ಆಂಗ್ಲಭಾಷೆ ವ್ಯಾಮೋಹದಿಂದ ಮಾತೃ ಭಾಷೆ ಮರೆಯದಿರಿ
ಕರ್ನಾಟಕದ ಗಡಿಯನ್ನು ಸೈನಿಕರಂತೆ ಕಾಯಬೇಕಿದೆ
Team Udayavani, Dec 22, 2022, 4:30 PM IST
ಕುಳಗೇರಿ ಕ್ರಾಸ್: ಕನ್ನಡಿಗರು ಮೊದಲು ಕನ್ನಡ ಭಾಷೆ ಪ್ರೀತಿಸಿ-ಗೌರವಿಸಬೇಕು. ಪ್ರತಿಷ್ಠೆಗಾಗಿ ಆಂಗ್ಲಭಾಷೆ ವ್ಯಾಮೋಹದಿಂದ ಮಾತೃ ಭಾಷೆ ಮರೆಯುತ್ತಿರುವುದು ದುರ್ದೈವದ ಸಂಗತಿ ಎಂದು ಧಾರವಾಡ ಹಿರಿಯ ಸಾಹಿತಿ ಡಾ| ಚಂದ್ರಮೌಳಿ ನಾಯ್ಕರ ಅಭಿಪ್ರಾಯಪಟ್ಟರು.
ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನುಡಿ ವೈಭವ-2022 ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರ ವೈದ್ಯಕೀಯ, ಎಂಜಿನಿಯರಿಂಗ್ನಂತಹ ಹಲವಾರು ವೃತ್ತಿಪರ ಶಿಕ್ಷಣ ಕನ್ನಡ ಭಾಷೆಯಲ್ಲಿಯೇ ನೀಡುವ ಇಂಗಿತ ವ್ಯಕ್ತಪಡಿಸಿದ್ದು ಸಂತಸದ ಸಂಗತಿ. ಕನ್ನಡ ಬರೀ ಭಾಷೆಯಲ್ಲ, ಅದು ಬಹುದೊಡ್ಡ ಶಕ್ತಿ. ಮಹಾರಾಷ್ಟ್ರದವರು ಅನುಸರಿಸುತ್ತಿರುವ ಕುಹಕ ಬುದ್ಧಿಗೆ ಕನ್ನಡಿಗರೆಲ್ಲರೂ ಜಾತಿ-ಮತ-ಪಂಥ ಬಿಟ್ಟು ಒಂದಾಗಿ ಕರ್ನಾಟಕದ ಗಡಿಯನ್ನು ಸೈನಿಕರಂತೆ ಕಾಯಬೇಕಿದೆ ಎಂದು ಹೇಳಿದರು.
ಶಾಂತಲಿಂಗ ಶ್ರೀಗಳು ಸಾನ್ನಿಧ್ಯವಹಿಸಿ ಮಾತನಾಡಿ, ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಪರಿಣಾಮಕಾರಿಯಾಗಿ ಅಧ್ಯಯನ ಮಾಡಲು ಸಾಧ್ಯ. ಜೊತೆಗೆ ಮಾನವೀಯ ಮೌಲ್ಯ ಕಲಿಯಲು ಸಾಧ್ಯವಾಗುತ್ತದೆ. ಮಾತೃ ಭಾಷೆಯಲ್ಲಿ ಶಿಕ್ಷಣ ಕೊಡಿಸದಿದ್ದರೆ ಯಾವ ಮಗುವೂ ಜೀವನದಲ್ಲಿ ಪರಿಪೂರ್ಣನಾಗಲು ಸಾಧ್ಯವಿಲ್ಲ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ದಾನಯ್ಯ ಗಣಾಚಾರಿ ಹಾಗೂ ನರೇಗಲ್ಲಿನ ದತ್ತಾತ್ರೇಯ ಕುಲಕರ್ಣಿ ಅವರನ್ನು ಮಠದಿಂದ ಸತ್ಕರಿಸಲಾಯಿತು. ಗದುಗಿನ ದಿನಪತ್ರಿಕೆ ಹಂಚಿಕೆದಾರ ಪ್ರಭುಶಂಕರ ತಡಸದ ಮಠದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ದೇಣಿಗೆ ನೀಡಿದರು.
ಚೆನ್ನಬಸಪ್ಪ ಕಂಠಿ ಪ್ರಾಸ್ತಾವಿಕ ಮಾತನಾಡಿದರು. ಕುಡುಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರಗೌಡ ಪಾಟೀಲ, ಜಿ.ಕೆ. ಭದ್ರಗೌಡ್ರ, ದತ್ತಾತ್ರೇಯ ಕುಲಕರ್ಣಿ, ದಾನಯ್ಯ ಗಣಾಚಾರಿ ಮಾತನಾಡಿದರು.
ಈ ವೇಳೆ ಉಪನ್ಯಾಸಕ ಪ್ರೊ| ಪಿ.ಎಸ್. ಅಣ್ಣಿಗೇರಿ, ಪ್ರೊ| ಆರ್ .ಬಿ. ಪಾಟೀಲ, ಶಂಕ್ರಗೌಡ ಪಾಟೀಲ, ಸೋಮು ಹೊಂಗಲ್, ಶಂಕ್ರಗೌಡ ಶಿರಿಯಪ್ಪಗೌಡ್ರ, ಶಿವಪ್ಪ ಬೋಳಶೆಟ್ಟಿ, ಪ್ರೊ| ಎಂ.ಪಿ. ಖ್ಯಾತನಗೌಡ್ರ, ಉಪನ್ಯಾಸಕಿ ಪವಿತ್ರಾ ಎಸ್, ಅಶೋಕ ಬಂಡೆಪ್ಪನವರ ಇತರರಿದ್ದರು. ಪ್ರೊ| ಆರ್.ಬಿ. ಚಿನಿವಾಲರ ನಿರೂಪಿಸಿದರು. ಪ್ರೊ| ಆರ್.ಕೆ. ಐನಾಪೂರ ಸ್ವಾಗತಿಸಿದರು. ಮಹಾಂತೇಶ ಹಿರೇಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.