಘೀ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಮೂಡಿಸಿದರೆ, ಅಸ್ವತ್ಛತೆಯ ಕಾರಣದಿಂದ ಅದು ಹರಡುತ್ತಲೇ ಇದೆ. ಕಳೆದ ಜನವರಿಯಿಂದ ನವ್ಹೆಂಬರ್‌ ಅಂತ್ಯದವರೆಗೆ ಒಟ್ಟು 226 ಜನರಿಗೆ ಡೆಂಘೀ ರೋಗ ಕಾಣಿಸಿಕೊಂಡಿದೆ.

ಜಿಲ್ಲಾ ಕೇಂದ್ರದಲ್ಲೇ ಹೆಚ್ಚು: ಈ ಸಾಂಕ್ರಾಮಿಕ ರೋಗ ಹಳ್ಳಿಗಳಿಗಿಂತ ಜಿಲ್ಲಾ ಕೇಂದ್ರವಾದ ಬಾಗಲಕೋಟೆ ನಗರ ಹಾಗೂ ನವನಗರದಲ್ಲೇ ಅತಿ ಹೆಚ್ಚು ಕಾಣಿಸಿಕೊಂಡಿದೆ. ಈ ಕುರಿತು ಈಚೆಗೆ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ಕೂಡ ನಡೆದಿದೆ. ನಗರ ಪ್ರದೇಶದಲ್ಲಿ ಹಳೇ ಟೈರ್‌ಗಳು, ಒಡೆದ ಮಡಿಕೆ ಹಾಗೂ ಮನೆ ಮೇಲ್ಛಾವಣಿಯಲ್ಲಿ ನೀರು ನಿಲ್ಲುವುದು ಸಾಮಾನ್ಯ. ಇದನ್ನು ಜನರು ಗಮನಿಸದೇ, ಸ್ವಚ್ಛತೆ ಮಾಡುವ ಗೋಜಿಗೂ ಹೋಗುವುದಿಲ್ಲ. ಹೀಗಾಗಿ ನಗರ ಪ್ರದೇಶದಲ್ಲಿ ಹೆಚ್ಚು ಡೆಂಘೀ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಹರಡದಿರಲು ಏನು ಮಾಡ್ಬೇಕು?: ಡೆಂಘೀ ಹರಡದಂತೆ ಸಾರ್ವಜನಿಕರು ತಮ್ಮ ಸುತ್ತಮುತ್ತಿಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ ಡೆಂಘೀ ಸೊಳ್ಳೆ ನಿಯಂತ್ರಣಕ್ಕಾಗಿ ತೊಟ್ಟಿ, ನೀರಿನ ಡ್ರಮ್‌, ಮಡಿಕೆಗಳಲ್ಲಿ ಸಂಗ್ರವಾಗಿರುವ ನೀರನ್ನು ಹೊರಹಾಕಬೇಕು. ಜನರು ತಮ್ಮ ಮನೆಯೊಳಗಿನ, ಹೊರಗಿನ ಮತ್ತು ಮೇಲ್ಛಾವಣಿ ಪ್ರತಿಯೊಂದು ನೀರಿನ ತೊಟ್ಟಿಗಳನ್ನು ತಪ್ಪದೇ ವಾರಕ್ಕೊಮ್ಮೆ ತೊಳೆದು ಸ್ವತ್ಛವಾಗಿಡಬೇಕು. ನಮ್ಮ ಮನೆ-ಸುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು.

ಡೆಂಘೀ ಹರಡುವ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಜನರು ತಮ್ಮ ಮನೆ ಕಿಟಕಿ-ಬಾಗಿಲು ಮುಚ್ಚಿರಬೇಕು. ಜೊತೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯುವ ಸಮಯದಲ್ಲಿ ಸೊಳ್ಳೆ ಪರದೆ ಬಳಸಬೇಕು. ಇದರಿಂದ ಈಡಿಸ್‌ ಸೊಳ್ಳೆ ಕಚ್ಚುವುದನ್ನು ಹಾಗೂ ಡೆಂಘೀ ಸಾಂಕ್ರಾಮಿಕ ರೋಗಕ್ಕೊಳಗಾಗುವುದನ್ನು ತಪ್ಪಿಸಿಕೊಳ್ಳಬಹುದು. ಮನೆಯಲ್ಲಿ ಬೇವಿನ ಸೊಪ್ಪಿನ ಹೊಗೆ ಹಾಕುವ ಮೂಲಕ ಈಡಿಸ್‌ ಸೊಳ್ಳೆ ನಿಯಂತ್ರಿಸುವ ಮೂಲಕ ಡೆಂಘೀ ಸಾಂಕ್ರಾಮಿಕ
ರೋಗದಿಂದ ಸುರಕ್ಷಿತವಾಗಿರಬೇಕು ಎಂಬುದು ಆರೋಗ್ಯ ಇಲಾಖೆ ಸಲಹೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.