Siddu Savadi ಉಭಯ ಪುರಸಭೆಗಳ ಸದಸ್ಯರ ಉಚ್ಚಾಟನೆ ನಿಶ್ಚಿತ
Team Udayavani, Aug 30, 2024, 6:33 PM IST
ರಬಕವಿ-ಬನಹಟ್ಟಿ : ಕಳೆದ ವಾರ ಮಹಾಲಿಂಗಪುರ ಹಾಗೂ ತೇರದಾಳ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ ಅನುಭವಿಸಿದ್ದರ ಹಿನ್ನೆಲೆಯಲ್ಲಿ ಸದಸ್ಯರ, ಮುಖಂಡರ ಹಾಗೂ ಶಾಸಕರ ಮಧ್ಯ ವಾಕ್ಸಮರ ನಡೆದು ಆರೋಪ ಪ್ರತ್ಯಾರೋಪಗಳು ನಡೆಯುತ್ತಲೇ ಇವೆ ಆದರೆ ಯಾರು ತಪ್ಪಿತಸ್ಥರೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.
ಈಗಾಗಲೇ ಮಹಾಲಿಂಗಪುರದ ಕೆಲ ಮುಖಂಡರು ಹಾಗೂ ಸದಸ್ಯರು ಸೇರಿ ಪಕ್ಷದ ಜಿಲ್ಲಾಧ್ಯಕ್ಷ ಶಾಂತಕುಮಾರ ಪಾಟೀಲರಿಗೆ ಮನವಿ ಸಲ್ಲಿಸಿ ಶಾಸಕರ ರಾಜೀನಾಮೆ ಹಾಗೂ ಉಚ್ಚಾಟನೆಗೆ ಪಟ್ಟು ಹಿಡಿದಿದ್ದರೆ ಇತ್ತ ಸದಸ್ಯರು ವಿಪ್ ಜಾರಿ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಸಿಲುಕಿದ ಕಾರಣ ಪಕ್ಷದಿಂದ ಉಚ್ಚಾಟನೆಯಾಗುವಂತಾಗಿದೆ.
ಈ ಕುರಿತು ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇರದಾಳ ಶಾಸಕ ಸಿದ್ದು ಸವದಿ, ಈಗಾಗಲೇ ತೇರದಾಳದಲ್ಲಿ ವಿಪ್ ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಹಾಗೂ ಮಹಾಲಿಂಗಪುರದ 7ಜನ ಬಿಜೆಪಿ ಸದಸ್ಯರನ್ನೊಳಗೊಂಡು ಪುರಸಭೆ ಸದಸ್ಯರ ಉಚ್ಚಾಟನೆಯಾಗಲಿದೆ. ಇಂದೇ ನೋಟಿಸ್ ಜಾರಿ ಮಾಡಿದ್ದಲ್ಲದೆ ಇನ್ನೆರಡು ದಿನಗಳಲ್ಲಿ ಪಕ್ಷದಿಂದ ವಜಾ ಮಾಡುವ ಕುರಿತು ಸವದಿ ಸ್ಪಷ್ಟಪಡಿಸಿದರು.
ಪಕ್ಷದ್ರೋಹಿಗಳಿಂದ ಕೈ ತಪ್ಪಿದ ಅಧಿಕಾರ: ಮಹಾಲಿಂಗಪುರ ಹಾಗೂ ತೇರದಾಳ ಎರಡೂ ಪುರಸಭೆಗಳಲ್ಲಿ ಕೆಲ ಪಕ್ಷದ್ರೋಹಿಗಳ ನಡೆಯಿಂದ ಸಮಸ್ಯೆ ಎದುರಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಇಂಥವರಿಗೆ ಅವಕಾಶವಿರುವುದಿಲ್ಲವೆಂಬ ಸಂದೇಶದಿಂದಲೇ ಪಕ್ಷದಿಂದ ವಜಾ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ಸವದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.