ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ
ಸಾಲ ಸೌಲಭ್ಯ ಕಲ್ಪಿಸಿ ಯುವಕರು ನವ ಉದ್ಯಮಿಗಳಾಗಲು ಪ್ರೇರಪಿಸಬೇಕಾಗಿದೆ
Team Udayavani, Sep 11, 2024, 5:09 PM IST
■ ಉದಯವಾಣಿ ಸಮಾಚಾರ
ಬಾಗಲಕೋಟೆ: ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸುವ ಪದ್ದತಿ ಬಿಟ್ಟು, ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು.
ಜಿ.ಪಂ. ಹಳೆಯ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಲೀಡ್ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ
ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಿ, ರೈತರ ಮಕ್ಕಳು ಶಿಕ್ಷಣ ಸಾಲ ಸೌಲಭ್ಯಕ್ಕಾಗಿ ಬಂದಲ್ಲಿ ನಿಯಮಾವಳಿಗಳು ಸ್ವಲ್ಪ ಸರಳವಾಗಿರಲಿ. ಯಾವ ಯಾವ ದಾಖಲೆಗಳನ್ನು
ಸಲ್ಲಿಸಬೇಕು ಎಂಬುದನ್ನು ಫಲಕಗಳಲ್ಲಿ ಪ್ರದರ್ಶಿಸಿ, ತಾಂತ್ರಿಕ ತೊಂದರೆಗಳಿದ್ದಲ್ಲಿ ತಿಳಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ
ಕಾರ್ಯನಿರ್ವಹಿಸಬೇಕು ಎಂದರು.
ಬ್ಯಾಂಕ್ಗಳಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆ ಇರುವುದು ಕೂಡ ಅರ್ಹ ಫಲಾನುಭವಿಗಳು ಪರದಾಡಲು ಒಂದು ಕಾರಣವಾಗಿದೆ. ಈ
ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಅ ಧಿಕಾರಿಗಳು ಬ್ಯಾಂಕ್ಗಳಿಗೆ ತೆರಳಿ ಆಸಕ್ತಿ ವಹಿಸಿ ವಿವಿಧ ಯೋಜನೆಯಡಿ ಸಿಗುವ ಸಾಲ ಸೌಲಭ್ಯ ದೊರಕಿಸಿಕೊಡಿ, ಸಣ್ಣಪುಟ್ಟ ಕಾರಣಕ್ಕೆ ತಡೆ ಹಿಡಿಯುವ ಕೆಲಸ ಮಾಡಬೇಡಿ ಎಂದು ವಿವಿಧ ನಿಗಮಗಳ ಅ ಕಾರಿಗಳನ್ನು ಎಚ್ಚರಿಸಿದರು.
ಇಂದಿನ ದಿನಮಾನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿರವದರಿಂದ ಯುವ ಸಮೂಹವನ್ನು ಸ್ವಯಂ ಉದ್ಯೋಗಕ್ಕೆ ಉತ್ತೇಜಿಸಬೇಕಾಗಿದೆ. ಕೃಷಿಗಿಂತ ಇತರೇ ಉದ್ಯಮಗಳತ್ತ ಒಲವು ತೋರುತ್ತಿರುವುದರಿಂದ ಗ್ರಾಮ
ಪಂಚಾಯ್ತಿಗಳಲ್ಲಿ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ಪ್ರಚಾರ ಪಡಿಸಿ ಸೂಕ್ತ ಮಾರ್ಗದರ್ಶನ ನೀಡಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಿ ಯುವಕರು ನವ ಉದ್ಯಮಿಗಳಾಗಲು ಪ್ರೇರಪಿಸಬೇಕಾಗಿದೆ ಎಂದರು.
ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಕೆನರಾ ಬ್ಯಾಂಕ್ನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ಅರ್ಜಿಗಳು ತಿರಸ್ಕೃತ
ಗೊಂಡಿದ್ದು, ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರು ಗಮನಹರಿಸಬೇಕು. ಯಾವ ಬ್ಯಾಂಕ್ನಲ್ಲಿ ಅರ್ಜಿಗಳು ಬಾಕಿ ಉಳಿದಿವೆಯೋ ಅವೆಲ್ಲವೂ ಮುಂದಿನ ಹದಿನೈದು ದಿನದೊಳಗಾಗಿ ವಿಲೇವಾರಿ ಆಗಬೇಕು. ಸ್ವ ಸಹಾಯ ಗುಂಪು ಗಳಿಗೆ ಸಾಲ ನೀಡಲು ಪ್ಯಾನ್ ಕಾರ್ಡ್ ಕಡ್ಡಾಯ ಅಂತ ಇರುವುದಿಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಬಾಗಲಕೋಟ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ರಾಜಕುಮಾರ ಹೂಗಾರ
ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.