![Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು](https://www.udayavani.com/wp-content/uploads/2024/07/team-india-1-415x229.jpg)
ನಾಡು-ನುಡಿ ಅಭಿವೃದ್ಧಿ ಕಾರ್ಯ ಪ್ರೋತ್ಸಾಹಿಸಿ
Team Udayavani, Sep 21, 2019, 10:00 AM IST
![bk-tdy-2](https://www.udayavani.com/wp-content/uploads/2019/09/bk-tdy-2-15-620x205.jpg)
ಬನಹಟ್ಟಿ: ಕನ್ನಡ ನಾಡು-ನುಡಿ ಅಭಿವೃದ್ಧಿಯ ಸಲುವಾಗಿ ಕಾರ್ಯ ಮಾಡುವ ಸಂಸ್ಥೆಗಳನ್ನು ಮತ್ತು ವ್ಯಕ್ತಿಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಿದಾಗ ಮಾತ್ರ ನಾಡು-ನುಡಿ ಬೆಳೆಯುತ್ತದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಸಮೀಪದ ಯಲ್ಲಟ್ಟಿಯಲ್ಲಿ ಶುಕ್ರವಾರ ನಡೆದ ಕೊಣ್ಣೂರು ನುಡಿ ಸಡಗರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ. ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಅಭಿರುಚಿಯನ್ನುಂಟು ಮಾಡುವ ಕಾರ್ಯ ಶ್ರೇಷ್ಠವಾದುದು. ಮುಂದಿನ ದಿನಗಳಲ್ಲಿ ಇಂಥ ಇನ್ನಷ್ಟು ಮಹತ್ವದ ಕಾರ್ಯಕ್ರಮಗಳಿಗೆ ಯಾವಾಗಲೂ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.
ನಿವೃತ್ತ ಉಪನ್ಯಾಸಕ ಫ್ರೋ ಜಿ.ಎಸ್. ವಡಗಾವಿ ಆಶಯ ನುಡಿಗಳನ್ನಾಡಿದರು. ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಡಾ| ಸಿದ್ಧರಾಮ ಮನಹಳ್ಳಿ, ಫ್ರೋ ಜಿ.ಎಸ್. ವಡಗಾವಿ ರಚಿಸಿದ ಆರವತ್ತು ಅರಳು ಮತ್ತು ಫ್ರೋ | ಎಸ್.ಎಂ. ದಾಶ್ಯಾಳ ರಚಿಸಿದ ಸಂತ ಕಬೀರದಾಸಕೃತಿಗಳನ್ನು ಲೋಕಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ಜಮಖಂಡಿಯ ವಿದ್ಯಾ ಭವನ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಪ್ರಶಸ್ತಿ ಮತ್ತು ಡಾ| ಚಂದ್ರಕಾಂತ ಪೋಕಳೆ ಅವರಿಗೆ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿದ್ಧಲಿಂಗ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ದೀಪಾ ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್. ನವಲಿಹಿರೇಮಠ, ಜಿ.ಎನ್. ಸನದಿ, ಬಿ.ಆರ್. ಪೊಲೀಸ್ ಪಾಟೀಲ, ಶಂಕರ ಜಾಲಿಗಿಡದ, ಗೋಪಾಲ ಭಟ್ಟಡ, ಡಾ| ಎಸ್. ಎಸ್.ಸುವರ್ಣಖಂಡಿ, ಶಂಕರ ಜುಂಜಪ್ಪನವರ, ಮಲ್ಲಿಕಾರ್ಜುನ ಕಕಮರಿ, ವೆಂಕಟೇಶ ನಿಂಗಸಾನಿ, ಬಸವರಾಜ ದಲಾಲ ಇದ್ದರು. ಪದ್ಮಪ್ರಿಯಾ ಕುಡಚಿ ನಾಡಗೀತೆ ಹಾಡಿದರು.
ಶಮಿಶಾ ನದಾಫ್ ಪ್ರಾರ್ಥಿಸಿದರು. ಫ್ರೋ ಬಸವರಾಜ ಕೊಣ್ಣೂರ ಸ್ವಾಗತಿಸಿದರು. ಫ್ರೋ ಚಂದ್ರಕಾಂತ ಹೊಸೂರ ನಿರೂಪಿಸಿದರು. ರಾಜೇಶ ನೋಟದ ವಂದಿಸಿದರು
ಟಾಪ್ ನ್ಯೂಸ್
![Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು](https://www.udayavani.com/wp-content/uploads/2024/07/team-india-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ](https://www.udayavani.com/wp-content/uploads/2024/06/sugar-factory-mudhol-150x95.jpg)
Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
![Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು](https://www.udayavani.com/wp-content/uploads/2024/07/team-india-1-150x83.jpg)
Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![1-mng-protest](https://www.udayavani.com/wp-content/uploads/2024/07/1-mng-protest-150x90.jpg)
Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.