ಎಚ್‌ಐವಿ ಪೀಡಿತರ ಮನೆ-ಮನೆಗೆ ಮಾತ್ರೆ ವಿತರಣೆ


Team Udayavani, Apr 26, 2020, 3:48 PM IST

ಎಚ್‌ಐವಿ ಪೀಡಿತರ ಮನೆ-ಮನೆಗೆ ಮಾತ್ರೆ ವಿತರಣೆ

ಬಾಗಲಕೋಟೆ:  ಕೋವಿಡ್ 19 ಮಹಾಮಾರಿಯ ಭೀತಿಯಿಂದಾಗಿ ಲಾಕ್‌ಡೌನ್‌ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಎ.ಆರ್‌.ಟಿ ಕೇಂದ್ರದ ತಂಡ ಜಿಲ್ಲೆಯ ಎಚ್‌.ಐ.ವಿ ಪೀಡಿತರ ಮನೆ ಮನೆಗೆ ತೆರಳಿ ಎಆರ್‌ಟಿ ಮಾತ್ರೆ ವಿತರಿಸಲಾಯಿತು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಚ್‌ಐವಿ ಸೋಂಕಿತರು ಎಆರ್‌ಟಿ ಕೇಂದ್ರಗಳಿಗೆ ಬರಲು ವಾಹನಗಳ ಸೌಲಭ್ಯ ಇಲ್ಲದ ಕಾರಣ ಹಾಗೂ ಮಾತ್ರೆಗಳನ್ನು ದಿನಂಪ್ರತಿ ಸಕಾಲದಲ್ಲಿ ತೆಗೆದುಕೊಳ್ಳದೇ ಹೋದಲ್ಲಿ ಎಚ್‌ಐವಿ ಸೋಂಕಿತರಲ್ಲಿ ರೋಗ ನಿರೋಧಕ ಶಕ್ತಿ ಕ್ಷೀಣಿಸುತ್ತಾ ಇನ್ನೀತರ ಅವಕಾಶವಾದಿ ಕಾಯಿಲೆಗಳಿಗೆ ಎಡೆಮಾಡಿ ಕೊಟ್ಟಂತಾಗುತ್ತದೆ.

ಈ ಕಾರಣದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಸ್ಪತ್ರೆ, ಚೈತನ್ಯ ಮಹಿಳಾ ಸಂಘ, ಡ್ಯಾಫೂ ಹಾಗೂ ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಜಿಲ್ಲಾ ಆಸ್ಪತ್ರೆಯ ಎಆರ್‌ಟಿ ಪ್ಲಸ್‌ ಕೇಂದ್ರದ ಸಿಬ್ಬಂದಿಗಳು ಸುಮಾರು 800 ಜನ ಎಚ್‌ಐವಿ ಪೀಡಿತರಿಗೆ ಎಆರ್‌ಟಿ ಮಾತ್ರೆಗಳನ್ನು ಬೈಕ್‌ ಹಾಗೂ ಇತರೆ ವಾಹನಗಳ ಮೂಲಕ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಲಾಯಿತು.

ಮಾತ್ರೆಗಳನ್ನು ವಿತರಿಸಲು ಜಿಲ್ಲಾ ಎಆರ್‌ಟಿ ಪ್ಲಸ್‌ ಕೇಂದ್ರದ ಎಲ್ಲ ಸಿಬ್ಬಂದಿಗಳು ಹಾಗೂ ಸಿಎಸ್‌ಸಿ ಯೋಜನೆಯ ಸಿಬ್ಬಂದಿಗಳು ಬೆಳಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ತಲುಪಿಸುವ ಕಾರ್ಯ ಮಾಡುತ್ತಿದೆ. ಇನ್ನು ಮಾತ್ರೆ ತಲುಪದಿದ್ದವರು ಎಆರ್‌ಟಿ ಕೇಂದ್ರಗಳಿಗೆ ಬಂದು ತೆಗೆದುಕೊಂಡು ಹೋಗಲು ಆಗದಿದ್ದಲ್ಲಿ ಹಿರಿಯ ಆಪ್ತ ಸಮಾಲೋಚಕ ಎಚ್‌.ಆರ್‌.ಮರ್ದಿ (ಮೊ:9448210159) ಇವರ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಲ್ಲಿ ತಮ್ಮ ಹತ್ತಿರದ ಕೇಂದ್ರಗಳಲ್ಲಿ ಮತ್ತು ಎಆರ್‌ಟಿ ಪ್ಲಸ್‌ ಕೇಂದ್ರದ ಸಿಬ್ಬಂದಿಗಳ ಮೂಲಕ ಮಾತ್ರೆ ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌.ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ, ನೋಡಲ್‌ ಅಧಿಕಾರಿ ಡಾ|ಚಂದ್ರಕಾಂತ  ಜವಳಿ, ಡ್ಯಾಪ್ಕೋ ಕಾರ್ಯಕ್ರಮ ಅಧಿಕಾರಿ ಡಾ| ಎ.ಬಿ.ಪಟ್ಟಣಶೆಟ್ಟಿ, ವೈದ್ಯಾಧಿಕಾರಿ ಡಾ| ಅನಿಲ ಮಳಗಿ ನೇತೃತ್ವದಲ್ಲಿ ಮಾತ್ರೆ ತಲುಪಿಸುವ ಕಾರ್ಯ ಮಾಡುತ್ತಿದ್ದು, ಎಚ್‌ಐವಿ ಪೀಡಿತರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಹಿರಿಯ ಆಪ್ತ ಸಮಾಲೋಚಕ ಎಚ್‌.ಆರ್‌. ಮರ್ದಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.